AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kudachi Election Result: ಕುಡಚಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಮಹೇಂದ್ರ ಕೆ ತಮ್ಮಣ್ಣನವರ್​​ಗೆ ಗೆಲುವು

Kudachi Assembly Election Result 2023 Live Counting Updates: ಕುಡಚಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿಯೂ ರಾಜೀವ್ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಇವರ ಪ್ರತಿಸ್ಪರ್ಧಿಗಳಾಗಿ ಜೆಡಿಎಸ್ ನಿಂದ ಆನಂದ್ ಮಾಳಗಿ, ಕಾಂಗ್ರೆಸ್ ಪಕ್ಷದ ಮಹೇಂದ್ರ ಕೆ ತಮ್ಮಣ್ಣನವರ್ ಚುನಾವಣಾ ಕಣದಲ್ಲಿದ್ದಾರೆ

Kudachi Election Result: ಕುಡಚಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಮಹೇಂದ್ರ ಕೆ ತಮ್ಮಣ್ಣನವರ್​​ಗೆ ಗೆಲುವು
ಪಿ.ರಾಜೀವ್
ರಶ್ಮಿ ಕಲ್ಲಕಟ್ಟ
|

Updated on:May 13, 2023 | 6:46 PM

Share

Kudachi Assembly Election Results 2023: ಕುಡಚಿಯನ್ನು ಸೂಫಿ ಸಂತರ ನಾಡು ಎಂದು ಕರೆಯಲಾಗುತ್ತದೆ. ಕುಡಚಿ ಕ್ಷೇತ್ರದಲ್ಲಿ (Kudachi Assembly Constituency ) ಕಾಂಗ್ರೆಸ್ ಪಕ್ಷದ ಮಹೇಂದ್ರ ಕೆ ತಮ್ಮಣ್ಣನವರ್ ಗೆದ್ದಿದ್ದಾರೆ. ಇದು ಎಸ್‌ಸಿ ಮೀಸಲು ಕ್ಷೇತ್ರವಾಗಿದ್ದರೂ, ಕ್ಷೇತ್ರದಲ್ಲಿ ದಲಿತರ ಪ್ರಾಬಲ್ಯವಿಲ್ಲ. ದಲಿತ ಅಭ್ಯರ್ಥಿಗಳು ಗೆಲ್ಲಲು ಪ್ರಬಲ ಸಮುದಾಯಗಳು ಅತ್ಯಗತ್ಯ. ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರ ಮತಗಳೇ ನಿರ್ಣಾಯಕ ಪಾತ್ರ ವಹಿಸುತ್ತವೆ.ರಾಯಭಾಗ ಕ್ಷೇತ್ರದಿಂದ ಬೇರ್ಪಟ್ಟು 2008ರಲ್ಲಿ ರಚನೆಯಾದ ಕುಡಚಿ ವಿಧಾನಸಭಾ ಕ್ಷೇತ್ರ ಇದುವರೆಗೆ ಮೂರು ವಿಧಾನಸಭಾ ಚುನಾವಣೆಗಳನ್ನು ಕಂಡಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌, ಬಿಜೆಪಿ ಮತ್ತು ಬಿಎಸ್‌ಆರ್‌ ಕಾಂಗ್ರೆಸ್‌ ತಲಾ ಒಂದು ಬಾರಿ ಗೆಲುವು ಸಾಧಿಸಿವೆ.

2008ರಲ್ಲಿ ಕ್ಷೇತ್ರದಲ್ಲಿ ಮೊದಲ ಚುನಾವಣೆ ನಡೆದಾಗಲೇ ಕಾಂಗ್ರೆಸ್‌, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಪಿ ರಾಜೀವ್‌ ನಡುವೆ ನೇರ ಹಣಾಹಣಿ ನಡೆದಿತ್ತು. ಇದರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಘಾಟಗೆ ಶಾಮ ಭೀಮ ಗೆದ್ದಿದ್ದರು. ಪಿ ರಾಜೀವ್ ಮೂರನೇ ಸ್ಥಾನಗಳಿಸಿದ್ದರು. 2013ರ ಚುನಾವಣೆ ವೇಳೆಗೆ ಬಿಜೆಪಿಯಿಂದ ಬಂಡೆದ್ದ ಶ್ರೀರಾಮುಲು ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷ ರಚಿಸಿದ್ದು, ಪಿ ರಾಜೀವ್ ಬಿಎಸ್‌ಆರ್‌ ಸಿಪಿ ಸೇರ್ಪಡೆಯಾದರು. ಅಲ್ಲಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಘಾಟಗೆ ಶಾಮ ಭೀಮ ಅವರನ್ನು ಪರಾಭವಗೊಳಿಸಿ ಶಾಸಕರಾದರು. 2018ರ ಚುನಾವಣೆ ಹೊತ್ತಿಗೆ ಬಿಎಸ್‌ಆರ್‌ ಕಾಂಗ್ರೆಸ್‌ ಬಿಜೆಪಿಯೊಂದಿಗೆ ವಿಲೀನವಾಯಿತು. ಬಿಜೆಪಿಯಿಂದ ಸ್ಪರ್ಧಿಸಿದ ರಾಜೀವ್ 67,781 ಮತಗಳನ್ನು ಪಡೆದು ಗೆಲುವು ಸಾಧಿಸಿದರು.

ಈ ಬಾರಿಯೂ ರಾಜೀವ್ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಇವರ ಪ್ರತಿಸ್ಪರ್ಧಿಗಳಾಗಿ ಜೆಡಿಎಸ್ ನಿಂದ ಆನಂದ್ ಮಾಳಗಿ, ಕಾಂಗ್ರೆಸ್ ಪಕ್ಷದ ಮಹೇಂದ್ರ ಕೆ ತಮ್ಮಣ್ಣನವರ್ ಚುನಾವಣಾ ಕಣದಲ್ಲಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 1:54 am, Sat, 13 May 23

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..