AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕರೆಗೆ ಮತದಾರರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ನಾವು ನಿರೀಕ್ಷಿಸಿದ ಫಲಿತಾಂಶ ದೊರೆಯುವ ಸೂಚನೆ ಸಿಕ್ಕಿದೆ -ಜೋಶಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ವಿವೇಕಾನಂದನಗರದ ರೋಟರಿ ಶಾಲೆಯಲ್ಲಿ ಮತ ಚಲಾಯಿಸಿದರು‌‌.

ಆಯೇಷಾ ಬಾನು
|

Updated on:May 10, 2023 | 12:03 PM

Share

ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಯ(Karnataka Assembly Elections 2023) ನಿಮಿತ್ತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು(Pralhad Joshi) ಇಂದು ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ವಿವೇಕಾನಂದನಗರದ ರೋಟರಿ ಶಾಲೆಯಲ್ಲಿ ಮತ ಚಲಾಯಿಸಿದರು‌‌. ತಮ್ಮ ಕುಟುಂಬದ ಸದಸ್ಯರ ಜೊತೆ ಬೆಳಗ್ಗೆಯೇ ಆಗಮಿಸಿ ಮತ ಚಲಾವಣೆ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನಂತರ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿ ಬೆಳಗ್ಗಿನಿಂದಲೇ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ಮತದಾನದ ಬಳಿಕ ಮಾತನಾಡಿದ ಅವರು, ಬೆಳಗ್ಗೆ 7 ಗಂಟೆಯಿಂದಲೇ ನಾನು ಮಾಹಿತಿ ಸಂಗ್ರಹಿಸುತ್ತಿದ್ದೇನೆ, ಕೆಲವು ಮಾದ್ಯಮಗಳಲ್ಲೂ ಗಮನಿಸುತ್ತಿದ್ದೇನೆ, ಅದ್ಭುತವಾದ ಪ್ರತಿಕ್ರಿಯೆ ಇದೆ. ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಜನರು ಭಾಗಿಯಾಗಬೇಕು ಹಾಗೂ ಪೂರ್ತಿ ಮೆಜಾರಿಟಿಯನ್ನು ನನಗೆ ಕೊಟ್ರೆ ನಾನು ಕರ್ನಾಟಕವನ್ನು ನಂಬರ್ ವನ್ ಮಾಡ್ತೇನೆ ಅಂತ ನಮ್ಮ ದೇಶದ ನೆಚ್ಚಿನ ಪ್ರಧಾನಮಂತ್ರಿಗಳು ಕರೆ ಕೊಟ್ಟಿದ್ದರು, ಅದಕ್ಕೆ ಬಹಳ ಅತ್ಯುತ್ತಮ ಪ್ರತಿಕ್ರಿಯೆ ಸಿಗ್ತಿದೆ.

ಇದನ್ನೂ ಓದಿ: Karnataka Assembly Polls: ಮಾಕೋನಹಳ್ಳಿಯ ವಧು ಪ್ರದರ್ಶಿಸಿರುವ ಬದ್ಧತೆ ಎಲ್ಲರಲ್ಲೂ ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನೂ ಗಟ್ಟಿಯಾಗುತ್ತದೆ!

ಸಾಮಾನ್ಯವಾಗಿ ಒಂದು ಫೀಲಿಂಗ್ ಇರುತ್ತೆ ಏನಂದ್ರೆ ಎಜುಕೇಟೆಡ್ ಜನ ಬೇಗ ಓಟಿಂಗ್ ಗೆ ಬರಲ್ಲ ಅಂತ, ಆದರೆ ಈ ಭಾಗದ ಹೆಚ್ಚಿನ ಪ್ರದೇಶ ಸುಶಿಕ್ಷಿತರು ಇರುವಂಥದ್ದು, ಇಲ್ಲಿ ಎಲ್ಲಾ ಬೂತ್ ಗಳಲ್ಲೂ ದೊಡ್ಡ ಸಂಖ್ಯೆಯಲ್ಲಿ ಬೆಳಗ್ಗೆ 7 ಗಂಟೆಗೆ ಎದ್ದು ಬಂದು ಮತದಾನ ಮಾಡ್ತಿದ್ದಾರೆ. ಇದು ನಮ್ಮ ಪಕ್ಷಕ್ಕೆ ಭಾರೀ ಬೆಂಬಲ ಸಿಗ್ತಿದೆ ಎಂಬುದರ ಸಂಕೇತ ಅಂತ ನಾನು ಭಾವಿಸ್ತೇನೆ. ಡಬ್ಬಲ್ ಇಂಜಿನ್ ಸರ್ಕಾರ ಮತ್ತೆ ಬರಲಿದೆ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿಪ್ರಾಯಪಟ್ಟರು.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 11:55 am, Wed, 10 May 23

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ