AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ದೊಡ್ಡ ಪೆಟ್ಟು ಕೊಟ್ಟ ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರು ಜಿಲ್ಲೆ. ಜೊತೆಗೆ ಕಾಂಗ್ರೆಸ್ ಭದ್ರಕೋಟೆ. ಆದ್ರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆರನ್ನ ಸೋಲಿಸಿದ್ದ ಬಿಜೆಪಿ ನಾಯಕರು, ಈ ಬಾರಿ ಖರ್ಗೆ ತವರಲ್ಲಿಯೇ ಹೆಚ್ಚಿನ ಸ್ಥಾನ ಗೆಲ್ಲೋ ಮೂಲಕ ಖರ್ಗೆ ಅವರಿಗೆ ಟಕ್ಕರ್ ಕೊಡಲು ಮುಂದಾಗಿದ್ದರು. ಆದ್ರೆ, ಖರ್ಗೆ ಅವರ ಏದುರೇಟಿಗೆ ಕಮಲ ಕಲಬುರಗಿಯಲ್ಲಿ ಬಾಡಿದೆ. ಆ ಮೂಲಕ ಕಲಬುರಗಿ ತನ್ನ ಕೋಟೆ, ಕಾಂಗ್ರಸ್ ಕೋಟೆ ಅನ್ನೋದನ್ನ ಖರ್ಗೆ ಸಾಭೀತು ಮಾಡಿದ್ದಾರೆ.

ಈ ಬಾರಿ ತವರು ಜಿಲ್ಲೆಯಲ್ಲಿ ಬಿಜೆಪಿಗೆ ದೊಡ್ಡ ಪೆಟ್ಟು ಕೊಟ್ಟ ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 14, 2023 | 7:03 AM

ಕಲಬುರಗಿ: ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಗೆಲವು ಸಾಧಿಸುವುದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತಿಷ್ಟೆಯಾಗಿತ್ತು. ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವುದರ ಜೊತೆಗೆ, ತವರು ಜಿಲ್ಲೆ ಕಲಬುರಗಿ(Kalaburagi)ಯಲ್ಲಿ ಕೂಡ ಹೆಚ್ಚಿನ ಸ್ಥಾನ ಗೆಲ್ಲುವುದು ಖರ್ಗೆ ಅವರಿಗೆ ಅನಿವಾರ್ಯವಾಗಿತ್ತು. ಯಾಕೆಂದರೆ ಪ್ರಧಾನಿ ಮೋದಿ, ಅಮಿತ್ ಶಾ ಅವರು ಖರ್ಗೆರನ್ನ ಟಾರ್ಗೆಟ್ ಮಾಡಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆರನ್ನ ಸೋಲಿಸಿದ್ದ ಬಿಜೆಿಪಿ, ಈ ಬಾರಿ ಖರ್ಗೆ ತವರಲ್ಲಿಯೇ ಬಿಸಿ ಮುಟ್ಟಿಸಬೇಕು. ಹೆಚ್ಚಿನ ಸ್ಥಾನ ಗೆದ್ದು, ಖರ್ಗೆ ಅವರಿಗೆ ದೊಡ್ಡ ಪೆಟ್ಟು ನೀಡಬೇಕು. ತವರು ಭಾಗದಲ್ಲಿಯೇ ಖರ್ಗೆ ಶಕ್ತಿ ಕುಂದಿದೆ ಅನ್ನೋದನ್ನ ಈ ಚುನಾವಣೆಯಲ್ಲಿ ಸಾರಿ ಸಾರಿ ಹೇಳಬೇಕು ಅನ್ನೋ ಲೆಕ್ಕಾಚಾರ ಹಾಕಿಕೊಂಡಿತ್ತು. ಆದ್ರೆ, ಬಿಜೆಪಿಯ ಎಲ್ಲಾ ಲೆಕ್ಕಾಚಾರಗಳನ್ನು ಕೂಡ ಖರ್ಗೆ ಉಲ್ಟಾ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್​ ಹೆಚ್ಚಿನ ಸ್ಥಾನ ಗೆಲ್ಲುವುದರ ಜೊತೆಗೆ ತವರು ಜಿಲ್ಲೆಯಲ್ಲಿ ಕೂಡ ಹೆಚ್ಚಿನ ಸ್ಥಾನ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇನ್ನು ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ನನಗೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಅನ್ನೋದನ್ನ ಸಾರಿ ಸಾರಿ ಹೇಳುವ ಮೂಲಕ, ನಾನು ಸಿಎಂ ಹುದ್ದೆಯ ರೇಸ್​ನಲ್ಲಿ ಇಲ್ಲ ಎನ್ನುವುದನ್ನ ತೋರಿಸಿ, ಸಿದ್ದರಾಮಯ್ಯ, ಡಿ. ಕೆ ಶಿವಕುಮಾರ್ ಅವರಿಗೆ ಹುರುಪು ತುಂಬುವ ಕೆಲಸ ಮಾಡಿದ್ದ ಖರ್ಗೆ, ಅದರಲ್ಲಿ ಯಶಸ್ಸು ಕಂಡಿದ್ದಾರೆ. ರಾಜ್ಯದ ಅನೇಕ ಕಡೆ ಪ್ರಚಾರ ಸಭೆಯಲ್ಲಿ ಭಾಗಿಯಾಗಿ, ತಮ್ಮ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಇನ್ನು ಕಾಂಗ್ರೆಸ್​ನಲ್ಲಿ ಅಪಸ್ವರಕ್ಕೆ ಅವಕಾಶ ಇಲ್ಲದಂತೆ ಪರಿಸ್ಥಿತಿಯನ್ನ ಜಾಣತನದಿಂದ ನಿಭಾಯಿಸಿದ್ದ ಖರ್ಗೆ, ತವರು ಜಿಲ್ಲೆ ಸೇರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಂತೆ ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇದನ್ನೂ ಓದಿ:Karnataka Assembly Polls Results: ಕರ್ನಾಟಕದ ಮತದಾರ ಪ್ರಬುದ್ಧ, ವಿವೇಚನೆಯಿಂದ ಮತ ಚಲಾಯಿಸುತ್ತಾನೆ: ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಕಲಬುರಗಿ ಜಿಲ್ಲೆಯಲ್ಲಿ ಕೊನೆಯ ಮೂರು ದಿನಗಳ ಕಾಲ ಇದ್ದು, ಪ್ರಚಾರ ನಡೆಸಿದ್ದ ಮಲ್ಲಿಕಾರ್ಜುನ ಖರ್ಗೆ. ಕಲಬುರಗಿ ಮಣ್ಣಿನ ಮಗ ಅಸ್ತ್ತ್ರವನ್ನು ಪ್ರಯೋಗಿಸಿದ್ದರು. ನಾನು ಈ ಮಣ್ಣಿನ ಮಗ. ಇಲ್ಲಿಯೇ ಹುಟ್ಟಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಹೀಗಾಗಿ ನೀವು ನನಗೆ ಮತ ಕೊಡಬೇಕು. ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದು ಮತ ನೀಡಬೇಕು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನ ಬಿಟ್ಟು, ಕಾಂಗ್ರೆಸ್ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದರು. ಈ ಅಸ್ತ್ರ ಫಲ ನೀಡಿದ್ದು, ಜಿಲ್ಲೆಯ 9 ಕ್ಷೇತ್ರಗಳ ಪೈಕಿ, ಕಾಂಗ್ರೆಸ್ 7ರಲ್ಲಿ ಜಯ ಸಾಧಿಸಿದೆ. ಆ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ತವರು ಜಿಲ್ಲೆ, ಕಾಂಗ್ರೆಸ್ ಮತ್ತು ತನ್ನ ಭದ್ರಕೋಟೆ ಅನ್ನೋದನ್ನ ಸಾಭೀತು ಮಾಡಿದ್ದಾರೆ.

ಕಲಬುರಗಿ ಮಾತ್ರವಲ್ಲದೆ, ನೆರೆಯ ಬೀದರ್, ಯಾದಗಿರಿ, ರಾಯಚೂರು, ಬಳ್ಳಾರಿ ಜಿಲ್ಲೆಯಲ್ಲಿ ಕೂಡ ಪ್ರಚಾರ ಮಾಡಿದ್ದ ಖರ್ಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುವಲ್ಲಿ ಹೆಚ್ಚಿನ ಮುತುವರ್ಜಿವಹಿಸಿ, ಯಶಸ್ಸು ಕಂಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆರನ್ನ ತವರಲ್ಲಿಯೇ ಕಟ್ಟಿಹಾಕುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಆದ್ರೆ, ತವರಲ್ಲಿ ನನ್ನ ಬಗ್ಗಿಸೋಲು ಆಗಲ್ಲವೆಂದು ಖರ್ಗೆ ಸಾಭಿತು ಮಾಡಿದ್ದಾರೆ. ಜೊತೆಗೆ ರಾಜ್ಯದಲ್ಲಿ, ತವರಲ್ಲಿ ಮೋದಿ, ಅಮಿತ್ ಶಾ ಆಟ ನಡೆಯಲ್ಲ ಅನ್ನೋದನ್ನ ತೋರಿಸಿದ್ದಾರೆ.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:01 am, Sun, 14 May 23

ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಶಿವಣ್ಣ, ದರ್ಶನ್ ಅವರನ್ನು ನಿಂದಿಸಿದ್ದು ನಿಜವೇ? ಮನು ಹೇಳಿದ್ದೇನು?
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಡಿಕೆ ಸಹೋದರರು ಕುಮಾರಸ್ವಾಮಿ ಅರೋಗ್ಯದ ಬಗ್ಗೆ ಕಾಮೆಂಟ್ ಮಾಡುತ್ತಿದ್ದಾರೆ
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು