AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Magadi Election Results: ಮಾಗಡಿಯಲ್ಲಿ ಹಾಲಿ ಶಾಸಕನನ್ನು ಸೋಲಿಸಿ ಜಯ ಸಾಧಿಸಿದ ಬಾಲಕೃಷ್ಣ

Magadi Assembly Election Result 2023 Live Counting Updates: ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಎ.ಮಂಜುನಾಥ್‌, ಬಿಜೆಪಿಯಿಂದ ಪ್ರಸಾದ್‌ ಗೌಡ ಹಾಗೂ ಕಾಂಗ್ರೆಸ್​ನಿಂದ ಹೆಚ್‌.ಸಿ.ಬಾಲಕೃಷ್ಣ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Magadi Election Results: ಮಾಗಡಿಯಲ್ಲಿ ಹಾಲಿ ಶಾಸಕನನ್ನು ಸೋಲಿಸಿ ಜಯ ಸಾಧಿಸಿದ ಬಾಲಕೃಷ್ಣ
ಹೆಚ್‌.ಸಿ.ಬಾಲಕೃಷ್ಣ, ಎ.ಮಂಜುನಾಥ್‌, ಪ್ರಸಾದ್‌ ಗೌಡ
Follow us
ಆಯೇಷಾ ಬಾನು
|

Updated on:May 13, 2023 | 5:03 PM

Magadi Assembly Elections Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್​ನಿಂದ ಹೆಚ್‌.ಸಿ.ಬಾಲಕೃಷ್ಣ 93,956 ಮತಗಳಿಂದ ಜಯ ಗಳಿಸಿದ್ದಾರೆ. ಜೆಡಿಎಸ್​ನ ಹಾಲಿ ಶಾಸಕ ಎ.ಮಂಜುನಾಥ್‌ 82,281 ಮತಗಳನ್ನು ಪಡೆದಿದ್ದಾರೆ ಹಾಗೂ ಬಿಜೆಪಿಯ ಪ್ರಸಾದ್‌ ಗೌಡ 20, 073 ಮತಗಳನ್ನು ಗಳಿಸಿದ್ದಾರೆ.

ಮಾಗಡಿ ವಿಧಾನಸಭಾ ಕ್ಷೇತ್ರದಿಂದ (Magadi Assembly Constituency) ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಕ್ಷೇತ್ರದ ಶಾಸಕರಾಗಿರುವ ಎ.ಮಂಜುನಾಥ್‌ ಸ್ಪರ್ಧಿಸಿದ್ರು. ಇವರು ಜೆಡಿಎಸ್ ಜಿಲ್ಲಾಧ್ಯಕ್ಷರು ಮಾತ್ರವಲ್ಲದೇ, ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪರಮಾಪ್ತರು. ಕಾಂಗ್ರೆಸ್​ನಲ್ಲಿದ್ದ ಮಂಜುನಾಥ್, ಜೆಡಿಎಸ್​ಗೆ ಬಂದು 2018ರ ಚುನಾವಣೆಯಲ್ಲಿ ಸ್ವರ್ಧೆ ಮಾಡಿ ಹೆಚ್ಚು ಮತಗಳ ಅಂತರದಿಂದ ಗೆದಿದ್ದರು. ಈಗಾಗಲೇ ಪಂಚರತ್ನ ಯಾತ್ರೆ ನಡೆಸಿ ಕುಮಾರಸ್ವಾಮಿ ಪಾಂಚಜನ್ಯ ಮೊಳಗಿಸಿದ್ದರೆ, ಮನೆ ಮನೆ ಮಂಜಣ್ಣ ಕಾರ್ಯಕ್ರಮದ ಮೂಲಕ ಮತದಾರರ ಮನ ಗೆಲ್ಲಲ್ಲು ಹಾಲಿ ಶಾಸಕ ಮಂಜುನಾಥ್ ಹರಸಾಹಸ ಪಟ್ಟಿದ್ದರು.

ಮಾಜಿ ಶಾಸಕ ಹೆಚ್‌.ಸಿ.ಬಾಲಕೃಷ್ಣ ನಾಲ್ಕು ಭಾರಿ ಶಾಸಕರಾಗಿದ್ದಾರೆ. ಮೊದಲ ಬಾರಿಗೆ ಬಿಜೆಪಿಯಿಂದ ಗೆಲುವು ಸಾಧಿಸಿದ್ದರೆ, ಮೂರು ಬಾರಿಯು ಜೆಡಿಎಸ್‌ ನಿಂದ ಗೆಲುವು ಸಾಧಿಸಿದ್ದರು. ಈಗ ಕಾಂಗ್ರೆಸ್‌ ನಿಂದ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದು, ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಕ್ಷೇತ್ರದಲ್ಲಿ ಒಮ್ಮೆ ಮಾತ್ರ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಹೀಗಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಸಂಸದ ಡಿ.ಕೆ.ಸುರೇಶ್‌ ಸಹ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡಿದ್ದಾರೆ. ಜನಾರ್ಶಿವಾದ ಯಾತ್ರೆ, ಪ್ರಜಾ ಧ್ವನಿ, ಕಾಂಗ್ರೆಸ್‌ ಗ್ಯಾರೆಂಟಿ ಕಾರ್ಯಕ್ರಮಗಳ ಮೂಲಕ ಮತದಾರರನ್ನು ತಲುಪಿದ್ದಾರೆ.

ಹೊನ್ನು ಮಡಿಲು, ಸೀಮಂತ ಕಾರ್ಯಕ್ರಮ, ಮೂಗುತಿ ವಿತರಣೆ ಮೂಲಕ ಪ್ರಸಾದ್‌ ಗೌಡ ಭರ್ಜರಿ ಪ್ರಚಾರ ನಡೆಸಿದ್ದರು. ಇವರ ಬೆನ್ನಿಗೆ ಸಚಿವ ಅಶ್ವ ನಾರಾಯಣ್ ನಿಂತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 1:04 am, Sat, 13 May 23

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ