AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 CVoter Exit Poll: ಟಿವಿ9 ಸಿವೋಟರ್ ಎಕ್ಸಿಟ್​ ಪೋಲ್​ ಪ್ರಕಟ; ಯಾವ ಪಕ್ಷಕ್ಕೆ ಹೆಚ್ಚು ಸ್ಥಾನ? ಇಲ್ಲಿದೆ ವಿವರ

TV9-CVoter exit-poll Result 2023: ರಾಜ್ಯ ವಿಧಾನಸಭಾ ಚುನಾವಣೆ ಪ್ರಯುಕ್ತ ಎಲ್ಲ 224 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬುಧವಾರ ಸಂಜೆ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಟಿವಿ9 ಸಿವೋಟರ್ ಮತಗಟ್ಟೆ ಸಮೀಕ್ಷೆ ಪ್ರಕಟವಾಗಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ದೊರೆತಿದೆ? ಯಾವ ಪ್ರದೇಶದಲ್ಲಿ ಯಾವ ಪಕ್ಷ ಪ್ರಾಬಲ್ಯ ಸಾಧಿಸಿದೆ ಇತ್ಯಾದಿ ವಿವರಗಳು ಇಲ್ಲಿವೆ.

TV9 CVoter Exit Poll: ಟಿವಿ9 ಸಿವೋಟರ್ ಎಕ್ಸಿಟ್​ ಪೋಲ್​ ಪ್ರಕಟ; ಯಾವ ಪಕ್ಷಕ್ಕೆ ಹೆಚ್ಚು ಸ್ಥಾನ? ಇಲ್ಲಿದೆ ವಿವರ
ಬೊಮ್ಮಾಯಿ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ
Ganapathi Sharma
|

Updated on:May 10, 2023 | 7:38 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections 2023) ಪ್ರಯುಕ್ತ ಎಲ್ಲ 224 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಬುಧವಾರ ಸಂಜೆ ಮುಕ್ತಾಯಗೊಂಡಿದೆ. ರಾಜ್ಯದಾದ್ಯಂತ ಸಂಜೆ 5 ಗಂಟೆ ವರೆಗಿನ ಲೆಕ್ಕಾಚಾರ ಪ್ರಕಾರ ಶೇ 65.69 ರಷ್ಟು ಮತದಾನವಾಗಿದೆ. ಇದರ ಬೆನ್ನಲ್ಲೇ ಟಿವಿ9 ಸಿವೋಟರ್ ಮತಗಟ್ಟೆ ಸಮೀಕ್ಷೆ ಪ್ರಕಟವಾಗಿದೆ. ಮತಗಟ್ಟೆ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ದೊರೆತಿದೆ? ಯಾವ ಪ್ರದೇಶದಲ್ಲಿ ಯಾವ ಪಕ್ಷ ಪ್ರಾಬಲ್ಯ ಸಾಧಿಸಿದೆ ಇತ್ಯಾದಿ ವಿವರಗಳು ಇಲ್ಲಿವೆ.

ಟಿವಿ9 ಸಿವೋಟರ್ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್​​ಗೆ 100 ರಿಂದ 112 ಸ್ಥಾನ ದೊರೆಯುವ ನಿರೀಕ್ಷೆ ಇದ್ದು, ಬಿಜೆಪಿಗೆ 83 ರಿಂದ 95 ಹಾಗೂ ಜೆಡಿಎಸ್​​ಗೆ 21 ರಿಂದ 29 ಸ್ಥಾನಗಳು ದೊರೆಯುವ ಸಾಧ್ಯತೆ ಇದೆ. ಇತರರು 2 ರಿಂದ 6 ಸ್ಥಾನ ಪಡೆಯುವ ನಿರೀಕ್ಷೆ ಇದೆ ಎಂದು ಸಮೀಕ್ಷಾ ವರದಿ ತಿಳಿಸಿದೆ. ಕಾಂಗ್ರೆಸ್ ಪಕ್ಷವು ಶೇ 41.1 ರಷ್ಟು ಮತ ಹಂಚಿಕೆ ಪಡೆದಿದೆ. ಕಳೆದ ಬಾರಿ ಪಕ್ಷಕ್ಕೆ ಶೇ 38 ರಷ್ಟು ಮತ ಹಂಚಿಕೆ ಪಡೆದಿತ್ತು. ಇದರೊಂದಿಗೆ ಪಕ್ಷದ ಮತ ಹಂಚಿಕೆ ಪ್ರಮಾಣ ಶೇ 3.1 ರಷ್ಟು ಹೆಚ್ಚಾದಂತಾಗಿದೆ. ಬಿಜೆಪಿ ಕಳೆದ ಚುನಾವಣೆಯಲ್ಲಿ ಶೇ 36ರಷ್ಟು ಮತ ಪಡೆದಿದ್ದರೆ ಈ ಬಾರಿ ಶೇ 38.3 ಮತ ಹಚಿಕೆ ಪಡೆದಿದೆ. ಜೆಡಿಎಸ್ ಮತ ಹಂಚಿಕೆ ಪ್ರಮಾಣ ಶೇ 18 ಇದ್ದುದು ಶೇ 14.6ಕ್ಕೆ ಇಳಿಕೆಯಾಗಿದೆ. ಇತರರ ಮತ ಹಂಚಿಕೆ ಪ್ರಮಾಣವೂ ಶೇ 8 ರಿಂದ 6ಕ್ಕೆ ಇಳಿಕೆಯಾಗಿದೆ.

ಮತಗಟ್ಟೆ ಸಮೀಕ್ಷೆಯ ಪ್ರಾದೇಶಿಕ (ಅಂದಾಜು) ವಿವರ ಇಲ್ಲಿದೆ;

ಕೇಂದ್ರ ಕರ್ನಾಟಕದಲ್ಲಿ ಯಾರಿಗೆ ಬಲ?

ಪಕ್ಷ ಕನಿಷ್ಠ ರಿಂದ ಗರಿಷ್ಠ
ಕಾಂಗ್ರೆಸ್ 18 ರಿಂದ 22
ಬಿಜೆಪಿ 12 ರಿಂದ 16
ಜೆಡಿಎಸ್ 0 ರಿಂದ 2
ಇತರರು 0 ರಿಂದ 1

ಕರವಾಳಿ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ

ಪಕ್ಷ ಕನಿಷ್ಠ ರಿಂದ ಗರಿಷ್ಠ
ಕಾಂಗ್ರೆಸ್ 2 ರಿಂದ 6
ಬಿಜೆಪಿ 15 ರಿಂದ 19
ಜೆಡಿಎಸ್ 0 ರಿಂದ 0
ಇತರರು 0 ರಿಂದ 0

ಗ್ರೇಟರ್ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ

ಪಕ್ಷ ಕನಿಷ್ಠ ರಿಂದ ಗರಿಷ್ಠ
ಕಾಂಗ್ರೆಸ್ 11 ರಿಂದ 15
ಬಿಜೆಪಿ 15 ರಿಂದ 19
ಜೆಡಿಎಸ್ 1 ರಿಂದ 4
ಇತರರು 0 ರಿಂದ 1

ಹೈದರಾಬಾದ್ ಕರ್ನಾಟಕದಲ್ಲಿಯೂ ಪ್ರಬಲ ಪೈಪೋಟಿ

ಪಕ್ಷ ಕನಿಷ್ಠ ರಿಂದ ಗರಿಷ್ಠ
ಕಾಂಗ್ರೆಸ್ 13 ರಿಂದ 17
ಬಿಜೆಪಿ 11 ರಿಂದ 15
ಜೆಡಿಎಸ್ 0 ರಿಂದ 2
ಇತರರು 0 ರಿಂದ 3

ಮುಂಬೈ ಕರ್ನಾಟಕದಲ್ಲಿ ಬಿಜೆಪಿಗೆ ಮುನ್ನಡೆ

ಪಕ್ಷ ಕನಿಷ್ಠ ರಿಂದ ಗರಿಷ್ಠ
ಕಾಂಗ್ರೆಸ್ 22 ರಿಂದ 26
ಬಿಜೆಪಿ 24 ರಿಂದ 28
ಜೆಡಿಎಸ್ 0 ರಿಂದ 1
ಇತರರು 0 ರಿಂದ 0

ಹಳೆ ಮೈಸೂರಿನಲ್ಲಿ ಯಾರಿಗೆ ಬಲ?

ಪಕ್ಷ ಕನಿಷ್ಠ ರಿಂದ ಗರಿಷ್ಠ
ಕಾಂಗ್ರೆಸ್ 28 ರಿಂದ 32
ಬಿಜೆಪಿ 0 ರಿಂದ 4
ಜೆಡಿಎಸ್ 19 ರಿಂದ 23
ಇತರರು 0 ರಿಂದ 3

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Wed, 10 May 23

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು