AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲಿಕಾರ್ಜುನ ಖರ್ಗೆ ಕೈ ಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ; ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೈ ಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ. ಖರ್ಗೆ ಅವರು ಏನು ಬಯಸುತ್ತಾರೋ ಅದನ್ನು ಈಡೇರಿಸುವ ಕೆಲಸ ನನ್ನದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಕೈ ಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ; ಹೊಸ ದಾಳ ಉರುಳಿಸಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಗಣಪತಿ ಶರ್ಮಾ
|

Updated on:Apr 08, 2023 | 6:12 PM

Share

ಮುಖ್ಯಾಂಶಗಳು

  • ಹೊಸ ರಾಜಕೀಯ ದಾಳ ಉರುಳಿಸಿದ ಡಿಕೆ ಶಿವಕುಮಾರ್.
  • ಮಲ್ಲಿಕಾರ್ಜುನ ಖರ್ಗೆ ಕೈ ಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ ಎಂದ ಕೆಪಿಸಿಸಿ ಅಧ್ಯಕ್ಷ.
  • ರಾಜ್ಯಕ್ಕೆ ಖರ್ಗೆ ಸೇವೆ ಅಗತ್ಯವಿದೆ ಎಂದ ಡಿಕೆಶಿ.

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೈ ಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ. ಖರ್ಗೆ ಅವರು ಏನು ಬಯಸುತ್ತಾರೋ ಅದನ್ನು ಈಡೇರಿಸುವ ಕೆಲಸ ನನ್ನದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆ ಮೂಲಕ ಖರ್ಗೆ ಅವರು ಮುಖ್ಯಮಂತ್ರಿಯಾದರೆ ತ್ಯಾಗಕ್ಕೂ ಸಿದ್ಧ ಎಂದು ಡಿಕೆ ಶಿವಕುಮಾರ್ ಪರೋಕ್ಷ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಹೊಸ ರಾಜಕೀಯ ದಾಳ ಉರುಳಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಖರ್ಗೆ ಕೈಕೆಳಗೆ ಕೆಲಸ ಮಾಡುವುದಕ್ಕೆ ನಾನು ಇಷ್ಟಪಡುತ್ತೇನೆ. ಖರ್ಗೆ ನಮ್ಮ ಪಕ್ಷದ ಆಸ್ತಿ. ರಾಜ್ಯಕ್ಕೆ ಅವರ ಸೇವೆ ಅಗತ್ಯವಿದೆ. ಮಲ್ಲಿಕಾರ್ಜುನ ಖರ್ಗೆ ನನಗಿಂತ ರಾಜಕೀಯದಲ್ಲಿ ದೊಡ್ಡವರು ಎಂದು ಹೊಗಳಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಗಾದಿಗೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಆಕಾಂಕ್ಷಿಗಳು ಹೌದೆಂಬುದನ್ನು ಇಬ್ಬರೂ ಒಪ್ಪಿಕೊಂಡಿದ್ದಾರೆ. ಆದಾಗ್ಯೂ, ತಮ್ಮಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಪ್ರಜಾಸತ್ತಾತ್ಮಕವಾಗಿ ಸಿಎಂ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್​​ನಲ್ಲಿ ನಡೆಯಲಿದೆ ಎಂದು ಹೇಳಿಕೊಂಡಿದ್ದಾರೆ. ಈ ಮಧ್ಯೆ, ತಮ್ಮ ಬೆಂಬಲಿಗರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ಕೊಡಿಸುವ ಯತ್ನವನ್ನೂ ತೆರೆಮರೆಯಲ್ಲಿ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆಯೇ ಡಿಕೆಶಿ ಅವರು ಖರ್ಗೆ ಪರ ದಾಳ ಉರುಳಿಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಅಮುಲ್ ವಿರುದ್ಧ ಆಕ್ರೋಶ

ಅಮುಲ್ ಹಾಗೂ ಮಹಾರಾಷ್ಟ್ರ ಗಡಿ ವಿಚಾರವಾಗಿ ಕೆಲವರು ಮಾತನಾಡುತ್ತಿಲ್ಲ. ಹೋರಾಟಗಾರರು ಹಾಗೂ ಕಲಾವಿದರೆಲ್ಲರೂ ಸುಮ್ಮನೇ ಇದ್ದಾರೆ. ಗಡಿ ಭಾಗದ ನಮ್ಮ ಹಳ್ಳಿಗಳಿಗೆ ಮಹಾರಾಷ್ಟ್ರ ವಿಮೆ ಘೋಷಿಸಿದೆ. ಇತಿಹಾಸದಲ್ಲಿ ಯಾವತ್ತೂ ಈ ರೀತಿ ಆಗಿರಲಿಲ್ಲ. ಇದರ ನೈತಿಕಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕಿತ್ತು ಎಂದು ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:11 pm, Sat, 8 April 23

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು