AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 09, 2023 | 9:07 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ಒಂದು ವಿಶೇಷ ರೈಲು ಸಂಚರಿಸಲಿವೆ. ಹುಬ್ಬಳ್ಳಿ ಮಾರ್ಗವಾಗಿ ಈ ರೈಲು ಸಂಚರಿಸಲಿವೆ. ಇನ್ನು ಬೆಂಗಳೂರಿನಿಂದ ಬೀದರ್​ಗೆ ಕಲಬುರಗಿ ಮಾರ್ಗವಾಗಿ ಒಂದು ರೈಲು ತೆರಳಲಿದೆ. ಬೆಂಗಳೂರಿನಿಂದ (ಯಶವಂತಪುರ) ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಇಷ್ಟೇ ಅಲ್ಲದೆ, ಕೆಲವು ರೈಲುಗಳಿಗೆ ಹೆಚ್ಚುವರಿ ಕೋಚ್​​ಗಳನ್ನು ಅಳವಡಿಸಲಾಗಿದೆ. 12079/80 ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್​​ಪ್ರೆಸ್​ಗೆ ಎರಡು ಹೆಚ್ಚುವರಿ ಕೋಚ್​​ಗಳು, 17307/ 17308 ಬಾಗಲಕೋಟೆ, ಮೈಸೂರು, ಬಸವ ಎಕ್ಸ್​​ಪ್ರೆಸ್​​ಗೆ ಹಾಗೂ 16593/94 ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲಿಗೆ ತಲಾ ಒಂದು ಕೋಚ್ ಸೇರಿಸಲಾಗುತ್ತಿದೆ. ಬೆಂಗಳೂರು-ಕಾರವಾರ ಮಧ್ಯೆ ಸಂಚರಿಸುವ 16595/96 ಸಂಖ್ಯೆಯ ರೈಲಿಗೂ ಹೆಚ್ಚುವರಿ ಕೋಚ್ ಅಳವಡಿಸಲಾಗುತ್ತಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳು ಭಾರೀ ದರ ಹೆಚ್ಚಳ ಮಾಡಿವೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ. ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಇದೇ ರೀತಿ ಹಲವು ಊರುಗಳಿಗೆ ತೆರಳುವ ಬಸ್​ಗಳ ದರ ದುಪ್ಪಟ್ಟಾಗಿವೆ. ಇದೇ ಸಂದರ್ಭದಲ್ಲಿ ವಿಶೇಷ ರೈಲು ಬಿಟ್ಟಿರುವುದು ಅನೇಕ ಮಂದಿಗೆ ಪ್ರಯೋಜನವಾಗಲಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Mon, 8 May 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ