AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಕರೆಗೆ ಮತದಾರರು ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ನಾವು ನಿರೀಕ್ಷಿಸಿದ ಫಲಿತಾಂಶ ದೊರೆಯುವ ಸೂಚನೆ ಸಿಕ್ಕಿದೆ -ಜೋಶಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ವಿವೇಕಾನಂದನಗರದ ರೋಟರಿ ಶಾಲೆಯಲ್ಲಿ ಮತ ಚಲಾಯಿಸಿದರು‌‌.

ಆಯೇಷಾ ಬಾನು
|

Updated on:May 10, 2023 | 12:03 PM

Share

ಹುಬ್ಬಳ್ಳಿ: ಕರ್ನಾಟಕ ವಿಧಾನಸಭಾ ಚುನಾವಣೆಯ(Karnataka Assembly Elections 2023) ನಿಮಿತ್ತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು(Pralhad Joshi) ಇಂದು ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪದ ವಿವೇಕಾನಂದನಗರದ ರೋಟರಿ ಶಾಲೆಯಲ್ಲಿ ಮತ ಚಲಾಯಿಸಿದರು‌‌. ತಮ್ಮ ಕುಟುಂಬದ ಸದಸ್ಯರ ಜೊತೆ ಬೆಳಗ್ಗೆಯೇ ಆಗಮಿಸಿ ಮತ ಚಲಾವಣೆ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ನಂತರ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿ ಬೆಳಗ್ಗಿನಿಂದಲೇ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.

ಮತದಾನದ ಬಳಿಕ ಮಾತನಾಡಿದ ಅವರು, ಬೆಳಗ್ಗೆ 7 ಗಂಟೆಯಿಂದಲೇ ನಾನು ಮಾಹಿತಿ ಸಂಗ್ರಹಿಸುತ್ತಿದ್ದೇನೆ, ಕೆಲವು ಮಾದ್ಯಮಗಳಲ್ಲೂ ಗಮನಿಸುತ್ತಿದ್ದೇನೆ, ಅದ್ಭುತವಾದ ಪ್ರತಿಕ್ರಿಯೆ ಇದೆ. ಪ್ರಜಾಪ್ರಭುತ್ವದ ಈ ಹಬ್ಬದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಜನರು ಭಾಗಿಯಾಗಬೇಕು ಹಾಗೂ ಪೂರ್ತಿ ಮೆಜಾರಿಟಿಯನ್ನು ನನಗೆ ಕೊಟ್ರೆ ನಾನು ಕರ್ನಾಟಕವನ್ನು ನಂಬರ್ ವನ್ ಮಾಡ್ತೇನೆ ಅಂತ ನಮ್ಮ ದೇಶದ ನೆಚ್ಚಿನ ಪ್ರಧಾನಮಂತ್ರಿಗಳು ಕರೆ ಕೊಟ್ಟಿದ್ದರು, ಅದಕ್ಕೆ ಬಹಳ ಅತ್ಯುತ್ತಮ ಪ್ರತಿಕ್ರಿಯೆ ಸಿಗ್ತಿದೆ.

ಇದನ್ನೂ ಓದಿ: Karnataka Assembly Polls: ಮಾಕೋನಹಳ್ಳಿಯ ವಧು ಪ್ರದರ್ಶಿಸಿರುವ ಬದ್ಧತೆ ಎಲ್ಲರಲ್ಲೂ ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆ ಇನ್ನೂ ಗಟ್ಟಿಯಾಗುತ್ತದೆ!

ಸಾಮಾನ್ಯವಾಗಿ ಒಂದು ಫೀಲಿಂಗ್ ಇರುತ್ತೆ ಏನಂದ್ರೆ ಎಜುಕೇಟೆಡ್ ಜನ ಬೇಗ ಓಟಿಂಗ್ ಗೆ ಬರಲ್ಲ ಅಂತ, ಆದರೆ ಈ ಭಾಗದ ಹೆಚ್ಚಿನ ಪ್ರದೇಶ ಸುಶಿಕ್ಷಿತರು ಇರುವಂಥದ್ದು, ಇಲ್ಲಿ ಎಲ್ಲಾ ಬೂತ್ ಗಳಲ್ಲೂ ದೊಡ್ಡ ಸಂಖ್ಯೆಯಲ್ಲಿ ಬೆಳಗ್ಗೆ 7 ಗಂಟೆಗೆ ಎದ್ದು ಬಂದು ಮತದಾನ ಮಾಡ್ತಿದ್ದಾರೆ. ಇದು ನಮ್ಮ ಪಕ್ಷಕ್ಕೆ ಭಾರೀ ಬೆಂಬಲ ಸಿಗ್ತಿದೆ ಎಂಬುದರ ಸಂಕೇತ ಅಂತ ನಾನು ಭಾವಿಸ್ತೇನೆ. ಡಬ್ಬಲ್ ಇಂಜಿನ್ ಸರ್ಕಾರ ಮತ್ತೆ ಬರಲಿದೆ ಅಂತ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿಪ್ರಾಯಪಟ್ಟರು.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 11:55 am, Wed, 10 May 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್