
Kunigal Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಲಿಂಗಾಯತ ಮತ್ತು ಕುರುಬ ಸಮುದಾಯದ ಮತಗಳೇ ನಿರ್ಣಾಯಕವಾಗಿರುವ ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಿ ಕೃಷ್ಣಕುಮಾರ್ ಅವರು ಕಣದಲ್ಲಿದ್ದರೆ, ಕಾಂಗ್ರೆಸ್ನಿಂದ ಡಾ.ಹೆಚ್.ಡಿ. ರಂಗನಾಥ್, ಜೆಡಿಎಸ್ನಿಂದ ರವಿ ಬಿ ಅವರು ಕಣದಲ್ಲಿದ್ದಾರೆ. ಈ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷ ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಜಯರಾಮ್ ಕಣದಲ್ಲಿದ್ದಾರೆ.
ಅಪ್ಪ-ಮಗ, ತಜ್ಞ ವೈದ್ಯರು, ಬ್ಯಾಂಕ್ ರಾಜ್ಯಾಧ್ಯಕ್ಷರು ಕುಣಿಗಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕುಣಿಗಲ್ ವಿಧಾನಸಭೆ ಹಾಲಿ ಶಾಸಕ ಡಾ. ರಂಗನಾಥ್ ಅವರು ಕಾಂಗ್ರೆಸ್ನಿಂದ ಮತ್ತೊಮ್ಮೆ ಕಣಕ್ಕಿಳಿದಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸಂಬಂಧಿಯೂ ಆಗಿದ್ದಾರೆ. ಜೆಡಿಎಸ್ನಿಂದ ಡಾ.ಬಿ.ಎನ್.ರವಿ ಅವರು ಸ್ಪರ್ಧಿಸಿದ್ದು, ಬಿಜೆಪಿಯಿಂದ ರಾಜ್ಯ ಪ್ರಾಥಮಿಕ ಭೂ ಅಭಿವೃದ್ದಿ ಬ್ಯಾಂಕ್ನ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್ ಕಣದಲ್ಲಿದ್ದಾರೆ.
ಪಕ್ಷೇತರವಾಗಿ 2008ರಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಬಿಬಿ ರಾಮಸ್ವಾಮಿಗೌಡ ಮತ್ತು ನಿವೃತ್ತ ಹೆಡ್ ಕಾನ್ಸ್ಟೇಬಲ್ ತಿರುಮಲೇಗೌಡ ಅವರು ಕಣದಲ್ಲಿದ್ದಾರೆ. ಆಮ್ ಆದ್ಮಿ ಪಕ್ಷ ಮೊದಲ ಚುನಾವಣೆ ಎದುರಿಸುತ್ತಿದೆ.
ಲಿಂಗಾಯತ ಮತ್ತು ಒಕ್ಕಲಿಗ ಮತಗಳೇ ನಿರ್ಣಾಯಕವಾಗಿರುವ ಈ ಕ್ಷೇತ್ರದಿಂದ 2023 ರ ಚುನಾವಣೆಯಲ್ಲಿ ಪ್ರಮುಖ ಮೂರು ಪಕ್ಷಗಳ ಅಭ್ಯರ್ಥಿಗಳು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪಕ್ಷೇತರ ಅಭ್ಯರ್ಥಿ ರಾಮಸ್ವಾಮಿ ಕೂಡ ಒಕ್ಕಲಿಗ ಸಮುದಾಯದವರಾಗಿದ್ದಾರೆ. ಒಟ್ಟಾರೆಯಾಗಿ ಈ ಬಾರಿ ಒಕ್ಕಲಿಗ ಅಭ್ಯರ್ಥಿಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಮತದಾರರು ಯಾರ ಕೈ ಹಿಡಿಯುತ್ತಾರೆ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿದುಬರಲಿದೆ.