AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pramod Muthalik: ಶ್ರೀಕಂಠೇಶ್ವರಸ್ವಾಮಿ ದೇಗುಲದ ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ಬಳಸುವುದು ನಿಯಮ ಬಾಹಿರ: ಪ್ರಮೋದ್ ಮುತಾಲಿಕ್

ಶ್ರೀಕಂಠೇಶ್ವರಸ್ವಾಮಿ ದೇಗುಲದ ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ಬಳಕೆಗೆ ಮುಂದಾಗಿರುವುದನ್ನು ಖಂಡಿಸಿದ ಪ್ರಮೋದ್ ಮುತಾಲಿಕ್, ಅಕ್ರಮ ಗೋಸಾಗಾಟಗಾರರ ಪರ ನಿಂತಿರುವ ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಬೇಲೂರಿನಲ್ಲಿ ರಥೋತ್ಸವ ವೇಳೆ ಕುರಾನ್ ಪಠಣಕ್ಕೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದರು. ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಏನು ಹೇಳಿದರು?

Pramod Muthalik: ಶ್ರೀಕಂಠೇಶ್ವರಸ್ವಾಮಿ ದೇಗುಲದ ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ಬಳಸುವುದು ನಿಯಮ ಬಾಹಿರ: ಪ್ರಮೋದ್ ಮುತಾಲಿಕ್
ಪ್ರಮೋದ್ ಮುತಾಲಿಕ್
Follow us
Rakesh Nayak Manchi
|

Updated on:Apr 05, 2023 | 9:11 PM

ಮೈಸೂರು: ಶ್ರೀಕಂಠೇಶ್ವರಸ್ವಾಮಿ ದೇಗುಲದ ಹುಂಡಿ ಹಣವನ್ನು ಶಾದಿಮಹಲ್ (Shadimahal) ನಿರ್ಮಾಣಕ್ಕೆ ಬಳಕೆಗೆ ಮುಂದಾಗಿದ್ದು ಖಂಡನೀಯ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ಬಳಕೆ ಮಾಡುವುದು ಸರಿಯಲ್ಲ. ಇದು ಧಾರ್ಮಿಕ ದತ್ತಿ ಇಲಾಖೆಯ ನಿಯಮಕ್ಕೆ ವಿರುದ್ಧವಾಗಿದೆ. ಯಾವುದೇ ಕಾರಣಕ್ಕೂ ದೇಗುಲದ ಹುಂಡಿ ಹಣ ಶಾದಿಮಹಲ್ ನಿರ್ಮಾಣಕ್ಕೆ ನೀಡಬಾರದು. ದೇವಾಲಯದ ಹುಂಡಿ ಹಣವನ್ನು ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೂ ಅಕ್ರಮವಾಗಿ ಗೋವು ಸಾಗಾಟ ಮಾಡಲಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ ಮುತಾಲಿಕ್, ಪುನೀತ್ ಕೆರೆಹಳ್ಳಿ ವಿರುದ್ಧ ಎಫ್​ಐಆರ್ ದಾಖಲಿಸಿರುವ ಕ್ರಮ ಸರಿಯಲ್ಲ. ವಿಪಕ್ಷ ನಾಯಕರು ಗೋಸಾಗಾಟ ಮಾಡುತ್ತಿದ್ದವರ ಪರ ನಿಂತಿದ್ದಾರೆ. ಅಕ್ರಮ ಗೋಸಾಗಾಟ ತಡೆಯಲು ಮುಂದಾದವರ ಪರ ನಿಲ್ಲಬೇಕು ಎಂದರು.

ಇದನ್ನೂ ಓದಿ: ಗೋ ಸಾಗಾಟ ವೇಳೆ ವ್ಯಕ್ತಿ ಅನುಮಾನಸ್ಪದ ಸಾವು: ರಾಜಸ್ಥಾನದಲ್ಲಿ ಪುನೀತ್ ‌ಕೆರೆಹಳ್ಳಿ ಬಂಧನ

ರಾಮನಗರದ ಕನಪುರದ ಸಾತನೂರು ಬಳಿ ಗೋ ಸಾಗಾಟ ವೇಳೆ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ‌ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 31 ರಂದು ಪುನೀತ್ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತದ್ದ ಕ್ಯಾಂಟರ್​ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಆದ್ರೆ, ಮಾರನೇ ದಿನ ಅಂದ್ರೆ ಏಪ್ರಿಲ್​ 1ರಂದು ಕ್ಯಾಂಟರ್​ನಲ್ಲಿದ್ದ ಇದ್ರೀಷ್ ಪಾಷ ಶವವಾಗಿ ಪತ್ತೆಯಾಗಿದ್ದರು. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಗ್ರಾಮದ ಬಳಿ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್ ಪಾಷ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಮೃತನ ಸಹೋದರ ಸಾತನೂರು ‌ಠಾಣೆಗೆ ಪುನೀತ್ ಕೆರೆಹಳ್ಳಿ ಸೇರಿದಂತೆ ಇತರರರ ವಿರುದ್ಧ ದೂರು ನೀಡಿದ್ದರು.

ರಥೋತ್ಸವ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ

ಹಾಸನ ಜಿಲ್ಲೆ ಬೇಲೂರಿನಲ್ಲಿ ರಥೋತ್ಸವ ವೇಳೆ ಕುರಾನ್ ಪಠಣ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದ ಮುತಾಲಿಕ್, ಜೆಡಿಎಸ್ ನಾಯಕರ ಒತ್ತಡಕ್ಕೆ ಮಣಿದು ಜಿಲ್ಲಾಡಳಿತವು ಅವಕಾಶ ಮಾಡಿಕೊಟ್ಟಿದೆ. ಚುನಾವಣೆ ದೃಷ್ಟಿಯಿಂದ ಕುರಾನ್ ಪಠಣಕ್ಕೆ ಒತ್ತಡ ಹೇರಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ. ಹಾಗಾಗಿ ಹಾಸನ ಜಿಲ್ಲಾಡಳಿತ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರಥೋತ್ಸವದ ಸಂದರ್ಭದಲ್ಲಿ, ರಥದ ಎದುರು ಖುರಾನ್​ ಪಠಣ ಮಾಡುವ ವಿಚಾರವಾಗಿ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು. ತೀವ್ರ ವಿರೋಧದ ನಡುವೆಯೂ ಬಿಗಿ ಪೊಲೀಸ್​ ಭದ್ರತೆ ನಡುವೆ ಸಂಪ್ರದಾಯದಂತೆ ದೇವಸ್ಥಾನದ ಮೆಟ್ಟಿಲಿನ ಸಮೀಪ, ದೊಡ್ಡಮೇದೂರು ಗ್ರಾಮದ ಸಯ್ಯದ್ ಸಜ್ಜಾದ್ ಭಾಷಾ ಖಾದ್ರಿ ಅವರು ಕುರಾನ್ ಪಠಣ ಮಾಡಿದ್ದಾರೆ. ಬಳಿಕ ಭಕ್ತರು ಚನ್ನಕೇಶವಸ್ವಾಮಿ ರಥವನ್ನು ಎಳೆದಿದ್ದಾರೆ. ಆದರೆ, ಕುರಾನ್​ ಪಠಣ ಮಾಡಿದ್ದಾರೋ ಅಥವಾ ಇಲ್ಲವೋ ಎಂಬುವುದು ಸ್ಪಷ್ಟವಾಗಿಲ್ಲ. ಈ ಬಾರಿ ರಥದ ಬದಲಿಗೆ ದೇಗುಲದ ಮೆಟ್ಟಿಲು ಮೇಲೆ ನಿಂತು ಖುರಾನ್ ಓದಲು ಅವಕಾಶ ಮಾಡಿಕೊಡಲಾಗಿತ್ತು.

ಕಾರ್ಕಳ ಕ್ಷೇತ್ರದಿಂದಲೇ ಸ್ಪರ್ಧೆ: ಪ್ರಮೋದ್ ಮುತಾಲಿಕ್

ಸಚಿವ ಸುನಿಲ್ ಕ್ಷೇತ್ರವಾಗಿರುವ ಉಡುಪಿ ಜಿಲ್ಲೆ ಕಾರ್ಕಳ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುವುದಾಗಿ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ. ಹಿಂದುತ್ವದ ರಕ್ಷಣೆ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಲು ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕಾರ್ಕಳ ಕ್ಷೇತ್ರದಲ್ಲಿ ನನಗೆ ನಿಶ್ಚಿತವಾಗಿಯೂ ಗೆಲುವು ಸಿಗಲಿದೆ. ಶಿಷ್ಟರ ರಕ್ಷಣೆಯಾಗಲಿ, ದುಷ್ಟರಿಗೆ ಶಿಕ್ಷೆಯಾಗಲಿ ಎಂದು ಬೇಡಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಹೋಗಿ ಆಶೀರ್ವಾದ ಪಡೆದುಕೊಂಡು ಹೋಗಲು ಬಂದಿದ್ದೇನೆ ಎಂದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Wed, 5 April 23

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ