AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi: ಮಳೆ ಲೆಕ್ಕಿಸದ ರಾಹುಲ್ ಗಾಂಧಿ; ಛತ್ರಿಯಡಿಯಲ್ಲೇ ಸಾಗಿತು ಚುನಾವಣಾ ಪ್ರಚಾರ

ರಸ್ತೆ ಮಾರ್ಗವಾಗಿ ಜೇವರ್ಗಿಗೆ ತೆರಳಿದ ರಾಹುಲ್ ಗಾಂಧಿ, ಸುರಿಯುವ ಮಳೆಯಲ್ಲೇ ಛತ್ರಿಯ ಆಸರೆಯೊಂದಿಗೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ್ದು ಕಂಡುಬಂತು.

Kalaburagi: ಮಳೆ ಲೆಕ್ಕಿಸದ ರಾಹುಲ್ ಗಾಂಧಿ; ಛತ್ರಿಯಡಿಯಲ್ಲೇ ಸಾಗಿತು ಚುನಾವಣಾ ಪ್ರಚಾರ
ರಾಹುಲ್ ಗಾಂಧಿ
Ganapathi Sharma
|

Updated on:Apr 28, 2023 | 5:13 PM

Share

ಕಲಬುರಗಿ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಪ್ರಯುಕ್ತ ರಾಜ್ಯದಾದ್ಯಂತ ಪ್ರಚಾರ ತೀವ್ರಗೊಳಿಸಿರುವ ರಾಹುಲ್ ಗಾಂಧಿ (Rahul Gandhi) ಅವರಿಗೆ ಕಲಬುರಗಿಯಲ್ಲಿ ಮಳೆ ಅಡ್ಡಿಯುಂಟುಮಾಡಿತು. ಪ್ರತಿಕೂಲ ಹವಾಮಾನದ ಕಾರಣ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ತೆರಳುವುದು ಸಾಧ್ಯವಾಗಲಿಲ್ಲ. ನಂತರ ರಸ್ತೆ ಮಾರ್ಗವಾಗಿ ಜೇವರ್ಗಿಗೆ ತೆರಳಿದ ರಾಹುಲ್ ಗಾಂಧಿ, ಸುರಿಯುವ ಮಳೆಯಲ್ಲೇ ಛತ್ರಿಯ ಆಸರೆಯೊಂದಿಗೆ ಮತದಾರರನ್ನು ಉದ್ದೇಶಿಸಿ ಮಾತನಾಡಿದ್ದು ಕಂಡುಬಂತು. ಜತೆಗಿದ್ದ ನಾಯಕರು ರಾಹುಲ್ ಗಾಂಧಿಗೆ ಕೊಡೆ ಹಿಡಿದು ಭಾಷಣ ಮಾಡಲು ಅನುವು ಮಾಡಿಕೊಟ್ಟರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮಳೆಯಿಂದ ಜನರಿಗೆ ಕಷ್ಟ ಆಗಿದೆ, ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಭಾಷಣ ಆರಂಭಿಸಿದ ರಾಹುಲ್ ಗಾಂಧಿ, ಕರ್ನಾಟಕದಲ್ಲಿರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಟೀಕಿಸಿದರು. ಕಮಿಷನ್​ ಬಗ್ಗೆ ಗುತ್ತಿಗೆದಾರರ ಸಂಘ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿತ್ತು. ಆದರೆ, ಭ್ರಷ್ಟಾಚಾರದ ವಿರುದ್ಧ ಅವರು ಕ್ರಮ ಕೈಗೊಳ್ಳಲಿಲ್ಲ. ನಾವು 150 ಸ್ಥಾನ ಗೆಲ್ಲುತ್ತೇವೆ, ಬಿಜೆಪಿ 40 ಸ್ಥಾನ ಗೆಲ್ಲುತ್ತದೆ. ಬಿಜೆಪಿ ಸರ್ಕಾರ ಸರಿಯಾಗಿ 371ಜೆ ಅನುಷ್ಠಾನಕ್ಕೆ ತರಲಿಲ್ಲ. ನಾವು ಅಧಿಕಾರಕ್ಕೆ ಬಂದ್ರೆ ಪ್ರತಿ ಗ್ರಾ.ಪಂ.ಗೆ 1 ಕೋಟಿ ರೂ. ಅನುದಾನ ನೀಡಲಿದ್ದೇವೆ. ನಾವು ಘೋಷಿಸಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. 40% ಸರ್ಕಾರದಿಂದ ಇಂತಹ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಮಧ್ಯೆ, ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಕುಷ್ಟಗಿಯಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿ ಕಾರ್ಯಕ್ರಮ ರದ್ದಾಗುವ ಸಾಧ್ಯತೆ ಇದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಆಯೋಜಿಸಿರುವ ಮಹಿಳಾ ಸಂವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಬೇಕಿತ್ತು. ಹವಾಮಾನ ವೈಪರೀತ್ಯದ ಹಿನ್ನಲೆಯಲ್ಲಿ ಹೆಲಿಕಾಪ್ಟರ್ ಹಾರಾಟ ಕಷ್ಟಸಾಧ್ಯವಾಗಿದ್ದರಿಂದ ರಾಹುಲ್ ಅಲ್ಲಿಗೆ ತೆರಳುವುದು ಅನುಮಾನವಾಗಿದೆ. ಇತ್ತ ಕುಷ್ಟಗಿಯಲ್ಲೂ ಮೋಡ ಕವಿದ ವಾತವರಣ ಇದೆ. ಹೀಗಾಗೇ ಕೊನೆ ಕ್ಷಣದಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮ ರದ್ದಾಗುವ ಸಾಧ್ಯತೆ.

ಇದನ್ನೂ ಓದಿ: ಜೆಡಿಎಸ್​ಗೆ ಮತ ನೀಡಿದರೆ ಬಿಜೆಪಿಗೆ ನೀಡಿದಂತೆಯೇ; ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಅಚ್ಚರಿಯ ಹೇಳಿಕೆ

ರಾಹುಲ್ ಗಾಂಧಿ ಅವರು ಗುರುವಾರ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಪ್ರಚಾರದಲ್ಲಿ ಭಾಗಿಯಾಗಿದ್ದರು. ಇದೇ ವೇಳೆ ಕಾಂಗ್ರೆಸ್ ತನ್ನ ಐದನೇ ಗ್ಯಾರಂಟಿ ಘೋಷಿಸಿತ್ತು. ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡುವುದಾಗಿ ರಾಹುಲ್ ಗಾಂಧಿ ಘೋಷಿಸಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Fri, 28 April 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್