AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸನಗೌಡ ಪಾಟೀಲ್ ಯತ್ನಾಳ್​ಗೆ ಮತ್ತೊಂದು ನೋಟಿಸ್​: ಸೂಕ್ತ ಕ್ರಮದ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಆರೋಪ-ಪ್ರತ್ಯಾರೋಪ ಮಾಡುವ ಭರದಲ್ಲಿ ನಾಯಕರು ನಾಲಿಗೆ ಹರಿಬಿಡುತ್ತಿದ್ದಾರೆ. ಇದೀಗ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಅವರಿಗೆ ಚುನಾವಣಾಧಿಕಾರಿಯಿಂದ ಮತ್ತೊಂದು ನೋಟಿಸ್ ಜಾರಿಯಾಗಿದೆ.

ಬಸನಗೌಡ ಪಾಟೀಲ್ ಯತ್ನಾಳ್​ಗೆ ಮತ್ತೊಂದು ನೋಟಿಸ್​: ಸೂಕ್ತ ಕ್ರಮದ ಎಚ್ಚರಿಕೆ
ಬಸನಗೌಡ ಪಾಟೀಲ್ ಯತ್ನಾಳ್
ರಮೇಶ್ ಬಿ. ಜವಳಗೇರಾ
|

Updated on: May 07, 2023 | 4:56 PM

Share

ರಾಯಚೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023 ಇದೇ ಮೇ 10ರಂದು ಮತದಾನ ನಡೆಯಲಿದ್ದು, ಇದರಿಂದ ರಾಜಕೀಯ ಪಕ್ಷಗಳಿಂದ ಪ್ರಚಾರ ಭರಾಟೆ ಜೋರಾಗಿದೆ. ಇದರ ಮಧ್ಯೆ ರಾಜಕೀಯ ನಾಯಕರ ಪರಸ್ಪರ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ವೈಯಕ್ತಿ ಟೀಕೆಗಳಿಂದ ಆರ್ ಪಿ ಆಕ್ಟ್ ಉಲ್ಲಂಘನೆ ಮಾಡಿದ್ದಾರೆ. ಅದರಂತೆ ವಿಜಯಪುರ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲಾಗಿದೆ. ಇದೇ ಮೇ 5 ರಂದು ಮಸ್ಕಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಅಬ್ಬರದ ಭಾಷಣದೊಂದಿಗೆ ಆರ್ ಪಿ ಆಕ್ಟ್ ಉಲ್ಲಂಘನೆ ಉಲ್ಲಂಘನೆ ಮಾಡಿದ್ದು, ಇದೀಗ ಕಾರಣ ಕೇಳಿ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ; ಬಸನಗೌಡ ಪಾಟೀಲ್‌ ಯತ್ನಾಳ್, ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್

ಮೋದಿಗೆ ವಿಷದಹಾವು ಎಂದ ಮಲ್ಲಿಕಾರ್ಜುನ ಖರ್ಗೆ ತಾವೇನು ಹೆಬ್ಬಾವಾ ಎಂದು ಪ್ರಶ್ನಿಸಿದ್ದರು. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಅರೇಹುಚ್ಚಾ ಎಂದು ವಾಗ್ದಾಳಿ ನಡೆಸಿದ್ದರು. ಈ ಮೂಲಕ ಆರ್ ಪಿ ಆಕ್ಟ್ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮಸ್ಕಿ ಚುನಾವನಾಧಿಕಾರಿ 24 ಗಂಟೆಗಳಲ್ಲಿ ಸೂಕ್ತ ಸಮಜಾಯಿಷಿ ನೀಡಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್​ಗೆ ನೋಟಿಸ್ ನೀಡಿದ್ದಾರೆ. ಅಲ್ಲದೇ ತಪ್ಪಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನೋಟೀಸ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಈ ಹಿಂದೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ವಿಷಕನ್ಯೆ ಎಂದು ಹೇಳಿಕೆ ನೀಡಿದ್ದು, ಆ ಹೇಳಿಕೆಗೂ ಸಹ ಚುನಾವಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಸ್ಕಿಯಲ್ಲಿ ಭಾಷಣ ಮಾಡಿದ್ದ ಉಮಶ್ರೀ ವಿರುದ್ಧ ಎಫ್​ಐಆರ್

ಏ.28ರಂದು‌ ಮಸ್ಕಿ ಪಟ್ಟಣದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅಧ್ಯಕ್ಷತೆಯಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಉಮಾಶ್ರೀ, ಬಿಜೆಪಿಯವರು ವಿಷಜಂತುಗಳು ಎಂದು ಹೇಳಿದ್ದರು. ಇದೀಗ ಉಮಾಶ್ರೀ(Umashree) ವಿರುದ್ಧ ರಾಯಚೂರು ಜಿಲ್ಲೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್(FIR) ದಾಖಲಾಗಿದೆ. ಉಮಾಶ್ರೀಯವರು ಬಿಜೆಪಿ ಮುಖಂಡರು ವಿಷ ಜಂತುಗಳೆಂದು ಕಿಡಿಕಾರಿದ್ದರು. ಬಿಜೆಪಿ ಮುಖಂಡರು ಧರ್ಮವನ್ನು ಒಡೆದು, ಕೋಮುವಾದ ಸೃಷ್ಟಿಸಿ ಬೆಂಕಿ ಹಚ್ಚುವಂಥವರು ಎಂದು‌ ಆರೋಪ ಮಾಡಿದ್ದರು. ಇದೇ ವಿಚಾರಗಳ ಆಧಾರದಲ್ಲಿ ಮಾಜಿ ಸಚಿವೆ ಉಮಾಶ್ರೀ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?