AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ಮೈಸೂರು ಭಾಗದಲ್ಲೇ ಬಿಜೆಪಿಗೆ ಬಿಗ್ ಶಾಕ್, ಮತ್ತೋರ್ವ ಮಾಜಿ ಶಾಸಕ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಈ ಬಾರಿ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸೀಟು ಗೆಲ್ಲಬೇಕೆಂದು ಪಣತೊಟ್ಟಿರುವ ಬಿಜೆಪಿ ಹೊಸ ಹೊಸ ತಂತ್ರಗಳನ್ನು ಹೆಣೆಯುತ್ತಿದೆ. ಆದ್ರೆ, ಮತ್ತೊಂದೆಡೆ ಹಳೆ ನಾಯಕರೇ ಪಕ್ಷ ತೊರೆಯುತ್ತಿದ್ದಾರೆ. ಇದರಿಂದ ಬಿಜೆಪಿ ಮೂಲ ಕುಸಿಯುತ್ತಿದೆ.

ಹಳೆ ಮೈಸೂರು ಭಾಗದಲ್ಲೇ ಬಿಜೆಪಿಗೆ ಬಿಗ್ ಶಾಕ್, ಮತ್ತೋರ್ವ ಮಾಜಿ ಶಾಸಕ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್, ಬಿಜೆಪಿ ಧ್ವಜImage Credit source: india today
ರಮೇಶ್ ಬಿ. ಜವಳಗೇರಾ
|

Updated on: Mar 06, 2023 | 4:02 PM

Share

ಚಾಮರಾಜನಗರ: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಆಡಳಿತಾರೂಢ ಬಿಜೆಪಿ ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ, ಹೈಕಮಾಂಡ್ ನಾಯಕರ ಮೂಲಕ ಹಲವು ರೀತಿಯಲ್ಲಿ ಕಸರತ್ತು ನಡೆಸಿದೆ. ಆದ್ರೆ, ಈ ಭಾಗದಲ್ಲಿರುವ ಬಿಜೆಪಿಯ ನಾಯರು ಒಬ್ಬರಿಂದೊಬ್ಬರು ಪಕ್ಷ ತೊರೆಯುತ್ತಿದ್ದಾರೆ. ಮೊನ್ನೇ ಅಷ್ಟೇ ವಿಧಾನ ಪರಿಷತ್ ಸದಸ್ಯ ಸಂದೇಶ ನಾಗರಾಜ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಚಾಮರಾಜನಗರದಲ್ಲಿ ಮತ್ತೋರ್ವ ಮಾಜಿ ಶಾಸಕ ಬಿಜೆಪಿ ತೊರೆದು ಕೈ ಹಿಡಿಯಲು ಮುಂದಾಗಿದ್ದಾರೆ.

ಇದನ್ನೂ ಓದಿ: ಸಚಿವ ನಾರಾಯಣಗೌಡ ಕಾಂಗ್ರೆಸ್​ ಸೇರ್ಪಡೆಗೆ ತೀವ್ರ ವಿರೋಧ, ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆತ, ಕೈಗೆ ಬಳೆ ನೀಡಿ ಕಾರ್ಯಕರ್ತರ ಆಕ್ರೋಶ

ಕೊಳ್ಳೇಗಾಲ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ. ಬಿಜೆಪಿ ಪಕ್ಷದ ಪ್ರಾಥಾಮಿಕ ಸದಸ್ಯ ಸ್ಥಾನಕ್ಕೆ ಹಾಗೂ ರಾಜ್ಯ ಎಸ್ ‌ಸಿ ಮೋರ್ಚಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನಾಳೆ(ಮಾ.07) ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಇದರಿಂದ ಚುನಾವಣೆ ಹೊತ್ತಲ್ಲೇ ಬಿಜೆಪಿ ಶಾಕ್ ಕೊಟ್ಟಿದ್ದಾರೆ.

ಇನ್ನು ಈ ಬಗ್ಗೆ ಚಾಮರಾಜನಗರದಲ್ಲಿ ಇಂದು(ಮಾ.06) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ನಂಜುಂಡಸ್ವಾಮಿ, ಭಾರತೀಯ ಜನತಾ ಪಕ್ಷದಲ್ಲಿ ಉಸಿರುಗಟ್ಟುವ ವಾತಾವರಣ ಇತ್ತು. ನನಗೆ ಹಾಗೂ ನನ್ನ ಬೆಂಬಲಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲೂ ನನ್ನನ್ನು ಕಡೆಗಣಿಸಲಾಯಿತು. ಪಕ್ಷದ ವರಿಷ್ಠರ ಗಮನಕ್ಕೆ ತಂದರೂ ಸರಿಪಡಿಸುವ ಕೆಲಸ ಆಗಲಿಲ್ಲ. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ರಾಜೀನಾಮೆ ನೀಡಿದ್ದೇನೆ. ಯಾವುದೇ ಷರತ್ತಿಲ್ಲದೆ ನಾಳೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಜಿ.ಎನ್.ನಂಜುಂಡಸ್ವಾಮಿ ಅವರು ಈ ಬಾರಿ ಕೊಳ್ಳೆಗಾಲ ವಿಧಾಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ,​ ಎನ್​ ಮಹೇಶ್​ ಅವರಿಗೆ ಟಿಕೆಟ್​ ಖಚಿತವಾಗಿದ್ದರಿಂದ ನಂಜುಂಡಸ್ವಾಮಿ ಅಸಮಾಧಾನಗೊಂಡಿದ್ದಾರೆ. ಇದರಿಂದ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು