Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ಮೈಸೂರು ಭಾಗದಲ್ಲೇ ಬಿಜೆಪಿಗೆ ಬಿಗ್ ಶಾಕ್, ಮತ್ತೋರ್ವ ಮಾಜಿ ಶಾಸಕ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸೀಟು ಗೆಲ್ಲಬೇಕೆಂದು ಪಣತೊಟ್ಟಿರುವ ಬಿಜೆಪಿ ಹೊಸ ಹೊಸ ತಂತ್ರಗಳನ್ನು ಹೆಣೆಯುತ್ತಿದೆ. ಆದ್ರೆ, ಮತ್ತೊಂದೆಡೆ ಹಳೆ ನಾಯಕರೇ ಪಕ್ಷ ತೊರೆಯುತ್ತಿದ್ದಾರೆ. ಇದರಿಂದ ಬಿಜೆಪಿ ಮೂಲ ಕುಸಿಯುತ್ತಿದೆ.

ಹಳೆ ಮೈಸೂರು ಭಾಗದಲ್ಲೇ ಬಿಜೆಪಿಗೆ ಬಿಗ್ ಶಾಕ್, ಮತ್ತೋರ್ವ ಮಾಜಿ ಶಾಸಕ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್, ಬಿಜೆಪಿ ಧ್ವಜImage Credit source: india today
Follow us
ರಮೇಶ್ ಬಿ. ಜವಳಗೇರಾ
|

Updated on: Mar 06, 2023 | 4:02 PM

ಚಾಮರಾಜನಗರ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಆಡಳಿತಾರೂಢ ಬಿಜೆಪಿ ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ, ಹೈಕಮಾಂಡ್ ನಾಯಕರ ಮೂಲಕ ಹಲವು ರೀತಿಯಲ್ಲಿ ಕಸರತ್ತು ನಡೆಸಿದೆ. ಆದ್ರೆ, ಈ ಭಾಗದಲ್ಲಿರುವ ಬಿಜೆಪಿಯ ನಾಯರು ಒಬ್ಬರಿಂದೊಬ್ಬರು ಪಕ್ಷ ತೊರೆಯುತ್ತಿದ್ದಾರೆ. ಮೊನ್ನೇ ಅಷ್ಟೇ ವಿಧಾನ ಪರಿಷತ್ ಸದಸ್ಯ ಸಂದೇಶ ನಾಗರಾಜ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಚಾಮರಾಜನಗರದಲ್ಲಿ ಮತ್ತೋರ್ವ ಮಾಜಿ ಶಾಸಕ ಬಿಜೆಪಿ ತೊರೆದು ಕೈ ಹಿಡಿಯಲು ಮುಂದಾಗಿದ್ದಾರೆ.

ಇದನ್ನೂ ಓದಿ: ಸಚಿವ ನಾರಾಯಣಗೌಡ ಕಾಂಗ್ರೆಸ್​ ಸೇರ್ಪಡೆಗೆ ತೀವ್ರ ವಿರೋಧ, ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆತ, ಕೈಗೆ ಬಳೆ ನೀಡಿ ಕಾರ್ಯಕರ್ತರ ಆಕ್ರೋಶ

ಕೊಳ್ಳೇಗಾಲ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ಬಿಜೆಪಿ ಪಕ್ಷದ ಪ್ರಾಥಾಮಿಕ ಸದಸ್ಯ ಸ್ಥಾನಕ್ಕೆ ಹಾಗೂ ರಾಜ್ಯ ಎಸ್ ‌ಸಿ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನಾಳೆ(ಮಾ.07) ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇದರಿಂದ ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಕ್ ಕೊಟ್ಟಿದ್ದಾರೆ.

ಇನ್ನು ಈ ಬಗ್ಗೆ ಚಾಮರಾಜನಗರದಲ್ಲಿ ಇಂದು(ಮಾ.06) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಂಜುಂಡಸ್ವಾಮಿ, ಭಾರತೀಯ ಜನತಾ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇತ್ತು. ನನಗೆ ಹಾಗೂ ನನ್ನ ಬೆಂಬಲಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲೂ ನನ್ನನ್ನು ಕಡೆಗಣಿಸಲಾಯಿತು. ಪಕ್ಷದ ವರಿಷ್ಠರ ಗಮನಕ್ಕೆ ತಂದರೂ ಸರಿಪಡಿಸುವ ಕೆಲಸ ಆಗಲಿಲ್ಲ. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ. ಯಾವುದೇ ಷರತ್ತಿಲ್ಲದೆ ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಜಿ.ಎನ್.ನಂಜುಂಡಸ್ವಾಮಿ ಅವರು ಈ ಬಾರಿ ಕೊಳ್ಳೆಗಾಲ ವಿಧಾಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ,​ ಎನ್​ ಮಹೇಶ್​ ಅವರಿಗೆ ಟಿಕೆಟ್​ ಖಚಿತವಾಗಿದ್ದರಿಂದ ನಂಜುಂಡಸ್ವಾಮಿ ಅಸಮಾಧಾನಗೊಂಡಿದ್ದಾರೆ. ಇದರಿಂದ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ