ಮೋದಿ ವಿರುದ್ಧದ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಯುಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ

ಮೋದಿ ವಿಷ ಸರ್ಪ ಇದ್ದಂಗೆ, ನೆಕ್ಕಿದರೆ ಸತ್ತು ಹೋಗುತ್ತಾರೆ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿವಾದ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಯೂಟರ್ನ್ ಹೊಡೆದ ಅವರು, ಬಿಜೆಪಿ ಹಾವು ಇದ್ದಂತೆ ಎಂದು ಹೇಳಿದ್ದಾರೆ.

ಮೋದಿ ವಿರುದ್ಧದ ಹೇಳಿಕೆ ವಿವಾದ ಪಡೆಯುತ್ತಿದ್ದಂತೆ ಯುಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ ಮತ್ತು ನರೇಂದ್ರ ಮೋದಿ
Follow us
|

Updated on:Apr 27, 2023 | 5:32 PM

ಗದಗ: ಪ್ರಧಾನಿ ನರೇಂದ್ರ ಮೋದಿ (Narendra Modi) ವಿಷದ ಹಾವಿದ್ದಂತೆ, ನೆಕ್ಕಿದರೆ ಸತ್ತು ಹೋಗುತ್ತಾರೆ ಎಂದು ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge), ಸದ್ಯ ಯೂಟರ್ನ್ ಹೊಡೆದು ಮೈಮೇಲೆ ಎಳೆದುಕೊಂಡ ವಿವಾದವನ್ನು ಹೊಡೆದೋಡಿಸುವ ಪ್ರಯತ್ನ ಮಾಡಿದ್ದಾರೆ. ನಾನು ಮೋದಿಗೆ ವಿಷದ ಹಾವು ಅಂತ ಹೇಳಿಲ್ಲ, ಬಿಜೆಪಿಗೆ ಹೇಳಿದ್ದಾಗಿ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯವಾಗಿ ಟೀಕಿಸುವ ಭರದಲ್ಲಿ ಕೆಲವೊಮ್ಮೆ ತೀರಾ ವೈಯಕ್ತಿಕ ವಿಚಾರವಾಗಿ ಇಳಿಯುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ದೇಶದ ಪ್ರಧಾನಿ ಎಂಬುದನ್ನು ಲೆಕ್ಕಿಸದೆ ವೈಯಕ್ತಿಕವಾಗಿ ಟೀಕಿಸುತ್ತಾರೆ. ಅದರಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ನಾಲಗೆ ಹರಿಬಿಟ್ಟು ಸುಟ್ಟುಕೊಂಡಿದ್ದಾರೆ. ಹಾಗಿದ್ದರೆ ತಮ್ಮ ವಿವಾದಾತ್ಮಕ ಹೇಳಿಕೆಗೆ ಖರ್ಗೆ ಕೊಟ್ಟ ಸ್ಪಷ್ಟನೆ ಏನು?

ಇದನ್ನೂ ಓದಿ: ಮೋದಿ ವಿಷ ಸರ್ಪ ಇದ್ದಂಗೆ, ನೆಕ್ಕಿದ್ರೆ ಸತ್ತ: ಪ್ರಧಾನಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಗದಗ ಜಿಲ್ಲೆಯ ರೋಣದಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಖರ್ಗೆ, ನಾನು ಪ್ರಧಾನಿ ಮೋದಿಯನ್ನು ವಿಷದ ಹಾವು ಎಂದು ಹೇಳಿಲ್ಲ. ಭಾರತೀಯ ಜನತಾ ಪಾರ್ಟಿ ಹಾವು ಇದ್ದಂತೆ, ಅದನ್ನು ನೆಕ್ಕಿ ನೋಡುತ್ತೇನೆ ಅಂದರೆ ಸತ್ತು ಹೋಗ್ತಾರೆ ಅಂತಾ ಹೇಳಿದ್ದೆ. ವೈಯಕ್ತಿಕವಾಗಿ ಯಾರಿಗೂ ಹೇಳಿಲ್ಲ, ಯಾರ ಹೆಸರು ಹೇಳಿಲ್ಲ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ವಿರುದ್ಧ ನಾಲಗೆ ಹರಿಬಿಟ್ಟದ್ದು ಇದೇ ಮೊದಲೇನಲ್ಲ. ಈ ಹಿಂದೆಯೂ ಮೋದಿಯನ್ನು ವೈಯಕ್ತಿವಾಗಿ ಟೀಕಿಸಿದ್ದು. ಹೌದು, ಮೋದಿ ಓರ್ವ ನರಹಂತಕ ಎಂದು ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು. ಇದೀಗ ಮತ್ತೊಮ್ಮೆ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ‌ ಮತಯಾಚನೆ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಯನ್ನು ಟೀಕಿಸಲು ಹೋಗಿ ವಿವಾದದ ಸುಳಿಕೆ ಸಿಲುಕಿಕೊಂಡಿದ್ದಾರೆ. ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದರೆ ಸತ್ತು ಹೋಗುತ್ತಾರೆ. ಮೋದಿ ಓರ್ವ ಸುಳ್ಳುಗಾರ. ಕಪ್ಪು ಹಣ ತಂದು 15 ಲಕ್ಷ ಕೊಡುತ್ತೇನೆ ಅಂದರು. ಆದರೆ ಇನ್ನೂ ಕೊಟ್ಟಿಲ್ಲ. ಎಲ್ಲ ಹಣ ಅದಾನಿ ಹತ್ತಿರ ಇಟ್ಟಾರೆನೋ? 18 ಕೋಟಿ ಯುವಕರಿಗೆ ನೌಕರಿ‌ ಕೊಡಬೇಕಿತ್ತು. ಆದರೆ ಉದ್ಯೋಗ ಕೊಟ್ಟಿಲ್ಲ. ಅವರು ಸುಳ್ಳಿನ ಸರದಾರ ಎಂದು ಹೇಳಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:05 pm, Thu, 27 April 23

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್