AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರು ಕ್ಷೇತ್ರದ ಮತಎಣಿಕೆ ಗೊಂದಲ: ಹೈಕೋರ್ಟ್​ ಮೊರೆ ಹೋದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ

248 ಮತಗಳ ಅಂತರದಿಂದ ಕಾಂಗ್ರೆಸ್​ನ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆ ಮರುಎಣಿಕೆಗೆ ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಮಾಲೂರು ಕ್ಷೇತ್ರದ ಮತಎಣಿಕೆ ಗೊಂದಲ: ಹೈಕೋರ್ಟ್​ ಮೊರೆ ಹೋದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ
ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ
ಗಂಗಾಧರ​ ಬ. ಸಾಬೋಜಿ
|

Updated on: May 16, 2023 | 5:01 PM

Share

ಕೋಲಾರ: ಮಾಲೂರು ಕ್ಷೇತ್ರದ ಮತಗಳ ಮರುಎಣಿಕೆ ಕೋರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ (Manjunath Gowda) ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. 248 ಮತಗಳ ಅಂತರದಿಂದ ಕಾಂಗ್ರೆಸ್​ನ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ ಹಿನ್ನೆಲೆ ಮರುಎಣಿಕೆಗೆ ನಿರ್ದೇಶನ ನೀಡುವಂತೆ ಕೋರಿ ಮಂಜುನಾಥಗೌಡ ಮನವಿ ಮಾಡಿದ್ದಾರೆ. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಒಂದು ರೀತಿಯಾದರೆ ಮಾಲೂರು ಕ್ಷೇತ್ರದ ಮತಎಣಿಕೆ ಮಾತ್ರ ಇಡೀ ಜಿಲ್ಲೆಯ ಹಾಗೂ ರಾಜ್ಯದ ಜನರಿಗೆ ಕುತೂಹಲಕ್ಕೆ ಕಾರಣವಾಗಿತ್ತು. ಕಾರಣ ಬಿಜೆಪಿ, ಕಾಂಗ್ರೆಸ್​ ಮತ್ತು ಜೆಡಿಎಸ್​​ ಮೂರು ಪಕ್ಷಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ಆರಂಭದಲ್ಲಿ ​ಕಾಂಗ್ರೆಸ್ ಅಭ್ಯರ್ಥಿ, ನಂತರ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ನಂತರ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ ಒಬ್ಬರಾದ ಮೇಲೆ ಒಬ್ಬರು ಮುನ್ನಡೆ ಸಾಧಿಸಿಕೊಂಡು ಬಂದಿದ್ದರು. ಆದರೆ, ಒಂದು ಹಂತದಲ್ಲಿ ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್​ ಕುಮಾರ್​ 1500 ದಿಂದ 2000 ಮತಗಳ ಅಂತರದಲ್ಲಿ ಸುಮಾರು ಏಳೆಂಟು ಸುತ್ತು ಮುನ್ನಡೆ ಸಾಧಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಸ್ಥಾನ; ಪಟ್ಟುಬಿಡದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಬೆಂಬಲಿಗರು ಹೇಳೋದೇನು ನೋಡಿ

ಮರು ಎಣಿಕೆಗೆ ಆಗ್ರಹ

ಕೊನೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಕೇವಲ 248 ಮತಗಳ ಅಂತರದಲ್ಲಿ ಜಯಗಳಿಸುವ ಮೂಲಕ ಕುತೂಹಲಕ್ಕೆ ತೆರೆ ಬಿದ್ದಿತ್ತು. ಆದರೆ ಸ್ಥಳಕ್ಕೆ ಬಂದ ಬಿಜೆಪಿ ಅಭ್ಯರ್ಥಿ ಕೆ.ಎಸ್​.ಮಂಜುನಾಥಗೌಡ ಗೆಲುವಿನ ವಿರುದ್ದ ಪ್ರತಿಭಟಿಸಿ ಮರು ಎಣಿಕೆಗೆ ಆಗ್ರಹಿಸಿದ್ದರು. ಈ ವೇಳೆ ಮರುಎಣಿಕೆ ಮಾಡಿದರಾದರೂ ಬಿಜೆಪಿ ಅಭ್ಯರ್ಥಿ ಕೋರ್ಟ್​ನ ಮೊರೆ ಹೋಗುವುದಾಗಿ ಹೇಳಿದ್ದರು. ಅದರಂತೆಯೇ ಈಗ ಮಂಜುನಾಥಗೌಡ ಪರ ವಕೀಲರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಆಗಿಯೇ ಆಗ್ತಾರೆ, ಒಂದಲ್ಲ ಮೂರು ಟಗರು ಅಡವಿಟ್ಟ ಮೈಸೂರಿನ ಅಭಿಮಾನಿ

ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ವಿವಿಪ್ಯಾಟ್​ಗಳನ್ನು ಅಧಿಕಾರಿಗಳು ಹಾಗೂ ಅಭ್ಯರ್ಥಿಗಳ ಸಮ್ಮುಖದಲ್ಲಿ ಎಣಿಕೆ ಮಾಡಲಾಗಿದೆ. ಅಷ್ಟಾದರೂ ಸಮಾಧಾನಗೊಳ್ಳದ ಮಂಜುನಾಥಗೌಡ ಕೋರ್ಟ್​ನ ಮೊರೆ ಹೋಗಿದ್ದಾರೆ.

ಅವರು ಎಲ್ಲಿಗೆ ಬೇಕಾದ್ರು, ಹೋಗಲಿ: ಕಾಂಗ್ರೆಸ್ ಅಭ್ಯರ್ಥಿ

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಅಭ್ಯರ್ಥಿ, ಅವರು ಎಲ್ಲಿಗೆ ಬೇಕಾದ್ರು, ಹೋಗಲಿ. ಇದು ಜನರು ಕೊಟ್ಟಿರುವ ತೀರ್ಪು. ಅಲ್ಲದೆ ಈ ಬಾರಿ ಕಾಂಗ್ರೆಸ್​ ಸರ್ಕಾರ ಬಂದಿದ್ದು, ನನ್ನ ಕನಸಿನ ಮಾಲೂರು ನಿರ್ಮಾಣ ಮಾಡುವುದಾಗಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ