AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಹಂಚಿಕೆ ವಿಚಾರವಾಗಿ ಕಾಂಗ್ರೆಸ್​, ಜೆಡಿಎಸ್​ ಮಲತಾಯಿ ಧೋರಣೆ ಮಾಡಿದೆ: ವಕ್ಫ್ ಬೋರ್ಡ್

116 ಸೀಟ್​ಗಳಲ್ಲಿ 11 ಜನ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್, ಜೆಡಿಎಸ್​ನ ಈ ಮಲತಾಯಿ ಧೋರಣೆಯನ್ನ ಖಂಡಿಸ್ತೀವಿ ಎಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಹೇಳಿದ್ದಾರೆ.

ಟಿಕೆಟ್​ ಹಂಚಿಕೆ ವಿಚಾರವಾಗಿ ಕಾಂಗ್ರೆಸ್​, ಜೆಡಿಎಸ್​ ಮಲತಾಯಿ ಧೋರಣೆ ಮಾಡಿದೆ: ವಕ್ಫ್ ಬೋರ್ಡ್
ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ
ವಿವೇಕ ಬಿರಾದಾರ
|

Updated on:Apr 09, 2023 | 3:10 PM

Share

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ (Karnataka Assembly Election) ಟಿಕೆಟ್ ಘೋಷಣೆ ವಿಚಾರವಾಗಿ ಕಾಂಗ್ರೆಸ್ (Congress)​ ಮತ್ತು ಜೆಡಿಎಸ್ (JDS)​ ಪಕ್ಷಗಳ ವಿರುದ್ಧ ಕರ್ನಾಟಕ ವಕ್ಫ್ ಬೋರ್ಡ್ (Karnataka Waqf Board) ಅಸಮಾಧಾನಗೊಂಡಿದೆ. ಎರಡು ಪಕ್ಷದ 116 ಸೀಟ್​ಗಳಲ್ಲಿ 11 ಜನ ಮುಸ್ಲಿಂ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್, ಜೆಡಿಎಸ್​ನ ಈ ಮಲತಾಯಿ ಧೋರಣೆಯನ್ನ ಖಂಡಿಸ್ತೀವಿ ಎಂದು ಕರ್ನಾಟಕ ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಹೇಳಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿ ಶೇಕಡವಾರು ಅನುಗುಣವಾಗಿ ನೋಡುವುದಾರೇ 116 ಮುಸ್ಲಿಂರಿಗೆ ಟಿಕೆಟ್ ಸಿಗಬೇಕಿತ್ತು. ಆದರೆ ಕೇವಲ 11 ಜನರಿಗೆ ಮಾತ್ರ ಕಾಂಗ್ರೆಸ್​ನಿಂದ ಟಿಕೆಟ್ ಘೋಷಣೆ ಆಗಿದೆ. ಟಿಕೆಟ್ ಮಾತ್ರ ಕೊಡೋದಲ್ಲ, ಆ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಕಾಂಗ್ರೆಸ್, ಜೆಡಿಎಸ್ ಮುಖಂಡರು ಈ ಕೆಲಸ ಮಾಡಬೇಕಿದೆ. 23 ಜನ ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಬೆಂಗಳೂರಲ್ಲಿ ರಾಜ್ಯ ವರ್ಕ್ಫ್ ಬೋರ್ಡ್ ಸಭೆ ನಡೆಯಿತು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ವರ್ಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಮುಸ್ಲಿಂರು ಹೆಚ್ಚಾಗಿ ಇರುವ ಕಡೆ ನಮ್ಮ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿ. ಚಿಕ್ಕಪೇಟೆಯಲ್ಲಿ ನೂರಾರು ಕೋಟಿ ಖರ್ಚು ಮಾಡುತ್ತೇನೆ ಅಂದರೂ ಟಿಕೆಟ್ ಕೊಡುತ್ತಿಲ್ಲ. ಜಾತಿ ನೋಡಿ, ಟಿಕೆಟ್ ಕೊಡುತ್ತಿಲ್ವಾ…? ಎರಡು ಪಕ್ಷಗಳನ್ನು ನಾವು ಟಿಕೆಟ್​ಗಾಗಿ ಬೇಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಇನ್ನು 70 ಟಿಕೆಟ್ ಕಾಂಗ್ರೆಸ್ ಘೋಷಣೆ ಮಾಡುವುದು ಬಾಕಿ‌ ಇದೆ. ಮೂರನೇ ಪಟ್ಟಿಯಲ್ಲಿ ಮುಸ್ಲಿಂ ಸಮೂದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಅಖಂಡ ಶ್ರೀನಿವಾಸ್​ಗೆ ಟಿಕೆಟ್ ನೀಡದಂತೆ ಮುಸ್ಲಿಂ ಸಮುದಾಯ ಮನವಿ

ಅಖಂಡ ಶ್ರೀನಿವಾಸ್​ ಅವರಿಗೆ ಟಿಕೆಟ್ ಕೊಡದಂತೆ ಸುನ್ನಿ ಉಲ್ಲಾ ಬೋರ್ಡ್ ಕಾಂಗ್ರೆಸ್ ರಾಜ್ಯ ನಾಯಕರಿಗೆ ಮನವಿ ಮಾಡಿದೆ. ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗೆ ಶಾಸಕರೇ ಕಾರಣ. ಮುಸ್ಲಿಂ ಪ್ರವಾದಿಗಳ ವಿರುದ್ಧ ಪೋಸ್ಟ್ ಹಬ್ಬಿಸಿದ್ದೇ ಶಾಸಕರ ಸಂಬಂಧಿಕರು. ಇದರಿಂದ ಮುಸ್ಲಿಮರ ಭಾವನೆಗೆ ದಕ್ಕೆಯುಂಟಾಗಿ ದೊಡ್ಡ ಗಲಭೆಯೇ ಉಂಟಾಯ್ತು. ಈಗಲೂ ಎಷ್ಟೋ ಮುಸ್ಲಿಂ ಯುವಕರು ಜೈಲಿನಲ್ಲಿ ಇದ್ದಾರೆ. ಪುಲಕೇಶಿನಗರಕ್ಕೆ ಟಿಕೆಟ್ ಕೊಡುವಾಗ ಯೋಚನೆ ಮಾಡಬೇಕು. ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಿ ಎಂದು ಒತ್ತಾಯ ಮಾಡಿದರು.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:09 pm, Sun, 9 April 23

Follow Us
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಅನನ್ಯಾಗಾಗಿ ಅದ್ಭುತವಾಗಿ ಹಾಡು ಹೇಳಿದ ಅಂಕಿತಾ ಅಮರ್
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
ಇಂಜಿನಿಯರ್ ಮನೇಲಿತ್ತು 6 ಕೆಜಿ ಚಿನ್ನ, 5 ಕೆಜಿ ಬೆಳ್ಳಿ, 14 ಕೋಟಿ ಆಸ್ತಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
2nd PUCಯಲ್ಲಿ 6ನೇ ರ‍್ಯಾಂಕ್ ಗಳಿಸಿದ ವಿಕಾಸ್ ಹೇಳಿದ್ದೇನು ನೋಡಿ!
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
25 ವರ್ಷಗಳ ಬಳಿಕ ರೀ-ರಿಲೀಸ್ ಆದ ಕೋಟಿಗೊಬ್ಬ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಚಂದ್ರನ ಅಂಗಳ ಸುತ್ತಿ ಭೂಮಿಗೆ ಸುರಕ್ಷಿತವಾಗಿ ವಾಪಸಾದ ನಾಸಾ ತಂಡ
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!
ಪಾಕಿಸ್ತಾನದಲ್ಲಿಂದು ಶಾಂತಿ ಮಾತುಕತೆ: ಇಸ್ಲಾಮಾಬಾದ್ ಕಂಪ್ಲೀಟ್ ಲಾಕ್​ಡೌನ್!