AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್​ ಜಾರಕಿಹೊಳಿ, ಲಕ್ಷ್ಮಣ ಸವದಿ ತಮ್ಮೊಂದಿಗೆ ಶಿಷ್ಯರನ್ನು ಗೆಲ್ಲಿಸಿದ್ದು ಹೇಗೆ? ಇಲ್ಲಿದೆ ಬೆಳಗಾವಿ ಸಾಹುಕಾರರ ರಣತಂತ್ರ

ಸೋಲಿಸುತ್ತೇವೆ ಅಂತ ಓಡಾಡುತ್ತಿದ್ದ ಎದುರಾಳಿಗಳಿಗೆ ಸೋಲಿನ ಭಯ ಎನು ಅನ್ನೋದನ್ನ ತೋರಿಸುವುದಷ್ಟೇ ಅಲ್ಲದೇ ತಮ್ಮೊಂದಿಗೆ ತಮ್ಮ ಶಿಷ್ಯರನ್ನೂ ಗೆಲ್ಲಿಸಿಕೊಂಡು ಬರುವುದರಲ್ಲಿ ಯಶಸ್ವಿಯಾಗಿದ್ದಾರೆ. ಎದುರಾಳಿಗಳಿಗೆ ನಡುಕ ಹುಟ್ಟಿಸಿ ಗೆದ್ದು ಬೀಗಿದ ಕಾಂಗ್ರೆಸ್​ ನಾಯಕರಾದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮಣ ಸವದಿ ಸಕ್ಸಸ್ ಆಗಿದ್ದು ಹೇಗೆ? ಇಲ್ಲಿದೆ ಸ್ಟೋರಿ

ಸತೀಶ್​ ಜಾರಕಿಹೊಳಿ, ಲಕ್ಷ್ಮಣ ಸವದಿ ತಮ್ಮೊಂದಿಗೆ ಶಿಷ್ಯರನ್ನು ಗೆಲ್ಲಿಸಿದ್ದು ಹೇಗೆ? ಇಲ್ಲಿದೆ ಬೆಳಗಾವಿ ಸಾಹುಕಾರರ ರಣತಂತ್ರ
ಲಕ್ಷ್ಮಣ ಸವದಿ (ಎಡಚಿತ್ರ) ರಮೇಶ್​ ಜಾರಕಿಹೊಳಿ (ಬಲಚಿತ್ರ)
ವಿವೇಕ ಬಿರಾದಾರ
|

Updated on: May 17, 2023 | 7:42 AM

Share

ಬೆಳಗಾವಿ: ಚುನಾವಣಾ ಫಲಿಂತಾಶ (Karnataka Election Result) ಬಂದು ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕರದ ಗದ್ದುಗೆ ಏರಲು ತಯಾರಿ ನಡೆಸಿದೆ. ಇದೇ ಸಂದರ್ಭದಲ್ಲಿ ಬೆಳಗಾವಿ (Belagavi) ಜಿಲ್ಲೆಯಲ್ಲಿ ಇಬ್ಬರು ಮಾಸ್ಟರ್ ಮೈಂಡ್ ಕಾರ್ಯದ ಕುರಿತು ಭಾರಿ ಚರ್ಚೆಯಾಗುತ್ತಿದೆ. ಸೋಲಿಸುತ್ತೇವೆ ಅಂತ ಓಡಾಡುತ್ತಿದ್ದ ಎದುರಾಳಿಗಳಿಗೆ ಸೋಲಿನ ಭಯ ಎನು ಅನ್ನೋದನ್ನ ತೋರಿಸುವುದಷ್ಟೇ ಅಲ್ಲದೇ ತಮ್ಮೊಂದಿಗೆ ತಮ್ಮ ಶಿಷ್ಯರನ್ನೂ ಗೆಲ್ಲಿಸಿಕೊಂಡು ಬರುವುದರಲ್ಲಿ ಯಶಸ್ವಿಯಾಗಿದ್ದಾರೆ. ಅಷ್ಟಕ್ಕೂ ಎದುರಾಳಿಗಳಿಗೆ ನಡುಕ ಹುಟ್ಟಿಸಿ ಗೆದ್ದು ಬೀಗಿದ ಕಾಂಗ್ರೆಸ್​ ನಾಯಕರಾದ ಸತೀಶ್ ಜಾರಕಿಹೊಳಿ (Satish Jarkiholi) ಮತ್ತು ಲಕ್ಷ್ಮಣ ಸವದಿ (Laxman Savadi) ಸಕ್ಸಸ್ ಆಗಿದ್ದು ಹೇಗೆ? ಎಷ್ಟು ಜನ ನಾಯಕರಿಗೆ ಸೋಲಿನ ಭಯ ಹುಟ್ಟಿಸಿದ್ರು ಅಂತೀರಾ ಈ ಸ್ಟೋರಿ ನೋಡಿ.

ವಿಧಾನಸಭೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಬೆಳಗಾವಿ ಜಿಲ್ಲೆಯಲ್ಲಿ ಒಬ್ಬರನ್ನೊಬ್ಬರು ಸೋಲಿಸಲು ಸಾಕಷ್ಟು ರಣತಂತ್ರಗಳು ಶುರುವಾದವು. ಹಿಂದೂ ಪದ ಅಶ್ಲೀಲ ಅಂದಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯನ್ನ ಸೋಲಿಸಲೇಬೇಕು ಅಂತ ಹಠಕ್ಕೆ ಬಿದ್ದಿದ್ದ ಬಿಜೆಪಿ ನಾಯಕರು ಸಾಕಷ್ಟು ರಣತಂತ್ರ ಮಾಡಿ ಅನೇಕ ನಾಯಕರನ್ನು ಸತೀಶ್ ಜಾರಕಿಹೊಳಿಯವರ ಕ್ಷೇತ್ರ ಯಮಕನಮರಡಿಗೆ ಕರೆಸಿ ಪ್ರಚಾರ ಮಾಡಿಸಿ ಹಿಂದುತ್ವದ ದಾಳ ಉರುಳಿಸಿದ್ದರು. ಮುಖ್ಯವಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕಿ ಶಶಿಕಲಾ ಜೊಲ್ಲೆ, ಶಾಸಕ ಅಭಯ್ ಪಾಟೀಲ್ ಈ ಕ್ಷೇತ್ರದಲ್ಲಿ ನಿರಂತರವಾಗಿ ಸಂಚಾರ ನಡೆಸಿ ಹಿಂದುತ್ವದ ಹೆಸರಿನಲ್ಲಿ ಮತದಾರರನ್ನು ಸೆಳೆಯುವ ಕೆಲಸ ಮಾಡಿದರು. ಆದರೆ ಈ ಎಲ್ಲ ನಾಯಕರ ಪ್ಲ್ಯಾನ್ ಮಾತ್ರ ವರ್ಕೌಟ್ ಆಗಲಿಲ್ಲ, ಇದಕ್ಕೆ ಸುಮ್ಮನಿರದ ಸತೀಶ್ ಜಾರಕಿಹೊಳಿ ಮಾತ್ರ ಮಾಸ್ಟರ್ ಪ್ಲ್ಯಾನ್ ಮಾಡಿ ತಮಗೆ ಸೋಲಿಸಲು ಬಂದ ನಾಯಕರಿಗೆ ಸೋಲಿನ ರುಚಿ ತೋರಿಸಿದ್ದಾರೆ.

ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತಕ್ಕೆ ಕರ್ನಾಟಕ ಸಿಎಂ ಕುರ್ಚಿ ಫೈಟ್: ಇಂದೇ ಘೋಷಣೆ, ಎಲ್ಲರ ಚಿತ್ತ ದೆಹಲಿಯತ್ತ

ಹೌದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಣತಂತ್ರ ಹೂಡಿ ವಿಜಯಪುರ ನಗರದಲ್ಲಿ ಖುದ್ದು ಪ್ರಚಾರ ನಡೆಸಿ ಕೊನೆಯಲ್ಲಿ ಯತ್ನಾಳ್ ಅವರನ್ನ ಕೆಲವೇ ಮತಗಳಲ್ಲಿ ಗೆಲ್ಲುವಂತ ಪರಿಸ್ಥಿತಿ ನಿರ್ಮಿಸಿ ಸೋಲಿನ ಭಯ ಹುಟ್ಟಿಸಿದ್ದರೇ ಇತ್ತ ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆಯವರು ಕೂಡ ಕೆಲವೆ ಮತಗಳಿಂದ ಗೆದ್ದರು. ಅಲ್ಲದೇ ಇತ್ತ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಅಭಯ್ ಪಾಟೀಲ್​ಗೂ ಸೋಲಿನ ಭೀತಿ, ಭಯ ಹೇಗಿರುತ್ತೆ ಅನ್ನೋದನ್ನ ತೋರಿಸುವುದರಲ್ಲಿ ಸತೀಶ್ ಜಾರಕೊಹೊಳಿ ಅವರು ಯಶಸ್ವಿಯಾಗಿದ್ದಾರೆ. ಇದರ ಜತೆಗೆ ಶಿಷ್ಯಂದಿರನ್ನು ಕ್ಷೇತ್ರದಲ್ಲಿ ಗೆಲ್ಲಿಸುವಲ್ಲಿ ಸತೀಶ್ ಜಾರಕೊಹೊಳಿ ಯಶಸ್ವಿಯಾಗಿದ್ದಾರೆ. ಸವದತ್ತಿಯಲ್ಲಿ ವಿಶ್ವಾಸ್ ವೈದ್ಯ, ಉತ್ತರ ಕ್ಷೇತ್ರದಲ್ಲಿ ಆಸೀಪ್ ಸೇಠ್ ಅವರನ್ನು ಗೆಲ್ಲಿಸಿಕೊಂಡು ಬಂದಿದ್ದಾರೆ. ಈ ಮೂಲಕ ತಾವು ಮನಸ್ಸು ಮಾಡಿದರೇ ಚುನಾವಣೆಯಲ್ಲಿ ತಮ್ಮವರನ್ನು ಗೆಲ್ಲಿಸುವ ಶಕ್ತಿ ಇದೆ ವಿರೋಧ ಕಟ್ಟಿಕೊಂಡರೇ ಸೋಲಿನ ರುಚಿ ತೋರಿಸುವ ಸಾಮರ್ಥ್ಯ ಇದೆ ಎಂದು ಸಂದೇಶ ರವಾನೆ ಮಾಡಿದ್ದಾರೆ.

ಇನ್ನೂ ಒಂದು ಕಡೆ ಸತೀಶ್ ಜಾರಕಿಹೊಳಿ ಪ್ಲ್ಯಾನ್ ಮಾಡಿ ಎದುರಾಳಿಗಳಿಗೆ ತಮ್ಮನ್ನ ವಿರೋಧ ಕಟ್ಟಿಕೊಂಡರೇ ಎನಾಗುತ್ತೆ ಅನ್ನೋದನ್ನ ಬಿಸಿ ಮುಟ್ಟಿಸಿದರೇ ಇತ್ತ ಇನ್ನೊಬ್ಬ ನಾಯಕ ಲಕ್ಷ್ಮಣ ಸವದಿ ಕೂಡ ಎದುರಾಳಿಗಳಿಗೆ ಮಣ್ಣು ಮುಕ್ಕಿಸಿ ಕೊಟ್ಟ ಮಾತನ್ನು ಉಳಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಬಿಜೆಪಿಯಿಂದ ಹೊರ ಬಂದ ಲಕ್ಷ್ಮಣ ಸವದಿ ಕಾಂಗ್ರೆಸ್​ದಿಂದ ಅಥಣಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ತಾವು ಗೆಲ್ಲುವುದಷ್ಟೇ ಅಲ್ಲದೆ ತಮ್ಮೊಂದಿಗೆ ಇನ್ನಿಬ್ಬರನ್ನೂ ಗೆಲ್ಲಿಸಿಕೊಂಡು ಬರುವುದರಲ್ಲಿ ಯಶಸ್ವಿಯಾಗಿದ್ದಾರೆ.

ಕಾಗವಾಡದಲ್ಲಿ ರಾಜು ಕಾಗೆ ಹಾಗೂ ಕುಡಚಿಯಲ್ಲಿ ಮಹೇಂದ್ರ ತಮ್ಮಣ್ಣವರ್ ಅವರನ್ನ ಗೆಲ್ಲಿಸಿ ತಾವು ಚುನಾವಣೆಯಲ್ಲಿ ಸಿದ್ದರಾಮಯ್ಯಗೆ ಕೊಟ್ಟ ಮಾತನ್ನ ಉಳಿಸಿಕೊಂಡಿದ್ದಾರೆ. ಇತ್ತ ಎದುರಾಳಿ ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿಯವರನ್ನು ಸೋಲಿಸಲು ಸಾಕಷ್ಟು ತಂತ್ರಗಳನ್ನ ಮಾಡಿದ್ದರೂ ಅದಕ್ಕೆ ತಣ್ಣೀರೆರಚುವ ಕೆಲಸ ಮಾಡಿ, ಸೈಲೆಂಟ್ ಆಗಿದ್ದುಕೊಂಡೇ ತಮ್ಮ ಕ್ಷೇತ್ರದಲ್ಲಿ ಗೆದ್ದು ಇನ್ನೆರೆಡು ಕ್ಷೇತ್ರದಲ್ಲಿ ತಮ್ಮವರನ್ನು ಗೆಲ್ಲಿಸುವುದರಲ್ಲಿ ಲಕ್ಷ್ಮಣ ಸವದಿ ಯಶಸ್ಸು ಕಂಡರು. ಈ ಮೂಲಕ ರಮೇಶ್ ಜಾರಕಿಹೊಳಿಗೆ ಸರಿಯಾದ ತಿರುಗೇಟು ನೀಡುವುದರಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟಾರೆ ಒಂದು ಕಡೆ ಸತೀಶ್ ಜಾರಕಿಹೊಳಿಯನ್ನು ಸೋಲಿಸಲು ಹೊರಟವರಿಗೆ ಸತೀಶ್ ಜಾರಕಿಹೊಳಿ ತಮ್ಮ ಮಾಸ್ಟರ್ ಪ್ಲ್ಯಾನ್ ಮೂಲಕ ಸೋಲಿನ ಭಯ ಹುಟ್ಟಿಸುವುದಷ್ಟೇ ಅಲ್ಲದೆ ಶಿಷ್ಯರನ್ನು ಗೆಲ್ಲಿಸಿಕೊಂಡು ಬರುವುದರಲ್ಲಿ ಯಶಸ್ವಿಯಾಗಿದ್ದಾರೆ. ಇತ್ತ ಲಕ್ಷ್ಮಣ ಸವದಿ ಕೂಡ ತಾವು ಗೆಲ್ಲುವುದಷ್ಟೇ ಅಲ್ಲದೆ ತನ್ನಿಬ್ಬರು ಆಪ್ತರನ್ನ ಗೆಲ್ಲಿಸಿ ರಮೇಶ್​ ಜಾರಕಿಹೊಳಿಯವರಿಗೆ ಸರಿಯಾದ ತಿರುಗೇಟು ನೀಡಿದ್ದಾರೆ. ಎನೇ ಇರಲಿ ಇಬ್ಬರು ನಾಯಕರ ಕಾರ್ಯವೈಖರಿ ಎದುರಾಳಿಗಳಿಗೆ ನಡುಕ ಹುಟ್ಟುವಂತೆ ಮಾಡಿದ್ರೆ, ಜಿಲ್ಲೆಯಲ್ಲಿ ಮೇಲುಗೈ ಸಾಧಿಸುವಲ್ಲಿ ನಾಯಕರು ಯಶಸ್ವಿಯಾಗಿದ್ದಾರೆ.

ಸಹದೇವ ಮಾನೆ ಟಿವಿ9 ಬೆಳಗಾವಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ಟರ್ನಿಂಗ್​ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು