AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CT Ravi: ಸಿಟಿ ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದ ಕೆಎಸ್ ಈಶ್ವರಪ್ಪ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಮಂಗಳವಾರ ಹೇಳಿದರು.

CT Ravi: ಸಿಟಿ ರವಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದ ಕೆಎಸ್ ಈಶ್ವರಪ್ಪ
ಸಿಟಿ ರವಿ
ಗಣಪತಿ ಶರ್ಮಾ
|

Updated on:Apr 25, 2023 | 4:40 PM

Share

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ಅವರೇ ಮುಂದಿನ ಮುಖ್ಯಮಂತ್ರಿ ಆಗಲಿ (Next CM Of Karnataka) ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಮಂಗಳವಾರ ಹೇಳಿದರು. ಚಿಕ್ಕಮಗಳೂರಿನ ನಿಡಘಟ್ಟದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರವಿ ಮುಂದಿನ ಮುಖ್ಯಮಂತ್ರಿ ಆಗಲೆಂದು ಬಹಿರಂಗ ಸಭೆಯಲ್ಲಿಯೇ ಹೇಳಿದರು. ಚಿಕ್ಕಮಗಳೂರಿನಿಂದ ಸಿಟಿ ರವಿ ಅವರಿಗೆ ಮತ ನೀಡಿ ಅವರನ್ನು ಗೆಲ್ಲಿಸಿ. ಅವರು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಹೇಳಿದರು. ಸೋಮವಾರವಷ್ಟೇ ಮೈಸೂರಿನಲ್ಲಿ ಮಾತನಾಡಿದ್ದ ರವಿ, ಮುಖ್ಯಮಂತ್ರಿ ಆಗುವ ಇಂಗಿತ ವ್ಯಕ್ತಪಡಿಸಿದ್ದರು.

ಬಿಜೆಪಿ ಅಧಿಕಾರಕ್ಕೆ ಬಂದರೆ ಲಿಂಗಾಯತ ಸಮುದಾಯದವರನ್ನು ಮುಂದಿನ ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂಬ ಒತ್ತಾಯಗಳ ನಡುವೆ ಇದೀಗ ಈಶ್ವರಪ್ಪ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಮತ್ತೊಂದೆಡೆ, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಮುಂದುವರಿಸಬೇಕು ಎಂಬ ಕೂಗೂ ಬಿಜೆಪಿಯ ಒಂದು ವಲಯದಲ್ಲಿ ಕೇಳಿಬರುತ್ತಿದೆ.

ಕೆಎಸ್ ಈಶ್ವರಪ್ಪ ಅವರು ಕೆಲವು ದಿನಗಳ ಹಿಂದಷ್ಟೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಆದಾಗ್ಯೂ, ಪಕ್ಷದ ಅಭ್ಯರ್ಥಿಗಳ ಪ್ರಚಾರ ಮಾಡುವುದಾಗಿಯೂ ಬಿಜೆಪಿಯನ್ನು ರಾಜ್ಯದಲ್ಲಿ ಮರಳಿ ಅಧಿಕಾರಕ್ಕೆ ತರಲು ಶ್ರಮಿಸುವುದಾಗಿಯೂ ಘೋಷಿಸಿದ್ದಾರೆ.

ಇದನ್ನೂ ಓದಿ: KS Eshwarappa: ಚುನಾವಣಾ ರಾಜಕೀಯಕ್ಕೆ ಹಿಂದೂ ಫೈರ್ ಬ್ರಾಂಡ್ ಗುಡ್ ​ಬೈ: ಕೆಎಸ್ ಈಶ್ವರಪ್ಪ ರಿಯಾಕ್ಷನ್ ಹೀಗಿದೆ

‘ದೇಶದ್ರೋಹಿ ಮುಸ್ಲಿಮರ ಮತ ಬೇಡ’

ದೇಶದ್ರೋಹಿ ಮುಸ್ಲಿಮರ ಮತ ನಮಗೆ ಬೇಕಿಲ್ಲ. ಇದನ್ನು ನಿನ್ನೆಯೂ ಹೇಳಿದ್ದೇನೆ. ಇಂದು ಹಾಗೂ ನಾಳೆಹಯೂ ಇದನ್ನೇ ಪುನರುಚ್ಚರಿಸುತ್ತೇನೆ ಎಂದು ಈಶ್ವರಪ್ಪ ಹೇಳಿದರು. ರಾಷ್ಟ್ರಭಕ್ತ ಮುಸ್ಲಿಮರು ಬಿಜೆಪಿ ಜೊತೆಯೇ ಇದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರ. ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿಯನ್ನು ಜಾತಿವಾದಿ ಎನ್ನುತ್ತಾರೆ. ಒಕ್ಕಲಿಗರು ನನ್ನ ಹಿಂದೆ ಬನ್ನಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎನ್ನುತ್ತಾರೆ. ಸಿದ್ದು-ಡಿಕೆಶಿ ನೇರವಾಗಿ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಗೆ ಕೋಮುವಾದಿ ರಾಜಕಾರಣ ಎನ್ನುತ್ತಾರೆ ಎಂದು ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಸಿಟಿ ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿರುವುದು ನಮ್ಮ ಹೆಮ್ಮೆ. ಅವರು ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದಾರೆ ಎಂದರು.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Tue, 25 April 23

Follow Us
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!