AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಸಾವು

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತದಾನ ಮಾಡಿದ ನಂತರ ಜಯಣ್ಣ(49) ಎಂಬ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾಸನ: ಮತದಾನ ಮಾಡಿ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ವ್ಯಕ್ತಿ ಸಾವು
ಜಯಣ್ಣ
ಆಯೇಷಾ ಬಾನು
ಆಯೇಷಾ ಬಾನು|

Updated on:May 10, 2023 | 2:06 PM

Share

ಹಾಸನ: ರಾಜ್ಯದೆಲ್ಲೆಡೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ(Karnataka Assembly Election 2023). ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸುತ್ತಿದ್ದಾರೆ. ಹಲವು ಕ್ಷೇತ್ರಗಳಲ್ಲಿ ಶತಾಯುಷಿ ವೃದ್ಧ, ವೈದ್ಧೆಯರು ಮತದಾನ ಮಾಡಿ ಮಾದರಿಯಾಗಿದ್ಧಾರೆ. ಆದ್ರೆ ಹಾಸನದಲ್ಲಿ ಅವಘಡವೊಂದು ಸಂಭವಿಸಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತದಾನ ಮಾಡಿದ ನಂತರ ಜಯಣ್ಣ(49) ಎಂಬ ವ್ಯಕ್ತಿ ಮತಗಟ್ಟೆ ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ(Heart Attack). ಮತದಾನ ಮಾಡಿ ಹೊರಬಂದ ನಂತರ ಜಯಣ್ಣ ಕೊನೆಯುಸಿರೆಳೆದಿದ್ದಾರೆ.

ಮತದಾನ ಮಾಡುವ ಹುಮ್ಮಸ್ಸಿನಲ್ಲಿ ಖುಷಿಯಿಂದಲೇ ಮತಗಟ್ಟೆಗೆ ಬಂದ ಜಯಣ್ಣ ಅವರು ಮತದಾನ ಮಾಡಿ ಹೊರಗೆ ಬರುತ್ತಿದ್ದಂತೆ ಮತಗಟ್ಟೆ ಆವರಣದಲ್ಲೇ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮತದಾನಕ್ಕೆ ಬಂದಿದ್ದ ವೇಳೆ ವೃದ್ಧೆ ಕುಸಿದುಬಿದ್ದು ಸಾವು

ಇನ್ನು ಮತ್ತೊಂದೆಡೆ ಬೆಳಗಾವಿ ಜಿಲ್ಲೆ ಸವದತ್ತಿ-ಯಲ್ಲಮ್ಮ ಕ್ಷೇತ್ರದ ವ್ಯಾಪ್ತಿಯ ಯರಝರ್ವಿ ಗ್ರಾಮದಲ್ಲಿ ಪಾರವ್ವ ಸಿದ್ನಾಳ(70) ಎಂಬ ವೃದ್ಧೆ ಮತದಾನಕ್ಕೆ ಬಂದಿದ್ದ ವೇಳೆ ಕುಸಿದುಬಿದ್ದು ಕೊನೆಯುಸಿರೆಳೆದಿದ್ದಾರೆ. ಮತಗಟ್ಟೆ ಆವರಣದಲ್ಲಿ ಸಾಲಿನಲ್ಲಿ ನಿಂತಿದ್ದ ವೇಳೆ ಲೋ ಬಿಪಿಯಿಂದ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಪಾರವ್ವ ಮೃತದೇಹವನ್ನು ಸಂಬಂಧಿಕರು ಮನೆಗೆ ಕೊಂಡೊಯ್ದಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಸಹೋದರ ಸಂಜಯ್ ಖೇಣಿ ಕಾರು ಅಪಘಾತ

ಇಂದು(ಮೇ.10) ಬೆಳಗಿನ ಜಾವ ಬೀದರ್ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಖೇಣಿ (Ashok Kheny) ಅವರ ಸಹೋದರ ಸಂಜಯ್ ಖೇಣಿ (Sanjay Kheny) ಕಾರ್ ಅಪಘಾತಕ್ಕೊಳಗಾಗಿದೆ. ಜಿಲ್ಲೆಯ ಹಳ್ಳಿಖೇಡ್ ಬಳಿ ಕಾರ್ ಪಲ್ಟಿಯಾಗಿದ್ದು, ಕೂಡಲೇ ಗಾಯಾಳು ಸಂಜಯ್ ಖೇಣಿ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಅಶೋಕ್ ಮಹಾರುದ್ರಪ್ಪ ಖೇಣಿ ಕರ್ನಾಟಕದ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿದ್ದು, ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ (Nandi Infrastructure Corridor Enterprise Ltd) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಜೊತೆಗೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್​ನಲ್ಲಿ ಖೇಣಿ ಅವರು ಕ್ರಿಕೆಟ್ ತಂಡ ಕರ್ನಾಟಕ ಬುಲ್ಡೋಜರ್ಸ್​ನ್ನು ಮುನ್ನಡೆಸಿದ್ದಾರೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 12:56 pm, Wed, 10 May 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ