AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕರೆಗೆ ಮತದಾರರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ನಾವು ನಿರೀಕ್ಷಿಸಿದ ಫಲಿತಾಂಶ ದೊರೆಯುವ ಸೂಚನೆ ಸಿಕ್ಕಿದೆ -ಜೋಶಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ವಿವೇಕಾನಂದನಗರದ ರೋಟರಿ ಶಾಲೆಯಲ್ಲಿ ಮತ ಚಲಾಯಿಸಿದರು‌‌.

ಆಯೇಷಾ ಬಾನು
|

Updated on:May 10, 2023 | 12:03 PM

Share

ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಯ(Karnataka Assembly Elections 2023) ನಿಮಿತ್ತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು(Pralhad Joshi) ಇಂದು ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ವಿವೇಕಾನಂದನಗರದ ರೋಟರಿ ಶಾಲೆಯಲ್ಲಿ ಮತ ಚಲಾಯಿಸಿದರು‌‌. ತಮ್ಮ ಕುಟುಂಬದ ಸದಸ್ಯರ ಜೊತೆ ಬೆಳಗ್ಗೆಯೇ ಆಗಮಿಸಿ ಮತ ಚಲಾವಣೆ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನಂತರ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿ ಬೆಳಗ್ಗಿನಿಂದಲೇ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ಮತದಾನದ ಬಳಿಕ ಮಾತನಾಡಿದ ಅವರು, ಬೆಳಗ್ಗೆ 7 ಗಂಟೆಯಿಂದಲೇ ನಾನು ಮಾಹಿತಿ ಸಂಗ್ರಹಿಸುತ್ತಿದ್ದೇನೆ, ಕೆಲವು ಮಾದ್ಯಮಗಳಲ್ಲೂ ಗಮನಿಸುತ್ತಿದ್ದೇನೆ, ಅದ್ಭುತವಾದ ಪ್ರತಿಕ್ರಿಯೆ ಇದೆ. ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಜನರು ಭಾಗಿಯಾಗಬೇಕು ಹಾಗೂ ಪೂರ್ತಿ ಮೆಜಾರಿಟಿಯನ್ನು ನನಗೆ ಕೊಟ್ರೆ ನಾನು ಕರ್ನಾಟಕವನ್ನು ನಂಬರ್ ವನ್ ಮಾಡ್ತೇನೆ ಅಂತ ನಮ್ಮ ದೇಶದ ನೆಚ್ಚಿನ ಪ್ರಧಾನಮಂತ್ರಿಗಳು ಕರೆ ಕೊಟ್ಟಿದ್ದರು, ಅದಕ್ಕೆ ಬಹಳ ಅತ್ಯುತ್ತಮ ಪ್ರತಿಕ್ರಿಯೆ ಸಿಗ್ತಿದೆ.

ಇದನ್ನೂ ಓದಿ: Karnataka Assembly Polls: ಮಾಕೋನಹಳ್ಳಿಯ ವಧು ಪ್ರದರ್ಶಿಸಿರುವ ಬದ್ಧತೆ ಎಲ್ಲರಲ್ಲೂ ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನೂ ಗಟ್ಟಿಯಾಗುತ್ತದೆ!

ಸಾಮಾನ್ಯವಾಗಿ ಒಂದು ಫೀಲಿಂಗ್ ಇರುತ್ತೆ ಏನಂದ್ರೆ ಎಜುಕೇಟೆಡ್ ಜನ ಬೇಗ ಓಟಿಂಗ್ ಗೆ ಬರಲ್ಲ ಅಂತ, ಆದರೆ ಈ ಭಾಗದ ಹೆಚ್ಚಿನ ಪ್ರದೇಶ ಸುಶಿಕ್ಷಿತರು ಇರುವಂಥದ್ದು, ಇಲ್ಲಿ ಎಲ್ಲಾ ಬೂತ್ ಗಳಲ್ಲೂ ದೊಡ್ಡ ಸಂಖ್ಯೆಯಲ್ಲಿ ಬೆಳಗ್ಗೆ 7 ಗಂಟೆಗೆ ಎದ್ದು ಬಂದು ಮತದಾನ ಮಾಡ್ತಿದ್ದಾರೆ. ಇದು ನಮ್ಮ ಪಕ್ಷಕ್ಕೆ ಭಾರೀ ಬೆಂಬಲ ಸಿಗ್ತಿದೆ ಎಂಬುದರ ಸಂಕೇತ ಅಂತ ನಾನು ಭಾವಿಸ್ತೇನೆ. ಡಬ್ಬಲ್ ಇಂಜಿನ್ ಸರ್ಕಾರ ಮತ್ತೆ ಬರಲಿದೆ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿಪ್ರಾಯಪಟ್ಟರು.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 11:55 am, Wed, 10 May 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್