AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು; ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ; ಐದು ಎಫ್​ಐಆರ್ ದಾಖಲು, ಆರೋಪಿಗಳು ನಾಪತ್ತೆ

ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಐದು ಪೊಲೀಸ್ ದೂರು ದಾಖಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಐದು ಎಫ್‌ಐಆರ್ ದಾಖಲಾಗಿದ್ದು, 29ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಮಂಗಳೂರು; ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ; ಐದು ಎಫ್​ಐಆರ್ ದಾಖಲು, ಆರೋಪಿಗಳು ನಾಪತ್ತೆ
ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ
ಗಣಪತಿ ಶರ್ಮಾ
|

Updated on:May 11, 2023 | 6:17 PM

Share

ಮಂಗಳೂರು: ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಐದು ಪೊಲೀಸ್ ದೂರು ದಾಖಲಾಗಿದೆ. ಕಾವೂರು ಪೊಲೀಸ್ ಠಾಣೆಯಲ್ಲಿ ಐದು ಎಫ್‌ಐಆರ್ ದಾಖಲಾಗಿದ್ದು, 29ಕ್ಕೂ ಹೆಚ್ಚು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಗಲಾಟೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ಕಡೆಯಿಂದ ಒಂದು, ಬಿಜೆಪಿಯಿಂದ ಒಂದು ಹಾಗೂ ಮೂರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚುನಾವಣೆಯ ದಿನವಾದ ಬುಧವಾರ ಸಂಜೆ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು, ಒಬ್ಬರು ಪೊಲೀಸರಿಗೆ ಗಾಯವಾಗಿತ್ತು. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಮಿಥುನ್​ ರೈ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಇದರ ಬೆನ್ನಲ್ಲೇ ಕಾವೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್​ 144 ಜಾರಿ ಮಾಡಲಾಗಿತ್ತು.

ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ: ಕಾಂಗ್ರೆಸ್​ ಅಭ್ಯರ್ಥಿ ಕಾರಿನ ಮೇಲೆ ಕಲ್ಲುತೂರಾಟ

ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಕುಲದೀಪ್​ ಜೈನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಎರಡೂ ಪಕ್ಷದ ಕಾರ್ಯಕರ್ತರಿಂದ ಪರ ವಿರೋಧ ಘೋಷಣೆ ಮಾರಾಮಾರಿಗೆ ಕಾರಣವಾಗಿದೆ ಎನ್ನಲಾಗಿದೆ. ಸ್ಥಳದಲ್ಲಿ ಕೆಎಸ್ಆರ್​​ಪಿ ತುಕಡಿ ನಿಯೋಜನೆ ಮಾಡಲಾಗಿದೆ.

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 6:16 pm, Thu, 11 May 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ