AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರು, ದೇಶಭಕ್ತರನ್ನ ಒಂದೇ ತಕ್ಕಡಿಯಲ್ಲಿ ನೋಡುತ್ತಿದ್ದಾರೆ; ಕಾಂಗ್ರೆಸ್​ ವಿರುದ್ದ ಸಿಟಿ ರವಿ ವಾಗ್ದಾಳಿ

ಕಾಂಗ್ರೆಸ್ ನಿನ್ನೆ(ಮೇ.2) ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದೆ. ಅದರಲ್ಲಿ ಭಜರಂಗದಳ ನಿಷೇಧದ ಬಗ್ಗೆ ಉಲ್ಲೇಖಿಸಲಾಗಿದ್ದು, ಈ ಕುರಿತು ‘ಉಗ್ರರು, ದೇಶಭಕ್ತರನ್ನ ಒಂದೇ ತಕ್ಕಡಿಯಲ್ಲಿ ನೋಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸಿಟಿ ರವಿ ಕಾಂಗ್ರೆಸ್​ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಉಗ್ರರು, ದೇಶಭಕ್ತರನ್ನ ಒಂದೇ ತಕ್ಕಡಿಯಲ್ಲಿ ನೋಡುತ್ತಿದ್ದಾರೆ; ಕಾಂಗ್ರೆಸ್​ ವಿರುದ್ದ ಸಿಟಿ ರವಿ ವಾಗ್ದಾಳಿ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 03, 2023 | 9:53 AM

Share

ಚಿಕ್ಕಮಗಳೂರು: ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Election)ಗೆ ಕೆಲವೆ ದಿನಗಳು ಬಾಕಿಯಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರ ಕೈಗೊಂಡಿದೆ. ಅದರಂತೆ ಕಾಂಗ್ರೆಸ್ ನಿನ್ನೆ(ಮೇ.2) ತನ್ನ ಪ್ರಣಾಳಿಕೆಯನ್ನ ಬಿಡುಗಡೆ ಮಾಡಿದ್ದು, ಭಜರಂಗದಳ ನಿಷೇಧದ ಬಗ್ಗೆ ಉಲ್ಲೇಖ ಮಾಡಲಾಗಿದೆ. ಈ ಕುರಿತು ‘ ಕಾಂಗ್ರೆಸ್​ಗೆ ತಾಲಿಬಾನಿಗಳಿಗೂ ರಾಷ್ಟ್ರಭಕ್ತರಿಗೂ ವ್ಯತ್ಯಾಸ ಗೊತ್ತಿಲ್ಲ. ಇದು ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನ, ‘ಉಗ್ರರು, ದೇಶಭಕ್ತರನ್ನು ಒಂದೇ ತಕ್ಕಡಿಯಲ್ಲಿ ನೋಡುತ್ತಿದ್ದಾರೆ ಎಂದು ಕಾಂಗ್ರೆಸ್​ ವಿರುದ್ದ ಶಾಸಕ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್​ ಪ್ರಣಾಳಿಕೆಯಲ್ಲಿ ಭಜರಂಗದಳ ಬ್ಯಾನ್ ಮಾಡ್ತೀವಿ ಎಂಬ ವಿಚಾರ ಕುರಿತು ಮಾತನಾಡಿದ ಶಾಸಕ ಸಿ.ಟಿ.ರವಿ ‘ಈ ರೀತಿಯ ಕಾಂಗ್ರೆಸ್​ ಪಕ್ಷದ ಮನಸ್ಥಿತಿಗೆ ನನ್ನ ಧಿಕ್ಕಾರ. ಇದು ಹನುಮಾನ್​ ನಾಡು, ಇಲ್ಲಿ ಹನುಮನನ್ನ ಆರಾಧಿಸುವಂತ ಭಜರಂಗದಳವನ್ನ, ಈ ದೇಶಭಕ್ತಿ ಸಂಘಟನೆಯನ್ನ ಬ್ಯಾನ್ ಮಾಡಲು ಹೊರಟಿದ್ದೀರಾ, ನಿಮ್ಮ ಆಟ ನಡೆಯುವುದಿಲ್ಲ. ಜನ ನಿಮ್ಮನ್ನ ಬ್ಯಾನ್ ಮಾಡುತ್ತಾರೆ. ಆ ಕಾಲ ದೂರ ಇಲ್ಲ.ಈಗ ಭಜರಂಗದಳವನ್ನ ಬ್ಯಾನ್ ಮಾಡ್ತೀರಾ, ಮುಂದೆ ಹನುಮ ಜಯಂತಿಯನ್ನ ಬ್ಯಾನ್ ಮಾಡುತ್ತಿರಾ. ನಿಮ್ಮ ಮಾನಸಿಕ ಸ್ಥಿತಿ, ಓಲೈಕೆಯ ಪರಮಾವಧಿ ಎಂದರು.

ಇದನ್ನೂ ಓದಿ:ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಚುನಾವಣಾ ಆಯೋಗ ಕೆಂಡ; ರಾಜಕೀಯ ಮುಖಂಡರಿಗೆ ನೀಡಿತು ಖಡಕ್ ಎಚ್ಚರಿಕೆ

ಇದು ಪಾಕಿಸ್ತಾನವನ್ನ, ತಾಲಿಬಾನಿಗಳನ್ನ ಮೀರಿಸಿದ ಮಾನಸಿಕತೆ ಕಾಂಗ್ರೆಸ್​ದ್ದು, ಭಯೋತ್ಪಾದಕರ ಮೇಲೆ ದಾಳಿ ಮಾಡಿದ ಸೈನಿಕರನ್ನು ಕೋರ್ಟ್ ಮಾರ್ಷಲ್ಗೆ ಒಳಪಡಿಸಿದ್ರಿ. ದೇಶಭಕ್ತರನ್ನ, ದೇಶದ್ರೋಹಿಗಳನ್ನು ಒಂದೇ ತಕಡಿಯಲ್ಲಿ ತೂಗುವುದು ನಿಮ್ಮ ಮಾನಸಿಕತೆ. ನಿಮ್ಮ ಕಾಂಗ್ರೆಸ್ ಮುಗಿದು ಹೋಗಬಹುದೇ ಹೊರತು ಭಜರಂಗದಳ ಮುಗಿಸಲಾಗುವುದಿಲ್ಲ. ಹಿಂದೆ ಇದೇ ತರ ಮಾತನಾಡಿದ್ದವರು ಕಳೆದು ಹೋಗಿದ್ದಾರೆ. ನೀವು ರಾಜಕೀಯವಾಗಿ ಮುಗಿದು ಹೋಗ್ತೀರಾ, ಇದಕ್ಕೆ ದೊಡ್ಡಬೆಲೆ ತೆರಬೇಕಾಗುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ‌ ಕಾಂಗ್ರೆಸ್​ ವಿರುದ್ದ ಕಿಡಿಕಾರಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು