AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 13ರಂದು ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಶನಿವಾರ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಮತ ಎಣಿಕೆ ವೇಳೆ ಕಿಡಿಗೇಡಿಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿದ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಮೇ 13ರಂದು ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ: ಶನಿವಾರ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ
ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗಂಗಾಧರ​ ಬ. ಸಾಬೋಜಿ
|

Updated on:May 11, 2023 | 7:06 PM

Share

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ನಿನ್ನೆ ರಾಜ್ಯದ 224 ಕ್ಷೇತ್ರಗಳಲ್ಲಿ ಸುಸೂತ್ರವಾಗಿ ಮತದಾನವಾಗಿದೆ. ಬಹು ನಿರೀಕ್ಷಿತ ಮತ ಎಣಿಕೆ ಮತ್ತು ಫಲಿತಾಂಶ ಶನಿವಾರ ನಡೆಯಲಿದೆ. ಮತ ಎಣಿಕೆ ವೇಳೆ ಕಿಡಿಗೇಡಿಗಳಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ಮೇ 13ರಂದು ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಮೇ 13ರಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಐವರಿಗಿಂತ ಹೆಚ್ಚು ಜನರು ಗುಂಪು ಸೇರದಂತೆ ಸೂಚನೆ ನೀಡಿದ್ದು, ಮದುವೆ, ಶವಸಂಸ್ಕಾರ ಬಿಟ್ಟು ಉಳಿದೆಲ್ಲದಕ್ಕೂ ಪ್ರತಿಬಂಧಕಾಜ್ಞೆ ಅನ್ವಯವಾಗಲಿದೆ.

ಸ್ಫೋಟಕ ವಸ್ತುಗಳ ಸಾಗಾಟ, ಪಟಾಕಿ ಸಿಡಿಸುವುದು, ಪ್ರತಿಕೃತಿ ಪ್ರದರ್ಶನ, ದಹನ, ಬಹಿರಂಗ ಘೋಷಣೆ ಕೂಗುವುದು, ಸಂಗೀತ ನುಡಿಸುವುದು, ಭಿತ್ತಿಪತ್ರ ಪ್ರದರ್ಶನ ಕೂಡ ನಿಷೇಧಿಸಲಾಗಿದೆ.

ಇದನ್ನೂ ಓದಿ: ಬರೀ 2 ದಿನ ಮದ್ಯದಂಗಡಿ ಬಂದ್​​: ಸರ್ಕಾರಕ್ಕೆ ಲಾಸ್​ ಆಗಿದ್ದೆಷ್ಟು ಗೊತ್ತಾ?

ದಾಖಲೆ ಮತದಾನ

ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇ. 73.19ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಆ ಮೂಲಕ ಮತದಾನದಲ್ಲಿ ಕರ್ನಾಟಕ ತನ್ನದೇ ಆದ ಹೊಸ ಐತಿಹಾಸಿಕ ದಾಖಲೆ ಸೃಷ್ಟಿಸಿದೆ. ಈ ಬಾರಿ ಮತದಾನ ಕಳೆದ ಬಾರಿಗಿಂತ 0.73 ಪ್ರತಿಶತದಷ್ಟು ಕಡಿಮೆಯಾಗಿದೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ 73.04ರಷ್ಟು ಮತದಾನವಾಗಿತ್ತು.

ಇದನ್ನೂ ಓದಿ: ರಾಜ್ಯದ ಹಲವು ಬೂತ್​ಗಳಲ್ಲಿ ರಾತ್ರಿ 10:15 ಗಂಟೆವರೆಗೂ ಮತದಾನ: ಎಡಿಜಿಪಿ ಅಲೋಕ್​ ಕುಮಾರ್ ಟ್ವೀಟ್​

ಕರ್ನಾಟದ ವಿಧಾನಸಭಾ ಚುನಾವಣೆಯಲ್ಲಿ ದಾಖಲೆ ಮತದಾನವಾಗಿದೆ. 5,30,85,566 ಪೈಕಿ 3,88,51,807 ಮತದಾರರಿಂದ ಹಕ್ಕು ಚಲಾವಣೆ ಮಾಡಲಾಗಿದೆ. ಒಟ್ಟು 1,96,58,398 ಪುರುಷ ಮತದಾರರಿಂದ ಹಕ್ಕು ಚಲಾಯಿಸಿದ್ದಾರೆ. ಒಟ್ಟು 1,91,92,372 ಮಹಿಳಾ ಮತದಾರರಿಂದ ಹಕ್ಕು ಚಲಾವಣೆ ಮಾಡಿದ್ದಾರೆ. ರಾಜ್ಯದಲ್ಲಿ ಒಟ್ಟು 1037 ಇತರೆ ಮತದಾರರಿಂದ ಹಕ್ಕು ಚಲಾಯಿಸಲಾಗಿದೆ.

ಕರ್ನಾಟಕ ಚುನಾವಣೆ 2023 ಲೈವ್​ ಅಪ್ಡೇಟ್ಸ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕ ಚುನಾವಣೆ ತಾಜಾ & ವಿಶೇಷ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 7:06 pm, Thu, 11 May 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್