AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madikeri Election 2023 Winner: ಮಡಿಕೇರಿ ಕ್ಷೇತ್ರದಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್​ಗೆ ಸೋಲುನುಣಿಸಿದ ಕಾಂಗ್ರೆಸ್​ನ ಡಾ. ಮಂಥರ್ ಗೌಡ

Dr. Manthar Gowda: ರಾಜ್ಯ ವಿಧಾನಸಭಾ ಚುನಾವಣೆ 2023 ಫಲಿತಾಂಶ ಪ್ರಕಟವಾಗಿದ್ದು ಮಡಿಕೇರಿ ಕ್ಷೇತ್ರವು ಕಾಂಗ್ರೆಸ್ ಪಾಲಾಗಿದೆ. ಬಿಜೆಪಿಯ ಅಪ್ಪಚ್ಚು ರಂಜನ್ ಎಂ.ಪಿ. ವಿರುದ್ಧ ಡಾ. ಮಂಥರ್ ಗೌಡ 4 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Madikeri Election 2023 Winner: ಮಡಿಕೇರಿ ಕ್ಷೇತ್ರದಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್​ಗೆ ಸೋಲುನುಣಿಸಿದ ಕಾಂಗ್ರೆಸ್​ನ ಡಾ. ಮಂಥರ್ ಗೌಡ
ಡಾ. ಮಂಥರ್ ಗೌಡ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 13, 2023 | 1:09 PM

Share

Madikeri Assembly Election Results 2023: ಬಿಜೆಪಿಯ ಭದ್ರಕೋಟೆಯಾಗಿದ್ದ ಮಡಿಕೇರಿ ವಿಧಾನಸಭಾ ಕ್ಷೇತ್ರ (Madikeri Assembly Constituency) ಕೈ ಪಾಲಾಗಿದೆ. ಐದು ಬಾರಿ ಶಾಸಕರಾಗಿದ್ದ ಬಿಜೆಪಿಯ ಎಂ.ಪಿ. ಅಪ್ಪಚ್ಚು ರಂಜನ್ ಅವರನ್ನು ಕಾಂಗ್ರೆಸ್​ನ ಡಾ. ಮಂಥರ್ ಗೌಡ ಸೋಲಿಸಿದ್ದಾರೆ. ಆದರೆ, ಗೆಲುವಿನ ಅಂತರ 5 ಸಾವಿರ ಮತಗಳಿಗೂ ಕಡಿಮೆ ಇದೆ. ಜೆಡಿಎಸ್​ನಿಂದ ನಾಪಂಡ ಮುತ್ತಪ್ಪ ಸ್ಪರ್ಧಿಸಿ ತ್ರಿಕೋನ ಫೈಟ್ ನಡೆಯುವ ನಿರೀಕ್ಷೆ ಇತ್ತಾದರೂ ಅಂತಿಮವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಮಾತ್ರವೇ ಹಣಾಹಣಿ ನಡೆದಿದೆ.

ಡಾ. ಮಂಥರ್ ಗೌಡ 53,767 ಮತಗಳನ್ನು ಪಡೆದರೆ ಅಪ್ಪಚ್ಚು ರಂಜನ್ 48,975 ಮತಗಳನ್ನು ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಉಳಿದ ಎಲ್ಲಾ ಅಭ್ಯರ್ಥಿಗಳೂ ಠೇವಣಿ ಕಳೆದುಕೊಂಡಿದ್ದಾರೆ. ಮೂರನೇ ಶಕ್ತಿ ಎನಿಸಿದ್ದ ಜೆಡಿಎಸ್​ನ ನಾಪಂಡ ಮುತ್ತಪ್ಪ ಕೇವಲ 4,642 ಮತಗಳನ್ನು ಪಡೆದಿದ್ದಾರೆ. ಉಳಿದ ಬೇರೆ ಅಭ್ಯರ್ಥಿಗಳು ಪಡೆದ ಮತ 1 ಸಾವಿರ ಗಡಿ ದಾಟಿಲ್ಲ.

ಮಡಿಕೇರಿ ವಿಧಾನಸಭಾ ಕ್ಷೇತ್ರ ಚುನಾವಣೆ 2023 ಫಲಿತಾಂಶ ವಿವರ:

  • ಕಾಂಗ್ರೆಸ್: ಡಾ. ಮಂಥರ್ ಗೌಡ– 53,767 ಮತಗಳು
  • ಬಿಜೆಪಿ: ಡಾ. ಅಪ್ಪಚ್ಚುರಂಜನ್– 48,975 ಮತಗಳು
  • ಜೆಡಿಎಸ್: ನಾಪಂಡ ಮುತ್ತಪ್ಪ– 4,642 ಮತಗಳು

ಡಾ. ಮಂಥರ್ ಗೌಡ ಈ ಕ್ಷೇತ್ರದಲ್ಲಿ ಯುವ ಮುಖವಾಗಿ ಕಾಣಿಸಿಕೊಂಡಿದ್ದರು. ಮಾಜಿ ಸಚಿವ ಎ ಮಂಜು ಅವರ ಮಗ ಡಾ. ಮಂಥರ್ ಗೌಡಗೆ ಈ ಅಂಶ ವರದಾನವಾಗಿದೆ. ಮೇಲಾಗಿ, ಕ್ಷೇತ್ರದಲ್ಲಿ ಒಕ್ಕಲಿಗರ ಸಂಖ್ಯೆ ಸಾಕಷ್ಟು ಇರುವುದು ಮಂಥರ್ ಗೌಡರ ಗೆಲುವಿಗೆ ಸಹಕಾರಿ ಆಗಿದೆ. ಸತತವಾಗಿ ಶಾಸಕರಾಗಿದ್ದ ಅಪ್ಪಚ್ಚು ರಂಜನ್ ಅವರ ವಿರೋಧಿ ಅಲೆ ಕ್ಷೇತ್ರದಲ್ಲಿ ಕಂಡುಬಂದಿತ್ತು. ಅಲ್ಲದೇ ಇಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್ಚು ಮತಗಳನ್ನು ಪಡೆಯದೇ ಇದ್ದದ್ದೂ ಕೂಡ ಅಪ್ಪಚ್ಚು ರಂಜನ್ ಗೆಲುವಿನ ಓಟಕ್ಕೆ ಹಿನ್ನಡೆ ತಂದಿರಬಹುದು ಎಂದು ವಿಶ್ಲೇಷಿಸಲಾಗಿದೆ.

ಇದೇ ವೇಳೆ ಕೊಡಗಿನ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಸ್ವೀಪ್ ಮಾಡಿದೆ. ವಿರಾಜಪೇಟೆ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಚುನಾವಣೆ ಫಲಿತಾಂಶ ಲೈವ್ ಅಪ್​ಡೇಟ್​ಗೆ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ