AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ಅತಂತ್ರ ಫಲಿತಾಂಶದ ಭಯ: ಆಯ್ಕೆಯಾದ ಕೈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇಂದು ತಡರಾತ್ರಿ ಮೆಗಾ ಪ್ಲಾನ್​

ಕರ್ನಾಟಕ ವಿಧಾನಸಭೆ ಚುನಾವಣೋತ್ತರದ ಕೆಲವು ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ. ಹೀಗಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಳ್ಳುತ್ತಿದೆ.

ಕಾಂಗ್ರೆಸ್​ಗೆ ಅತಂತ್ರ ಫಲಿತಾಂಶದ ಭಯ: ಆಯ್ಕೆಯಾದ ಕೈ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇಂದು ತಡರಾತ್ರಿ ಮೆಗಾ ಪ್ಲಾನ್​
ಕಾಂಗ್ರೆಸ್
Rakesh Nayak Manchi
Rakesh Nayak Manchi|

Updated on:May 11, 2023 | 7:34 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಮುಕ್ತಾಯಗೊಂಡಿದೆ. ಚುನಾವಣೋತ್ತರವಾಗಿ ಪ್ರಕಟಗೊಂಡ ಕೆಲವು ಸಮೀಕ್ಷೆಗಳ (Exit Polls) ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿ ಅಧಿಕಾರ ಹಿಡಿಯಲಿದೆ. ಇನ್ನು ಕೆಲವು ಸಮೀಕ್ಷೆಗಳು, ಅತಂತ್ರ ಫಲಿತಾಂಶವನ್ನು ತೋರಿಸಿವೆ. ಒಂದೊಮ್ಮೆ ಅತಂತ್ರ ಫಲಿತಾಂಶ ಬಂದು ಆಪರೇಶನ್ ಕಮಲ ನಡೆದು ಕಾಂಗ್ರೆಸ್ (Congress) ಶಾಸಕರು ಬಿಜೆಪಿ ಸೇರಿದರೆ ನಮ್ಮ ಪಕ್ಷದ ಕಥೆ ಏನು ಎಂದು ಚಿಂತೆಗೊಳಲಾದ ಕಾಂಗ್ರೆಸ್ ನಾಯಕರು, ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಪ್ಲಾನ್ ಮಾಡಲು ಮುಂದಾಗಿದ್ದಾರೆ.

ಅತಂತ್ರ ಫಲಿತಾಂಶದ ಸಾಧ್ಯತೆ ಹಿನ್ನೆಲೆ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮುಂದಾದ ಕಾಂಗ್ರೆಸ್ ನಾಯಕರು, ಇಂದು ತಡರಾತ್ರಿ ಝೂಮ್ ಮೀಟಿಂಗ್ ಮಾಡಲಿದ್ದಾರೆ. ಈ ಆನ್​ಲೈನ್ ಸಭೆಯಲ್ಲಿ 224 ಅಭ್ಯರ್ಥಿಗಳ ಜೊತೆಗೂ ಮಾತುಕತೆ ನಡೆಸಲಾಗುತ್ತಿದ್ದು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ನಾಯಕರಿಗೂ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ.

ಕಾಂಗ್ರೆಸ್ ಪಕ್ಷಗೆ ಸ್ಪಷ್ಟ ಬಹುಮತ ಬಾರದಿದ್ದರೆ ಗೆದ್ದವರು ಯಾವುದೇ ಬೇರೆ ಪಕ್ಷದ ಆಮಿಷಗಳಿಗೆ ಒಳಗಾಗದಂತೆ ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಈ ಸಭೆ ನಡೆಸಲಾಗುತ್ತಿದ್ದು, ಈ ವೇಳೆ ಮುಂದಿನ ತಂತ್ರಗಾರಿಕೆ ಬಗ್ಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸೂಚ್ಯವಾಗಿ ಸೂಚನೆ ನೀಡಲಿದ್ದಾರೆ. ಒಂದೊಮ್ಮೆ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದರೆ ಕೈಗೊಳ್ಳಬೇಕಾದ ನಿರ್ಧಾರ ಬಗ್ಗೆಯೂ ಕೆಲವು ಸೂಚನೆಗಳನ್ನು ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Exit Polls 2023: ಕರ್ನಾಟಕ ಚುನಾವಣೋತ್ತರ ಸಮೀಕ್ಷೆ ಬಗ್ಗೆ ಯಾರು ಏನು ಹೇಳಿದರು? ಇಲ್ಲಿದೆ ಮಾಹಿತಿ

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಆದರೆ ಮತದಾನದ ನಂತರ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿವೆ. ಕೆಲವು ಸಮೀಕ್ಷೆಗಳು ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆಯನ್ನು ತೋರಿವೆ. ಇನ್ನಷ್ಟು ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೆ ಬರಬಹುದು ಎಂದು ತೋರಿಸಿವೆ. ಇನ್ನೂ ಕೆಲವು, ಕಳೆದ ಚುನಾವಣೆಯಂತೆ ಈ ಬಾರಿಯೂ ಅತಂತ್ರ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ತೋರಿಸಿವೆ.

ಚುನಾವಣೋತ್ತರ ಸಮೀಕ್ಷೆ ಬಹಿರಂಗದ ನಂತರ ಕಾಂಗ್ರೆಸ್ ನಾಯಕರು ಸರ್ಕಾರ ರಚಿಸುವ ವಿಶ್ವಾಸದಲ್ಲಿದೆ. ಇತ್ತ ಬಿಜೆಪಿ ನಾಯಕರೂ ಸಮೀಕ್ಷೆ ಏನೇ ಇರಲಿ, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಕಾದು ನೋಡಿರಿ ಎಂದು ಹೇಳುತ್ತಿದ್ದಾರೆ. ಇತ್ತ, ಜೆಡಿಎಸ್ ಸರ್ಕಾರ ರಚಿಸುವ ಬಗ್ಗೆ ಯಾವುದೇ ಮಾತನಾಡದಿದ್ದರೂ, ಅತಂತ್ರ ಫಲಿತಾಂಶ ಬಂದರೆ ಜೆಡಿಎಸ್ ಕಿಂಗ್ ಮೇಕರ್ ಆಗಲಿದೆ ಎಂದು ಸಮೀಕ್ಷೆಗಳು ತಿಳಿಸಿವೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:09 pm, Thu, 11 May 23

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ