AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ

ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ.

Karnataka Election: ವಿಧಾನಸಭೆ ಚುನಾವಣೆಗೆ ವಿಶೇಷ ರೈಲು, ಹೆಚ್ಚುವರಿ ಕೋಚ್; ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
| Edited By: |

Updated on:May 09, 2023 | 9:07 AM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೊಂದೇ ದಿನ ಬಾಕಿ ಇದೆ. ಮತದಾನಕ್ಕೆ ಊರುಗಳಿಗೆ ತೆರಳುವವರಿಗಾಗಿ ನೈಋತ್ಯ ರೈಲ್ವೆ ಮೂರು ವಿಶೇಷ ರೈಲುಗಳನ್ನು ಘೋಷಿಸಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಕೋಚ್​ಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಬೆಂಗಳೂರು ಹಾಗೂ ಬೆಳಗಾವಿ ಮಧ್ಯೆ ಒಂದು ವಿಶೇಷ ರೈಲು ಸಂಚರಿಸಲಿವೆ. ಹುಬ್ಬಳ್ಳಿ ಮಾರ್ಗವಾಗಿ ಈ ರೈಲು ಸಂಚರಿಸಲಿವೆ. ಇನ್ನು ಬೆಂಗಳೂರಿನಿಂದ ಬೀದರ್​ಗೆ ಕಲಬುರಗಿ ಮಾರ್ಗವಾಗಿ ಒಂದು ರೈಲು ತೆರಳಲಿದೆ. ಬೆಂಗಳೂರಿನಿಂದ (ಯಶವಂತಪುರ) ಮುರುಡೇಶ್ವರಕ್ಕೆ ವಿಶೇಷ ರೈಲು ಸಂಚರಿಸಲಿದೆ.

ಇಷ್ಟೇ ಅಲ್ಲದೆ, ಕೆಲವು ರೈಲುಗಳಿಗೆ ಹೆಚ್ಚುವರಿ ಕೋಚ್​​ಗಳನ್ನು ಅಳವಡಿಸಲಾಗಿದೆ. 12079/80 ಬೆಂಗಳೂರು-ಹುಬ್ಬಳ್ಳಿ ಜನಶತಾಬ್ಧಿ ಎಕ್ಸ್​​ಪ್ರೆಸ್​ಗೆ ಎರಡು ಹೆಚ್ಚುವರಿ ಕೋಚ್​​ಗಳು, 17307/ 17308 ಬಾಗಲಕೋಟೆ, ಮೈಸೂರು, ಬಸವ ಎಕ್ಸ್​​ಪ್ರೆಸ್​​ಗೆ ಹಾಗೂ 16593/94 ಬೆಂಗಳೂರು ನಾಂದೇಡ್ ವಯಾ ರಾಯಚೂರು, ಯಾದಗಿರಿ ರೈಲಿಗೆ ತಲಾ ಒಂದು ಕೋಚ್ ಸೇರಿಸಲಾಗುತ್ತಿದೆ. ಬೆಂಗಳೂರು-ಕಾರವಾರ ಮಧ್ಯೆ ಸಂಚರಿಸುವ 16595/96 ಸಂಖ್ಯೆಯ ರೈಲಿಗೂ ಹೆಚ್ಚುವರಿ ಕೋಚ್ ಅಳವಡಿಸಲಾಗುತ್ತಿದೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಕರ್ನಾಟಕ ಚುನವಾಣೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ; ಪ್ರಯಾಣಿಕರ ಆಕ್ರೋಶ

ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಬೆಂಗಳೂರಿನಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ತೆರಳುವ ಖಾಸಗಿ ಬಸ್‌ಗಳು ಭಾರೀ ದರ ಹೆಚ್ಚಳ ಮಾಡಿವೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಬಸ್​ ದರ 800 ರೂ. ಇತ್ತು, ಈಗ 1800ಕ್ಕೆ ಏರಿಕೆಯಾಗಿದೆ. ಅದೇ ರೀತಿ 950ರೂ. ಇದ್ದ ಮಂಗಳೂರು ಟಿಕೆಟ್ ದರ ಇದೀಗ 2200ರೂ. ಆಗಿದೆ. ಇದೇ ರೀತಿ ಹಲವು ಊರುಗಳಿಗೆ ತೆರಳುವ ಬಸ್​ಗಳ ದರ ದುಪ್ಪಟ್ಟಾಗಿವೆ. ಇದೇ ಸಂದರ್ಭದಲ್ಲಿ ವಿಶೇಷ ರೈಲು ಬಿಟ್ಟಿರುವುದು ಅನೇಕ ಮಂದಿಗೆ ಪ್ರಯೋಜನವಾಗಲಿದೆ ಎನ್ನಲಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 pm, Mon, 8 May 23

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು