AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar Election 2023 Winner: ಕೋಲಾರ ವಿಧಾನಸಭಾ ಕ್ಷೇತ್ರ ಚುನಾವಣೆ​ 2023 ರಿಸಲ್ಟ್: ಕಾಂಗ್ರೆಸ್​ನ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್​ ಮನ್ನಡೆ

Kolar Assembly Election Result 2023 Live Counting Updates: Kolar Assembly Election Result 2023 Live Updates: ಕೋಲಾರ​ ವಿಧಾನಸಭಾ ಕ್ಷೇತ್ರದಲ್ಲಿ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್​ ಮನ್ನಡೆಯಲ್ಲಿದ್ದಾರೆ. ಜೆಡಿಎಸ್​ನ ಸಿಎಂಆರ್ ಶ್ರೀನಾಥ್ ಹಾಗೂ ಬಿಜೆಪಿ ಆವರ್ತೂರ್ ಪ್ರಕಾಶ್​​ಗೆ ಹಿನ್ನೆಡೆ.

Kolar Election 2023 Winner: ಕೋಲಾರ ವಿಧಾನಸಭಾ ಕ್ಷೇತ್ರ ಚುನಾವಣೆ​ 2023 ರಿಸಲ್ಟ್:  ಕಾಂಗ್ರೆಸ್​ನ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್​ ಮನ್ನಡೆ
Follow us
ಅಕ್ಷತಾ ವರ್ಕಾಡಿ
|

Updated on:May 13, 2023 | 12:22 PM

ಕರ್ನಾಟಕ ರಾಜ್ಯ ವಿಧಾನ ಸಭೆಗೆ ಮೇ 10ರಂದು ಮತದಾನ ನಡೆದಿದೆ. ಕೋಲಾರ ವಿಧಾನಸಾಭಾ ಕ್ಷೇತ್ರದಲ್ಲೂ ಎಂದಿನಂತೆ ಬಿರುಸಿನ ಮತದಾನ ನಡೆದಿತ್ತು. ಈ ಬಾರಿ ಕಾಂಗ್ರೆಸ್​ನಿಂದ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಮನ್ನಡೆಯನ್ನು ಸಾಧಿಸಿದ್ದಾರೆ. ಇದೇ ಕ್ಷೇತ್ರದಲ್ಲಿ ಎರಡು ಬಾರಿ ಪಕ್ಷೇತರ ಶಾಸಕರಾಗಿ ಆಯ್ಕೆಯಾಗಿ ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದ ಬಿಜೆಪಿ ಆಭ್ಯರ್ಥಿ ಆವರ್ತೂರ್ ಪ್ರಕಾಶ್​ ಹಿನ್ನಡೆಯಲ್ಲಿದ್ದಾರೆ. ಇನ್ನು ಜೆಡಿಎಸ್​ ನಿಂದ ಇದೇ ಮೊದಲ ಬಾರಿಗೆ ಹೊಸ ಮುಖ ಸಿಎಂಆರ್ ಶ್ರೀನಾಥ್​ ಅವರಿಗೆ ಹಿನ್ನಡೆಯಾಗಿದೆ.

ಇಲ್ಲಿನ ಜನರು ಹೆಚ್ಚಾಗಿ ಕೃಷಿ ಹಾಗೂ ವಿವಿದ ಉಪಕಸುಬು ಆಧಾರಿತ ಜೀವನ ನಡೆಸುವವ ಜನರೇ ಹೆಚ್ಚಾಗಿದ್ದಾರೆ. ಪ್ರಮುಖವಾಗಿ ರೇಷ್ಮೆ, ಹಾಲು, ಜೊತೆಗೆ ನರಸಾಪುರ ಹಾಗೂ ವೇಮಗಲ್​ ಕೈಗಾರಿಕಾ ಪ್ರದೇಶಗಳು ಈ ಕ್ಷೇತ್ರ ವ್ಯಾಪ್ತಿಗೆ ಬರುವುದರಿಂದ ಹೆಚ್ಚಿನ ಜನರು ಕೈಗಾರಿಕೆಗಳಲ್ಲಿ ಉದ್ಯೋಗ ಮಾಡುವವರ ಸಂಖ್ಯೆ ಹೆಚ್ಚಿದೆ. ಇನ್ನು ಕ್ಷೇತ್ರದಲ್ಲಿ 115107 ಪುರುಷ, 116583 ಮಹಿಳಾ ಮತದಾರರು ಜೊತೆಗೆ ಒಟ್ಟು ಕ್ಷೇತ್ರದಲ್ಲಿ-231742 ಜನ ಮತದಾರರಿದ್ದಾರೆ, ಕ್ಷೇತ್ರದಲ್ಲಿ ಒಟ್ಟು-284 ಮತಗಟ್ಟೆಗಳನ್ನು ಸ್ಥಾಪನೆ ಮಾಡುವ ಸಾಧ್ಯತೆ ಇದೆ. ಕೋಲಾರ ಕ್ಷೇತ್ರ ವ್ಯಾಪ್ತಿಗೆ ನಾಲ್ಕು ಹೋಬಳಿಗಳು ಒಳಪಡುತ್ತವೆ ಕೋಲಾರ ಕಸಬಾ, ವೇಮಗಲ್, ವಕ್ಕಲೇರಿ, ನರಸಾಪುರ ಹೋಬಳಿಗಳು ಒಡಪಡುತ್ತವೆ. ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಹೆಚ್ಚಿನ ಸಂಖ್ಯೆ ಯಲ್ಲಿದ್ದಾರೆ. ಜನಸಂಖ್ಯೆಯಲ್ಲಿ ಮುಸ್ಲಿಂಮರು ಎರಡನೇ ಸ್ಥಾನದಲ್ಲಿದ್ದಾರೆ. ನಂತರದ ಸ್ಥಾನದಲ್ಲಿ ವಕ್ಕಲಿಗರು, ಕುರುಬ, ಪಳ್ಳಿಗರು, ಬಲಿಜಿಗ, ಗೊಲ್ಲರು ಇನ್ನಿತರ ಸಮುದಾಯದವರಿದ್ದಾರೆ. ಕೋಲಾರ ನಗರದಲ್ಲಿ ಮುಸ್ಲಿಂ, ಕಸಾಬ ಹೋಬಳಿಯಲ್ಲಿ ಒಕ್ಕಲಿಗರು, ಕುರುಬರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ, ವೇಮಗಲ್ ಹೋಬಳಿಯಲ್ಲಿ ಒಕ್ಕಲಿಗರು, ಹಿಂದುಳಿದ ವರ್ಗದವರಿದ್ದು, ನರಸಾಪುರ ಹೋಬಳಿಯಲ್ಲಿ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗ, ಒಕ್ಕಲಿಗರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ.

ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪ್ರಾಬಲ್ಯ ಈ ಕ್ಷೇತ್ರದಲ್ಲಿದೆಯಾದರೂ, ಕಾಂಗ್ರೆಸ್‌ನಲ್ಲಿನ ಸಂಘಟಿತ ಶ್ರಮದ ಕೊರತೆ, ಒಳಜಗಳದಿಂದ ಗೆಲುವು ಸಾದಿಸಲು ಸಾಧ್ಯವಾಗಿಲ್ಲ, ಕಾಂಗ್ರೇಸ್​ ಅಧಿಕಾರ ಕಳೆದುಕೊಂಡು 20 ವರ್ಷಗಳಾಗಿದೆ, ಇನ್ನು ಜೆಡಿಎಸ್​ ಪಕ್ಷವೂ ಕಳೆದ ಬಾರಿ ಅಧಿಕಾರ ಪಡೆಯಿತಾದರೂ ಅದು ಕಾಂಗ್ರೇಸ್​ ಪಾಲಾಗಿ ಹೋಗಿದೆ, ಇನ್ನು ಎರಡು ಬಾರಿ ಪಕ್ಷೇತರ ಅಭ್ಯರ್ಥಿ ವರ್ತೂರ್ ಪ್ರಕಾಶ್​ ಜಯಗಳಿಸುವ ಮೂಲಕ ಕ್ಷೇತ್ರದಲ್ಲಿ ತಮ್ಮದೇ ಪ್ರಾಬಲ್ಯ ಬೆಳೆಸಿಕೊಂಡಿದ್ದಾರೆ. ಈಬಾರಿ ವರ್ತೂರ್ ಪ್ರಕಾಶ್​ ಬಿಜೆಪಿ ಸೇರ್ಪಡೆಯಾಗಿರುವ ಹಿನ್ನೆಲೆ ಕೋಲಾರ ಕ್ಷೇತ್ರದಲ್ಲಿ ಬಿಜೆಪಿಗೂ ಹೆಚ್ಚಿನ ಶಕ್ತಿ ಬಂದಂತಾಗಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:44 am, Sat, 13 May 23

ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
VIDEO: ಲೈನ್ ದಾಟಿ ವಿಕೆಟ್ ಕೈಚೆಲ್ಲಿದ ಜಸ್​ಪ್ರೀತ್ ಬುಮ್ರಾ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ
ಸುದೀಪ್ ವಿರುದ್ಧ ಏಕವಚನ ಬಳಸಿದರೇ ಡಿಸಿಎಂ ಡಿಕೆಶಿ: ವಿಡಿಯೋ ನೋಡಿ