AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

YSV Datta: ವೈಎಸ್​ವಿ ದತ್ತಾ ಅವರಿಂದ ಜೆಡಿಎಸ್ ಪಕ್ಷಕ್ಕೆ ದೋಖಾ: ಕುಮಾರಸ್ವಾಮಿ ವಾಗ್ದಾಳಿ

ಕಾಂಗ್ರೆಸ್​ನಿಂದ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ಭರವಸೆಯ ಮೇಲೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ ಅವರಿಗೆ ಕೈ ಟಿಕೆಟ್ ಕೂಡ ತಪ್ಪಿದೆ. ಕಡೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಈ ನಡುವೆ ದತ್ತಾ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

YSV Datta: ವೈಎಸ್​ವಿ ದತ್ತಾ ಅವರಿಂದ ಜೆಡಿಎಸ್ ಪಕ್ಷಕ್ಕೆ ದೋಖಾ: ಕುಮಾರಸ್ವಾಮಿ ವಾಗ್ದಾಳಿ
ವೈಎಸ್​ವಿ ದತ್ತಾ ಮತ್ತು ಹೆಚ್​ ಡಿ ಕುಮಾರಸ್ವಾಮಿ
Rakesh Nayak Manchi
Rakesh Nayak Manchi|

Updated on: Apr 07, 2023 | 2:57 PM

Share

ಚಿಕ್ಕಮಗಳೂರು: ಕಾಂಗ್ರೆಸ್​ನಿಂದ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ಭರವಸೆಯ ಮೇಲೆ ಜೆಡಿಎಸ್ (JDS) ತೊರೆದು ಕಾಂಗ್ರೆಸ್ ಸೇರಿದ್ದ ವೈಎಸ್​ವಿ ದತ್ತಾ (YSV Datta) ಅವರಿಗೆ ಕೊನೇ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿದೆ. ಕಡೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಇವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಈ ನಡುವೆ ದತ್ತಾ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ. ಕಡೂರಿನಲ್ಲಿ 2-5 ಚೆಕ್ ತೆಗೆದುಕೊಳ್ಳುವುದಿಲ್ಲ, ಅದಕ್ಕೆ ನಾನು ಬಂದಿಲ್ಲ, ಆ ಚೆಕ್​ಗಳು ಎಷ್ಟು ಮನೆಯಲ್ಲಿ, ಎಲ್ಲೆಲ್ಲಿ ಇವೆಯೋ ಗೊತ್ತಿಲ್ಲ, ಆ ಚೆಕ್-ಹಣ ವಾಪಸ್ ಬರಲ್ಲ ಎಂದು ವ್ಯಂಗ್ಯವಾಡಿದರು.

ಚಿಕ್ಕಮಗಳೂರಿನ ಕಡೂರು ಕ್ಷೇತ್ರದಲ್ಲಿ ಮಾತನಾಡಿದ ಅವರು, ನಮ್ಮ ಹಳೇ ಲೀಡರ್ ನನ್ನ ಬಗ್ಗೆ ಬಹಳ ಚಾರ್ಜ್ ಮಾಡಿದ್ದಾರೆ, ಈಗ ಅದು ಬೇಡ. ವೈಎಸ್​ವಿ ದತ್ತಾ ಜೆಡಿಎಸ್​​ ಪಕ್ಷಕ್ಕೆ ದೋಖಾ ಮಾಡಿ ಹೋಗಿದ್ದಾರೆ. ಪಕ್ಷದ ವರಿಷ್ಠ ಹೆಚ್​​.ಡಿ.ದೇವೇಗೌಡರು ಸ್ವಂತ ಮಗನಿಗಿಂತ ಹೆಚ್ಚಾಗಿ ನೋಡಿಕೊಂಡರು. ವೈಎಸ್​ವಿ ದತ್ತಾರನ್ನು ಎಂಎಲ್​ಸಿ ಮಾಡದಿದ್ದರೆ ಕಡೂರು ಜನ ಗುರುತಿಸುತ್ತಿದ್ದರೇ? ಯಾರು ಇಲ್ಲದಾಗ ಪಕ್ಷದ ಗೌರವ ಉಳಿಸಲು ಧನಂಜಯ್ ಬಂದಿದ್ದಾರೆ ಎಂದರು. ಅಲ್ಲದೆ, ವಿಧಾನಸೌಧದಲ್ಲಿ 2ನೇ ಸೀಟಲ್ಲಿ ನನ್ನ ಪಕ್ಕ ಕೂರುತ್ತಿದ್ದರು. ನಾನು ಮಾಡಿದ ಅನ್ಯಾಯವಾದರೂ ಏನು? ಎಂದರು.

ಇದನ್ನೂ ಓದಿ: HD Kumaraswamy: ವರುಣಾದಲ್ಲಿ ಸಿದ್ದರಾಮಯ್ಯ ಗೆಲ್ಲಿಸಿಕೊಡಲು ಬಿಜೆಪಿ ನೆರವು; ಹೆಚ್​ಡಿ ಕುಮಾರಸ್ವಾಮಿ

ಕಾಂಗ್ರೆಸ್ ಟಿಕೆಟ್ ಸಿಗುತ್ತದೆ ಎಂದು ಬಹಳ ನಿರೀಕ್ಷೆಗಳೊಂದಿಗೆ ದತ್ತಾ ಜೆಡಿಎಸ್ ಬಿಟ್ಟುಬಂದಿದ್ದರು. ಅಂತಿಮವಾಗಿ ಕಾಂಗ್ರೆಸ್​, ಆನಂದ್​ ಅವರಿಗೆ ಮಣೆ ಹಾಕಿದೆ. ಟಿಕೆಟ್ ಆಕಾಂಕ್ಷಿಗಳಾಗಿ ಕಾಂಗ್ರೆಸ್ ಸೇರ್ಪಡೆಯಾದ ಎನ್ ವೈ ಗೋಪಾಲಕೃಷ್ಣ, ದೇವರಾಜ್, ಗುಬ್ಬಿ ಶ್ರೀನಿವಾಸ್, ಪುಟ್ಟಣ್ಣ, ಎಚ್ ನಾಗೇಶ್, ವೀರೇಂದ್ರ ಪಪ್ಪಿ, ಬಾಬುರಾವ್ ಚಿಂಚನಸೂರು, ಕಾಂತರಾಜು, ಎಂಸಿ ಸುಧಾಕರ್, ಕಿರಣ್ ಕುಮಾರ್ಗೆ ಟಿಕೆಟ್ ನೀಡಲಾಗಿದೆ. ಆದರೆ ಈ ಪೈಕಿ ವೈಎಸ್ ವಿ ದತ್ತಾ ಅವರು ಟಿಕೆಟ್ ‌ಆಕಾಂಕ್ಷಿ ಆಗಿದ್ದರೂ ಅವರಿಗೆ ಟಿಕೆಟ್ ಕೈತಪ್ಪಿದೆ.

ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಅವರ ಸಲಹೆಯಂತೆ ದತ್ತಾ ಕೈ ಪಡೆ ಸೇರಿದ್ದರು. ಆದರೆ ಟಿಕೆಟ್ ಕೈತಪ್ಪಿದ್ದು, ಇದಕ್ಕೆ ಕಾರಣ ಡಿಕೆ ಶಿವಕುಮಾರ್ ಜೊತೆಗಿನ ಒಳಮುನಿಸು ಎನ್ನಲಾಗುತ್ತಿದೆ. ಟಿಕೆಟ್ ಕೈ ತಪ್ಪಿದ ಬಗ್ಗೆ ನಿರಾಸೆ ವ್ಯಕ್ತಪಡಿಸಿರುವ ದತ್ತಾ ಅವರು, ಬೆಂಬಲಿಗರ ಸಭೆಯ ನಂತರ ತಮ್ಮ ನಿರ್ಧಾರವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ. ಒಂದೆಡೆ ರೇವಣ್ಣ ಮತ್ತು ಪ್ರಜ್ವಲ್ ಅವರು ದತ್ತಾ ಅವರನ್ನು ಮರಳಿ ಜೆಡಿಎಸ್​ಗೆ ಕರೆತರುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದೆಡೆ ದತ್ತಾ ಅವರು ಯಾವುದೇ ಪಕ್ಷಕ್ಕೆ ಸೇರದೆ ಪಕ್ಷೇತರವಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಅದಾಗ್ಯೂ, ಅವರು ಯಾವ ಕಡೆ ಹೆಜ್ಜೆ ಇಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ