Karnataka Polls: ವಿನೂತನ ಥೀಮ್ ಬೇಸ್ಡ್​​ ಮತಗಟ್ಟೆಗಳ ಸ್ಥಾಪನೆ, ಇನ್ನು ಕೆಲವು ಚುನಾವಣಾ ಸ್ವಾರಸ್ಯಕರ ಮಾಹಿತಿ

ಕರ್ನಾಟಕ ವಿಧಾನಸಭೆ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮತದಾರರನ್ನು ಸೆಳೆಯಲು ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ ಇತ್ಯಾದಿ, ವಿನೂತನ ಥೀಮ್ ಬೇಸ್ಡ್​​ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

Karnataka Polls: ವಿನೂತನ ಥೀಮ್ ಬೇಸ್ಡ್​​ ಮತಗಟ್ಟೆಗಳ ಸ್ಥಾಪನೆ, ಇನ್ನು ಕೆಲವು ಚುನಾವಣಾ ಸ್ವಾರಸ್ಯಕರ ಮಾಹಿತಿ
ವಿಶೇಷ ವಿನ್ಯಾಸವುಳ್ಳ ಮತಗಟ್ಟೆಗಳ ಸ್ಥಾಪನೆ
Follow us
| Updated By: Digi Tech Desk

Updated on:May 09, 2023 | 9:05 AM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಕೇವಲ ಒಂದು ಅಷ್ಟೇ ಬಾಕಿಯಿದ್ದು, ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮೇ 10 ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇದೇ ಮೊದಲ ಬಾರಿಗೆ ವಿಶೇಷ ಮತಗಟ್ಟೆಗಳನ್ನು ತೆರೆಯಲು ಚುನಾವಣಾ ಆಯೋಗ ನಿರ್ಧರಿಸಿತ್ತು. ಈ ಹಿನ್ನೆಲೆ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ವಿನೂತನ ಥೀಮ್ ಬೇಸ್ಡ್​​ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಪಿಂಕ್ ಮತಗಟ್ಟೆ, ಯುವ ಮತದಾರರ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿ ಮತಗಟ್ಟೆ, ಕ್ರೀಡಾ ಮತಗಟ್ಟೆಗಳೆಂಬ ವಿಶೇಷ ವಿನ್ಯಾಸದ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಮತದಾರರನ್ನು ಸೆಳೆಯಲಾಗುತ್ತಿದೆ.

ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಮತಗಟ್ಟೆಳು

ಚುನಾವಣಾ ಆಯೋಗದ ನಿರ್ದೇಶನದಂತೆ ಬುಡಕಟ್ಟು ಸಮುದಾಯಕ್ಕೆ ಪ್ರತ್ಯೇಕ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದವರಾದ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡುಕುರುಬ , ಜೇನುಕುರುಬ, ಕೊರಗ, ಮಲೈಕುಡಿ, ಸಿದ್ದಿ ಜನಾಂಗದ ಮತದಾರರಿಗಾಗಿ ಸಾಂಪ್ರದಾಯಿಕ ಮತಗಟ್ಟೆ ಸಿದ್ಧಪಡಿಸಲಾಗಿದೆ.

ಇದನ್ನೂ ಓದಿ: ಮತದಾನ ಮಾಡಿದವರಿಗೆ ಈ ಹೋಟೆಲ್​ನಲ್ಲಿ ಸಿಗಲಿದೆ ಉಚಿತ ತಿಂಡಿ, ಸಿನಿಮಾ ಟಿಕೆಟ್​: ಮತದಾರರಿಗೆ ಬಂಪರ್​ ಆಫರ್

ಚಾಮರಾಜನಗರ ಜಿಲ್ಲೆಯಲ್ಲಿ 9, ಉಡುಪಿ ಜಿಲ್ಲೆಯಲ್ಲಿ 1, ಕೊಡಗು ಜಿಲ್ಲೆಯಲ್ಲಿ 5, ಉತ್ತರ ಕನ್ನಡ ಜಿಲ್ಲೆಯಲ್ಲಿ 5, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ಮೈಸೂರು ಜಿಲ್ಲೆಯಲ್ಲಿ 9, ಶಿವಮೊಗ್ಗ ಜಿಲ್ಲೆಯಲ್ಲಿ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ 2 ಮತ್ತು ಹಾಸನ ಜಿಲ್ಲೆಯಲ್ಲಿ 1 ಮತಗಟ್ಟೆ ಸ್ಥಾಪಿಸಲಾಗಿದೆ.

ಚುನಾವಣಾ ಆಯೋಗದ ಬೇಡಿಕೆ ಹಿನ್ನೆಲೆ ಶಾಯಿ ಪೂರೈಕೆ 

ಚುನಾವಣೆಯ ಮತದಾನಕ್ಕೆ ಮೈಸೂರಿನಿಂದ ಅಳಿಸಲಾಗದ ಶಾಯಿ ಪೂರೈಕೆ ಮಾಡಲಾಗಿದೆ. ಮೈಸೂರು ಪೈಂಟ್ಸ್ ಮತ್ತು ವಾರ್ನಿಸ್ ಸಂಸ್ಥೆಯಿಂದ ಶಾಯಿ ಪೂರೈಕೆ ಮಾಡಲಾಗಿದೆ ಎಂದು ಟಿವಿ9ಗೆ ಮೈಲ್ಯಾಕ್ ಸಂಸ್ಥೆಯ ಎಂ.ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. 1937ರಲ್ಲಿ ನಾಲ್ವಡಿ‌ ಕೃಷ್ಣರಾಜ ಒಡೆಯರ್ ಅವರು ಈ ಸಂಸ್ಥೆ ಸ್ಥಾಪಿಸಿದ್ದಾರೆ. ಚುನಾವಣಾ ಆಯೋಗದ ಬೇಡಿಕೆ ಹಿನ್ನೆಲೆ 1 ಲಕ್ಷದ 20 ಸಾವಿರ ರೂ. ಬಾಟಲ್ ಪೂರೈಕೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಚುನಾವಣೆ ಯಾವಾಗ? ಮತದಾನ, ಫಲಿತಾಂಶದ ದಿನಾಂಕ ಇತರೆ ಮಾಹಿತಿ ಇಲ್ಲಿದೆ

1962ರಲ್ಲಿ ಆರಂಭವಾದ ಅಳಿಸಲಾಗದ ಶಾಯಿ ತಯಾರಿಕೆ, ಕೇವಲ ನಮ್ಮ ರಾಜ್ಯ ಮಾತ್ರವಲ್ಲ ಹೊರ ರಾಜ್ಯದ ಮತ್ತು ಬೇರೆ ದೇಶದ ಚುನಾವಣೆಗೂ ಇಲ್ಲಿಂದಲೇ ಶಾಯಿ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:06 pm, Mon, 8 May 23

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ