AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಭಾಷಣ; ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು

ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಭಾಷಣ; ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು
ಮುನಿರತ್ನ
ಗಣಪತಿ ಶರ್ಮಾ
|

Updated on: Apr 06, 2023 | 7:50 PM

Share

ಮುಖ್ಯಾಂಶಗಳು

  • ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ಮುನಿರತ್ನ ವಿರುದ್ಧ ಮತ್ತೊಂದು ಎಫ್​ಐಆರ್.
  • ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲು.
  • ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿಯೂ ಬುಧವಾರ ದಾಖಲಾಗಿತ್ತು ಇನ್ನೊಂದು ಎಫ್​ಐಆರ್.

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆಮಾಡುವಂಥ ಪ್ರಚೋದನಾಕಾರಿ ಭಾಷಣ ಸಚಿವರು ಮಾಡಿದ್ದರು. ತಮಿಳು ಭಾಷಿಕರನ್ನು ಎತ್ತಿಕಟ್ಟಿ ಹಲ್ಲೆ ಮಾಡಲು ಸೂಚನೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಸಚಿವ ಮುನಿರತ್ನ ಮಾಡಿದ್ದು ಎನ್ನಲಾದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದ ಆರ್​ಆರ್​ ನಗರ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದರು. ಇದರ ಮೇರೆಗೆ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ.

ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಮುನಿರತ್ನಗೆ ಜಾಲಹಳ್ಳಿ ಪೊಲೀಸರು ನೋಟಿಸ್‌ ನೀಡಿದ್ದಾರೆ.

ಇದನ್ನೂ ಓದಿ: Karnataka Elections 2023: ಕಂತೆ ಕಂತೆ ಹಣ ಸೊಂಟಕ್ಕೆ ಕಟ್ಟಿಕೊಂಡು ಬೈಕ್​ನಲ್ಲಿ ಸಾಗಾಟ; 7 ಲಕ್ಷ ರೂ. ಪೊಲೀಸರ ವಶಕ್ಕೆ

ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುನಿರತ್ನ ವಿರುದ್ಧ ಬುಧವಾರ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ‘ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ’ ಎಂದು ಕೋಮು ದ್ವೇಷದ ಹೇಳಿಕೆ ನೀಡಿ ಆ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಅಧಿಕಾರಿ ಮನೋಜ್‌ಕುಮಾರ್ ದೂರು ನೀಡಿದ್ದರು. ಇದರ ಆಧಾರದಲ್ಲಿ ಎಫ್​ಐಆರ್ ದಾಖಲಿಸಲಾಗಿತ್ತು.

ಕರ್ನಾಟಕ ವಿಧಾನಸಭಾ ಚುನಾಚವಣೆಯ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ