AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಲನ ಮೂಡಿಸಿದ ಬಿಸಿ ಪಾಟೀಲ್ ಭೇಟಿ, ಹಾವೇರಿಯಲ್ಲಿ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ

ಬಿಸಿ ಪಾಟೀಲ್​ ಮಣಿಸಲು ಬಿಜೆಪಿಯ ಮಾಜಿ ಶಾಸಕನ್ನನ್ನು ಕಾಂಗ್ರೆಸ್ ಆಪರೇಷ್ ಹಸ್ತ ಮಾಡಿದೆ. ಇದೀಗ ಬಿಜೆಪಿ ರಿವರ್ಸ್​ ಆಪರೇಷನ್​​ಗೆ ಮುಂದಾಗಿದೆ.

ಸಂಚಲನ ಮೂಡಿಸಿದ ಬಿಸಿ ಪಾಟೀಲ್ ಭೇಟಿ, ಹಾವೇರಿಯಲ್ಲಿ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ
ಬನ್ನಿಕೋಡ ನಿವಾಸಕ್ಕೆ ಬಿ.ಸಿ.ಪಾಟೀಲ್​​​ ಭೇಟಿ
ರಮೇಶ್ ಬಿ. ಜವಳಗೇರಾ
|

Updated on: Apr 02, 2023 | 7:38 PM

Share

ಮುಖ್ಯಾಂಶಗಳು

  • ‘ಕೈ’ ಮಾಜಿ ಶಾಸಕ ಬಿ.ಹೆಚ್​​.ಬನ್ನಿಕೋಡ ಬಿಜೆಪಿ ಸೇರ್ಪಡೆ ಸಾಧ್ಯತೆ
  • ಹಿರೇಕೆರೂರು ಮಾಜಿ ಶಾಸಕ ಬನ್ನಿಕೋಡ ನಿವಾಸಕ್ಕೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ.ಪಾಟೀಲ್​​​
  • ‘ಕೈ’ ಟಿಕೆಟ್ ಘೋಷಣೆ ಬೆನ್ನಲ್ಲೇ ಅಸಮಾಧಾನಗೊಂಡಿರುವ ಬನ್ನಿಕೋಡ

ಹಾವೇರಿ: ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲು ಕಸರತ್ತು ನಡೆಸಿರುವ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ ಎದುರಾಗಿದೆ. ಮಾಜಿ ಶಾಸಕ ಬಿ.ಹೆಚ್​​.ಬನ್ನಿಕೋಡಗೆ ಬಿಪಿಪಿ ಗಾಳ ಹಾಕಿದೆ. ಬಣಕಾರ್​ಗೆ ಹಿರೇಕೆರೂರು ಕಾಂಗ್ರೆಸ್​ ಟಿಕೆಟ್​ ಘೋಷಣೆಯಾದ ಬೆನ್ನಲ್ಲೇ ಬೆನ್ನಲ್ಲೇ ಅಸಮಾಧಾನಗೊಂಡಿರುವ ಬನ್ನಿಕೋಡ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬನ್ನಿಕೋಡ ಅವರನ್ನು ಬಿಜೆಪಿಗೆ ಕರೆತರಲು ಬಿ.ಸಿ.ಪಾಟೀಲ್​ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂಕರವೆಂಬಂತೆ ಇಂದು(ಏಪ್ರಿಲ್ 02) ಸಚಿವ ಬಿ.ಸಿ.ಪಾಟೀಲ್​​​ ಅವರು ಬನ್ನಿಕೋಡ ನಿವಾಸಕ್ಕೆ ಭೇಟಿ ನೀಡಿ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ಗೆ ರಿವರ್ಸ್​ ಬೀತಿ ಶುರುವಾಗಿದೆ.

ಉಪ ಚುನಾವಣೆಯಲ್ಲಿ ಬಿ.ಸಿ.ಪಾಟೀಲ್ ವಿರುದ್ಧ ಕಾಂಗ್ರೆಸ್​​ನಿಂದ ಬನ್ನಿಕೋಡ ಸ್ಪರ್ಧಿಸಿ ಸೋಲುಕಂಡಿದ್ದರು. ಈ ಬಾರಿ ಸಹ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಬಿಜೆಪಿಯ ಮಾಜಿ ಶಾಸಕ ಯು.ಬಿ.ಬಣಕಾರ್​ ಅವರನ್ನು ಪಕ್ಷಕ್ಕೆ ಕರೆತಂದು ಅವರಿಗೆ ಟಿಕೆಟ್​ ನೀಡಲಾಗಿದೆ. ಇದರಿಂದ ಬನ್ನಿಕೋಡ ಅಸಮಾಧಾನಗೊಂಡಿದ್ದಾರೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ಬಿಸಿ ಪಾಟೀಲ್, ಬನ್ನಿಕೊಡ ಸಹಕಾರಕ್ಕಾಗಿ ಮನೆಗೆ ಭೇಟಿ ಆಗಿದ್ದಾಗಿ ಬಿಸಿ ಪಾಟೀಲ್​ ಫೆಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕ್ಷೇತ್ರದ ಅಭಿವೃದ್ದಿಗಾಗಿ ನಮ್ಮ ಜೊತೆ ಕೈ ಜೊಡಿಸಬೇಕೆಂದು ಹೇಳುವ ಮೂಲಕ ಬಿಜೆಪಿಗೆ ಆಹ್ವಾನಿಸಿದ್ದಾರೆ.

ಇನ್ನು ಬಿ.ಎಚ್ ಬನ್ನಿಕೊಡ ಪುತ್ರ ಪ್ರಕಾಶ್ ಬನ್ನಿಕೊಡ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮೂರು ಪಕ್ಷದವರು ನಮಗೆ ಭೇಟಿ ಆಗಿ ಬೆಂಬಲ ಕೇಳಿದ್ದಾರೆ. ಆದ್ರೆ ನಾವು ಯಾರ ಜೊತೆಗೂ ಹೊಗಬಾರದೆಂದು ಡಿಸೈಡ್ ಮಾಡಿದ್ದೇವೆ. ಈ ಹಿಂದೆ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಬಣಕಾರ ವಿರೋಧ ಮಾಡಿದ್ದರು. ಅದಕ್ಕಾಗಿ ನೀವೂ ಯಾರಿಗೂ ಬೆಂಬಲ ಕೊಡಬೇಡಿ ಎಂದು ಜನ ಹೇಳಿದ್ದಾರೆ. ನಾವೇ ಹಣ ಸಂಗ್ರಹ ಮಾಡಿ ನಿಮ್ಮ ಚುನಾವಣೆ ಮಾಡುತ್ತೇವೆ ಎಂದು ಜನ ಹೇಳಿದ್ದಾರೆ. ಸದ್ಯ ಮಾನಸಿಕವಾಗಿ ಬಂಡಾಯವಾಗಿ ಸ್ಪರ್ಧೆ ಮಾಡಲು ತಿರ್ಮಾನ ಮಾಡಿದ್ದೇವೆ. ಎಪ್ರೀಲ್ 5 ರಂದು ಬೆಂಬಲಿಗರ ಸಭೆ ಕರೆದು ಅಧಿಕೃವಾಗಿ ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ