AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಣೇಬೆನ್ನೂರು: ಸ್ಟೀಲ್ ಬುಟ್ಟಿಯಲ್ಲಿ 10 ಸಾವಿರ ನಾಣ್ಯ ತಂದಿಟ್ಟ ಎಎಪಿ ಅಭ್ಯರ್ಥಿ, ಚುನಾವಣಾಧಿಕಾರಿಗಳು ಬೇಸ್ತು!

ನಾಮಪತ್ರ ಸಲ್ಲಿಕೆ ವೇಳೆ ಠೇವಣಿ ಇಡಲು ಅಭ್ಯರ್ಥಿಯೊಬ್ಬರು ರಾಶಿ ರಾಶಿ ನಾಣ್ಯಗಳನ್ನು ತಂದು ಮುಂದಿಟ್ಟಿದ್ದರಿಂದ ಚುನಾವಣಾ ಅಧಿಕಾರಿಗಳು ಬೇಸ್ತು ಬಿದ್ದ ಅಪರೂಪದ ವಿದ್ಯಮಾನ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.

ರಾಣೇಬೆನ್ನೂರು: ಸ್ಟೀಲ್ ಬುಟ್ಟಿಯಲ್ಲಿ 10 ಸಾವಿರ ನಾಣ್ಯ ತಂದಿಟ್ಟ ಎಎಪಿ ಅಭ್ಯರ್ಥಿ, ಚುನಾವಣಾಧಿಕಾರಿಗಳು ಬೇಸ್ತು!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 17, 2023 | 7:55 PM

Share

ಮುಖ್ಯಾಂಶಗಳು

  • ನಾಮಪತ್ರ ಸಲ್ಲಿಕೆ ವೇಳೆ ಠೇವಣಿ ಇಡಲು ರಾಶಿ ರಾಶಿ ನಾಣ್ಯಗಳನ್ನು ತಂದ ಎಎಪಿ ಅಭ್ಯರ್ಥಿ
  • ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಅಪರೂಪದ ವಿದ್ಯಮಾನ
  • 10 ಸಾವಿರ ನಾಣ್ಯಗಳನ್ನು ಎಣಿಸಲು ಸುಸ್ತಾದ ಸಿಬ್ಬಂದಿ

ಹಾವೇರಿ: ನಾಮಪತ್ರ ಸಲ್ಲಿಕೆ ವೇಳೆ ಠೇವಣಿ ಇಡಲು ಅಭ್ಯರ್ಥಿಯೊಬ್ಬರು ರಾಶಿ ರಾಶಿ ನಾಣ್ಯಗಳನ್ನು ತಂದು ಮುಂದಿಟ್ಟಿದ್ದರಿಂದ ಚುನಾವಣಾ ಅಧಿಕಾರಿಗಳು ಬೇಸ್ತು ಬಿದ್ದ ಅಪರೂಪದ ವಿದ್ಯಮಾನ ಜಿಲ್ಲೆಯ ರಾಣೇಬೆನ್ನೂರಿನಲ್ಲಿ (Ranebennur) ನಡೆದಿದೆ. ಆಮ್ ಆದ್ಮಿ ಪಕ್ಷ(AAP) ಅಭ್ಯರ್ಥಿ ಹನುಮಂತಪ್ಪ ಕಬ್ಬಾರ ಅವರು ಸೋಮವಾರ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಠೇವಣಿ ಇಡುವುದಕ್ಕಾಗಿ ಅವರು ಕೂಡಿಟ್ಟ ನಾಣ್ಯಗಳೊಂದಿಗೆ ಬಂದಿದ್ದಾರೆ. 10 ಸಾವಿರ ರೂಪಾಯಿ ನಾಣ್ಯಗಳನ್ನೇ ಸ್ಟೀಲ್​ ಬುಟ್ಟಿಯಲ್ಲಿ ತುಂಬಿಕೊಂಡು ಬಂದಿದ್ದ ಅವರು, ಅದನ್ನು ಚುನಾವಣಾ ಅಧಿಕಾರಿಗಳ ಮುಂದಿಟ್ಟರು.

ಹನುಮಂತಪ್ಪ ಕಬ್ಬಾರ ತಂದಿಟ್ಟ ನಾಣ್ಯಗಳನ್ನು ಎಣಿಸುವಂತೆ ಚುನಾವಣಾಧಿಕಾರಿ ಇಬ್ರಾಹಿಂ ದೊಡ್ಡಮನಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ, 10 ಸಾವಿರ ನಾಣ್ಯಗಳನ್ನು ಎಣಿಸಲು ಸಿಬ್ಬಂದಿ ಸುಸ್ತಾದರು. ಕೊನೆಗೂ ಒಟ್ಟು ಲೆಕ್ಕ ಹಾಕಿ 10 ಸಾವಿರ ನಾಣ್ಯಗಳನ್ನು ಬ್ಯಾಂಕ್​ಗೆ ನೀಡಿ ಅದರ ಬದಲಾಗಿ ನೋಟು ತೆಗೆದುಕೊಂಡು ಬಂದರು.

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಡೆಯುತ್ತಿದೆ. ಈ ಬಾರಿ ಆಮ್ ಆದ್ಮಿ ಪಕ್ಷ ಕೂಡ ರಾಜ್ಯದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದು ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ.

ಆಮ್ ಆದ್ಮಿ ಪಕ್ಷಕ್ಕೆ ಕಳೆದ ವಾರವಷ್ಟೇ ರಾಷ್ಟ್ರೀಯ ಪಕ್ಷ ಮಾನ್ಯತೆ ನೀಡಿ ಕೇಂದ್ರ ಚುನಾವಣಾ ಆಯೋಗವು ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಹೊಸ ಹುರುಪಿನೊಂದಿಗೆ ಪಕ್ಷದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: AAP: ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದ ಕೇಂದ್ರ ಚುನಾವಣಾ ಆಯೋಗ

ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಆಮ್ ಆದ್ಮಿ ಪಕ್ಷ ಅದೃಷ್ಟ ಪರೀಕ್ಷೆಗೆ ಇಳಿದಿದೆ. ಮಂಗಳೂರು ನಗರ ದಕ್ಷಿಣ, ಮುಲ್ಕಿ-ಮೂಡಬಿದರೆ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮಂಗಳೂರು ನಗರ ದಕ್ಷಿಣ ದಿಂದ ಸಂತೋಷ್‌ ಕಾಮತ​​​, ಮುಲ್ಕಿ-ಮೂಡಬಿದರೆಯಿಂದ ವಿಜಯನಾಥ ವಿಠಲ ಶೆಟ್ಟಿ, ಸುಳ್ಯದಿಂದ ಸುಮನಾ ಸ್ಪರ್ಧಿಸುತ್ತಿದ್ದಾರೆ. 224 ಕ್ಷೇತ್ರದಲ್ಲೂ ನಮ್ಮ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಎಎಪಿ ಇತ್ತೀಚೆಗೆ ಘೋಷಿಸಿತ್ತು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್