AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 09, 2023 | 9:07 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ಒಂದು ವಿಶೇಷ ರೈಲು ಸಂಚರಿಸಲಿವೆ. ಹುಬ್ಬಳ್ಳಿ ಮಾರ್ಗವಾಗಿ ಈ ರೈಲು ಸಂಚರಿಸಲಿವೆ. ಇನ್ನು ಬೆಂಗಳೂರಿನಿಂದ ಬೀದರ್​ಗೆ ಕಲಬುರಗಿ ಮಾರ್ಗವಾಗಿ ಒಂದು ರೈಲು ತೆರಳಲಿದೆ. ಬೆಂಗಳೂರಿನಿಂದ (ಯಶವಂತಪುರ) ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಇಷ್ಟೇ ಅಲ್ಲದೆ, ಕೆಲವು ರೈಲುಗಳಿಗೆ ಹೆಚ್ಚುವರಿ ಕೋಚ್​​ಗಳನ್ನು ಅಳವಡಿಸಲಾಗಿದೆ. 12079/80 ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್​​ಪ್ರೆಸ್​ಗೆ ಎರಡು ಹೆಚ್ಚುವರಿ ಕೋಚ್​​ಗಳು, 17307/ 17308 ಬಾಗಲಕೋಟೆ, ಮೈಸೂರು, ಬಸವ ಎಕ್ಸ್​​ಪ್ರೆಸ್​​ಗೆ ಹಾಗೂ 16593/94 ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲಿಗೆ ತಲಾ ಒಂದು ಕೋಚ್ ಸೇರಿಸಲಾಗುತ್ತಿದೆ. ಬೆಂಗಳೂರು-ಕಾರವಾರ ಮಧ್ಯೆ ಸಂಚರಿಸುವ 16595/96 ಸಂಖ್ಯೆಯ ರೈಲಿಗೂ ಹೆಚ್ಚುವರಿ ಕೋಚ್ ಅಳವಡಿಸಲಾಗುತ್ತಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳು ಭಾರೀ ದರ ಹೆಚ್ಚಳ ಮಾಡಿವೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ. ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಇದೇ ರೀತಿ ಹಲವು ಊರುಗಳಿಗೆ ತೆರಳುವ ಬಸ್​ಗಳ ದರ ದುಪ್ಪಟ್ಟಾಗಿವೆ. ಇದೇ ಸಂದರ್ಭದಲ್ಲಿ ವಿಶೇಷ ರೈಲು ಬಿಟ್ಟಿರುವುದು ಅನೇಕ ಮಂದಿಗೆ ಪ್ರಯೋಜನವಾಗಲಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Mon, 8 May 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ