Karnataka Elections: ಮ್ಯಾಗಿ ಮಾದರಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ

ನೀವು ಈವಾಗ ವೋಟ್ ಮಾಡೋದಕ್ಕೆ ಸ್ವಲ್ಪ ಸಮಯ ತೆಗೆದಿಟ್ರೆ ಮುಂದೆ 5 ವರ್ಷ ಆರಾಮಾಗಿ ಇರಬಹುದು. ಜವಾಬ್ದಾರಿಯುತವಾಗಿರಿ, ನಿಮ್ಮ ಪ್ರತಿ ಮತವೂ ಅಮೂಲ್ಯ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಟ್ವೀಟ್ ಮಾಡಿದ್ದಾರೆ.

Karnataka Elections: ಮ್ಯಾಗಿ ಮಾದರಿಯಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ
ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯಿಂದ ವಿನೂತನ ಮತದಾನ ಜಾಗೃತಿ (ಎಡ ಚಿತ್ರ)
Follow us
|

Updated on:Apr 08, 2023 | 7:23 PM

ಬೆಂಗಳೂರು: ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವ ಮತ್ತು ಹಿಂದಿನ ಎರಡು ಚುನಾವಣೆಗಳಲ್ಲಿ ಮತದಾನ ಕಡಿಮೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಮುಖ್ಯ ಚುನಾವಣಾಧಿಕಾರಿಯೂ ಕಳವಳ ವ್ಯಕ್ತಪಡಿಸಿದ್ದರು. ಈ ನಡುವೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (Chief Electoral Officer of Karnataka) ಟ್ವಿಟರ್​ ಖಾತೆ ಮೂಲಕ ಮ್ಯಾಗಿ ಜಾಹಿರಾತು ಮಾದರಿಯಲ್ಲಿಯೇ ಮತದಾರರನ್ನು ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. “ನೀವು ಈವಾಗ ವೋಟ್ ಮಾಡೋದಕ್ಕೆ ಸ್ವಲ್ಪ ಸಮಯ ತೆಗೆದಿಟ್ರೆ ಮುಂದೆ 5 ವರ್ಷ ಆರಾಮಾಗಿ ಇರಬಹುದು. ಜವಾಬ್ದಾರಿಯುತವಾಗಿರಿ, ನಿಮ್ಮ ಪ್ರತಿ ಮತವೂ ಅಮೂಲ್ಯ.” ಎಂದು ಬರೆದು ಪೋಸ್ಟ್ ಹಂಚಿಕೊಂಡಿದ್ದಾರೆ.

ಪೋಸ್ಟ್​ನಲ್ಲಿ ಏನಿದೆ?; ವೋಟ್ 2 ಮಿನಿಟ್ ಟಾಸ್ಕ್ ಎಂದು ಪೋಸ್ಟ್​ನಲ್ಲಿ ಬರೆಯಲಾಗಿದೆ. ಈ ಮತದಾನದ ಜಾಗೃತಿ ಪೋಸ್ಟ್ ನೋಡಿದಾಗ ಮ್ಯಾಗಿ ಜಾಹೀರಾತು ನೋಡಿದಂತಾಗಬಹುದು. ಅದೇ ಮಾದರಿಯಲ್ಲಿ ಪೋಸ್ಟ್ ಸಿದ್ದಪಡಿಸಲಾಗಿದೆ.

ಇದನ್ನೂ ಓದಿ: Karnataka Election 2023: ಬುಧವಾರವೇ ಚುನಾವಣೆ ನಿಗದಿ ಮಾಡಿದ್ದೇಕೆ? ಇಲ್ಲಿದೆ ಕಾರಣ

ಕೆಲಸದಲ್ಲೇ ಬ್ಯುಸಿಯಾಗಿರುವ ಯುವ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಲು ಹೋಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ. ಬೆಂಗಳೂರಿನಲ್ಲಿ ಮತದಾನ ಪ್ರಮಾಣ ಕಡಿಮೆಯಾಗುತ್ತಿದ್ದು, ಹಿಂದಿನ ಎರಡು ಚುನಾವಣೆಗಳಲ್ಲಿ ಮತದಾನ ಕಡಿಮೆಯಾಗಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ನಗರ ಕ್ಷೇತ್ರಗಳಲ್ಲಿ 2018ರಲ್ಲಿ ಅತಿ ಕಡಿಮೆ ಮತದಾನವಾಗಿತ್ತು. ಇದು ರಾಜ್ಯದ ಒಟ್ಟಾರೆ ಮತದಾನ ಪ್ರಮಾಣ ಶೇ 72ಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿತ್ತು. 2013ರ ಚುನಾವಣೆಯಲ್ಲಿ ನಡೆದ ಮತದಾನಕ್ಕಿಂತಲೂ ಕಡಿಮೆಯಾಗಿತ್ತು.

ಮತದಾನದ ಪ್ರಮಾಣ ಕಡಿಮೆಯಾಗುತ್ತಿರುವ ಬಗ್ಗೆ ಇತ್ತೀಚೆಗೆ ಕಳವಳ ವ್ಯಕ್ತಪಡಿಸಿದ್ದ ಕೇಂದ್ರ ಚುನಾವಣಾ ಆಯೋಗದ (ECI) ಮುಖ್ಯ ಆಯುಕ್ತ ರಾಜೀವ್ ಕುಮಾರ್, ನಾವು ಹೆಚ್ಚಿನ ಸಂಖ್ಯೆಯ ವಿಶ್ವವಿದ್ಯಾನಿಲಯಗಳನ್ನು ಸಂಪರ್ಕಿಸಿದ್ದು, ಚುನಾವಣೆ ಪ್ರಕ್ರಿಯೆಗೆ ಸಂಬಂಧಿಸಿದ ಸಾಕ್ಷರತಾ ಕ್ಲಬ್‌ಗಳು ಮತ್ತು ಸ್ವಯಂಪ್ರೇರಿತ ಕಾರ್ಯಕ್ರಮಗಳಂತಹ ಜಾಗೃತಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದ್ದೇವೆ. ಜೊತೆಗೆ, ನಾವು ಐಟಿ ವಲಯವನ್ನು ಕೂಡ ಮತದಾನ ಜಾಗೃತಿಯಲ್ಲಿ ಭಾಗಿಯಾಗುವಂತೆ ವಿನಂತಿಸಿದ್ದೇವೆ. ಚುನಾವಣಾ ಜಾಗೃತಿ ನಿಟ್ಟಿನಲ್ಲಿ ಎಲೆಕ್​ಥಾನ್ ನಡೆಸುತ್ತಿರುವ ಐಐಎಸ್​ಸಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ಐಐಎಸ್​ಸಿ ಹೊರತುಪಡಿಸಿ ಐಐಟಿ ಕೂಡ ಆಯೋಗದ ಜೊತೆ ಕೈಜೋಡಿಸಿದೆ ಎಂದು ಅವರು ಹೇಳಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Sat, 8 April 23

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ