AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಪ್ರಚಾರಕ್ಕಿಳಿದ ಪರಮೇಶ್ವರ್, ಕಲ್ಲೇಟು ಬಿದ್ದಿದ್ದ ಗ್ರಾಮದಿಂದಲೇ ಪ್ರಚಾರ ಆರಂಭ

ದುಷ್ಕರ್ಮಿಗಳು ಎಸೆದಿದ್ದ ಕಲ್ಲೇಟಿನಿಂದ ಗಾಯಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ ಅವರು ಒಂದು ವಿಶ್ರಾಂತಿ ಬಳಿಕ ಇದೀಗ ಮತ್ತೆ ಪ್ರಚಾರಕ್ಕಿಳಿದಿದ್ದಾರೆ.

ಮತ್ತೆ ಪ್ರಚಾರಕ್ಕಿಳಿದ ಪರಮೇಶ್ವರ್, ಕಲ್ಲೇಟು ಬಿದ್ದಿದ್ದ ಗ್ರಾಮದಿಂದಲೇ ಪ್ರಚಾರ ಆರಂಭ
ರಮೇಶ್ ಬಿ. ಜವಳಗೇರಾ
|

Updated on: Apr 30, 2023 | 11:51 AM

Share

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ ಪಮರೇಶ್ವರ್​ (Dr G Parameshwara)ಮತ್ತೆ ಪ್ರಚಾರಕ್ಕಿಳಿದಿದ್ದಾರೆ. ಮೊನ್ನೆ ಸಂಜೆ ತಲೆಗೆ ಕಲ್ಲೇಟು ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದ ಪರಮೇಶ್ವರ್, ನಿನ್ನೆ ದಿನ ಪೂರ್ತಿ ವಿಶ್ರಾಂತಿ ಪಡೆದಿದ್ದು, ಇದೀಗ ಇಂದಿನಿಂದ ಮತ್ತೆ ಪ್ರಚಾರ ಆರಂಭಿಸಿದ್ದಾರೆ. ತಲೆಯಲ್ಲಿ ಬ್ಯಾಂಡಿಜ್ ಇದ್ದು, ಟೋಪಿ ಧರಿಸಿಕೊಂಡು ನಾಳೆ(ಮೇ 01) ಮಾಜಿ ಸಿಎಂ ಸಿದ್ದರಾಮಯ್ಯ ಕೊರಟಗೆರೆ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವುದರಿಂದ. ಕೊರಟಗೆರೆ ರಾಜೀವ ಭವನ ಆವರಣದಲ್ಲಿ ನಡೆಯಲಿರುವ ಸಾರ್ವಜನಿಕ ಸಮಾವೇಶ ಸ್ಥಳ ಪರಿಶೀಲನೆ ಮಾಡಿದರು. ಬಳಿಕ ಕಲ್ಲೇಟು ಬಿದ್ದಿದ್ದ ಗ್ರಾಮದಿಂದಲೇ ಪರಮೇಶ್ವರ್, ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳುತ್ತಿರುವುದು ವಿಶೇಷ.

ಇದನ್ನೂ ಓದಿ: ಪ್ರಚಾರ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಡಾ ಜಿ ಪರಮೇಶ್ವರ್​ ಮೇಲೆ ಕಲ್ಲೆಸೆತ: ಆಸ್ಪತ್ರೆಗೆ ದಾಖಲು

ಮೊನ್ನೇ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದರು. ಇದರಿಂದ ಕಾಂಗ್ರೆಸ್ ಅಭ್ಯರ್ಥಿ ಪರಮೇಶ್ವರ್​ ಅವರ ತಲೆಗೆ ಬಿದ್ದು ಗಾಯವಾಗಿತ್ತು. ಕೂಡಲೇ ಅವರ ಬೆಂಬಲಿಗರು ಸಮೀಪದ ಅಕ್ಕಿರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು.

ನಂತರ ಡಾ. ಜಿ. ಪರಮೇಶ್ವರ್ ತುಮಕೂರಿನ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ನಿನ್ನೆ (ಏಪ್ರಿಲ್ 29) ಇಡೀ ದಿನ ಪ್ರಚಾರವನ್ನು ಸ್ಥಗಿತಗೊಳಿಸಿ ವಿಶ್ರಾಂತಿಯಲ್ಲಿದ್ದರು. ಇದೀಗ ಇಂದಿನಿಂದ ಮತ್ತೆ ಪ್ರಚಾರಕ್ಕಿಳ್ಳಿದಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಘಟನೆ ಬಗ್ಗೆ ತೀವ್ರ ಖಂಡನೆಗಳು ವ್ಯ್ಕತವಾಗಿದ್ದವು.

ಘಟನೆ ಬಗ್ಗೆ ಪರಮೇಶ್ವರ್ ಹೇಳಿದ್ದೇನು?

ಘಟನೆ ಹೇಗಾಯಿತು ಎಂದು ಹೇಳಲು ಕಷ್ಟ. ಬಹುಶಃ ಯಾರೋ ದುಷ್ಕರ್ಮಿಗಳು ಕಲ್ಲು ಹಾಕಿರಬಹುದು ಅನ್ನಿಸುತ್ತದೆ. ಆದರೆ ಯಾವ ಉದ್ದೇಶಕ್ಕೆ ಹಾಕಿದರು ಎಂದು ಹೇಳಲು ಕಷ್ಟ. ನಾನು 35 ವರ್ಷಗಳಿಂದ ರಾಜಕರಣ ಮಾಡಿಕೊಂಡು ಬಂದಿದ್ದೇನೆ. ನನಗೆ ಶತ್ರುಗಳು ಕಡಿಮೆ ಇರಬಹುದು ಅಂದುಕೊಂಡಿದ್ದೇನೆ. ಒಂದು ವೇಳೆ ದ್ವೇಷ ಇದ್ದರೆ ಈ ರೀತಿ ತೀರಿಸಿಕೊಳ್ಳಬಾರದು. ಹೂನಲ್ಲಿ ಅಷ್ಟು ದೊಡ್ಡ ಕಲ್ಲು ಬರಲು ಸಾಧ್ಯವಿಲ್ಲ. ಯಾರೋ ದುಷ್ಕರ್ಮಿಗಳು ಹಾಕಿರಬಹುದು. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದ್ದೇನೆ ಎಂದಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!