AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಲನ ಮೂಡಿಸಿದ ಬಿಸಿ ಪಾಟೀಲ್ ಭೇಟಿ, ಹಾವೇರಿಯಲ್ಲಿ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ

ಬಿಸಿ ಪಾಟೀಲ್​ ಮಣಿಸಲು ಬಿಜೆಪಿಯ ಮಾಜಿ ಶಾಸಕನ್ನನ್ನು ಕಾಂಗ್ರೆಸ್ ಆಪರೇಷ್ ಹಸ್ತ ಮಾಡಿದೆ. ಇದೀಗ ಬಿಜೆಪಿ ರಿವರ್ಸ್​ ಆಪರೇಷನ್​​ಗೆ ಮುಂದಾಗಿದೆ.

ಸಂಚಲನ ಮೂಡಿಸಿದ ಬಿಸಿ ಪಾಟೀಲ್ ಭೇಟಿ, ಹಾವೇರಿಯಲ್ಲಿ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ
ಬನ್ನಿಕೋಡ ನಿವಾಸಕ್ಕೆ ಬಿ.ಸಿ.ಪಾಟೀಲ್​​​ ಭೇಟಿ
ರಮೇಶ್ ಬಿ. ಜವಳಗೇರಾ
|

Updated on: Apr 02, 2023 | 7:38 PM

Share

ಹಾವೇರಿ: ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲು ಕಸರತ್ತು ನಡೆಸಿರುವ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ ಎದುರಾಗಿದೆ. ಮಾಜಿ ಶಾಸಕ ಬಿ.ಹೆಚ್​​.ಬನ್ನಿಕೋಡಗೆ ಬಿಪಿಪಿ ಗಾಳ ಹಾಕಿದೆ. ಬಣಕಾರ್​ಗೆ ಹಿರೇಕೆರೂರು ಕಾಂಗ್ರೆಸ್​ ಟಿಕೆಟ್​ ಘೋಷಣೆಯಾದ ಬೆನ್ನಲ್ಲೇ ಬೆನ್ನಲ್ಲೇ ಅಸಮಾಧಾನಗೊಂಡಿರುವ ಬನ್ನಿಕೋಡ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬನ್ನಿಕೋಡ ಅವರನ್ನು ಬಿಜೆಪಿಗೆ ಕರೆತರಲು ಬಿ.ಸಿ.ಪಾಟೀಲ್​ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂಕರವೆಂಬಂತೆ ಇಂದು(ಏಪ್ರಿಲ್ 02) ಸಚಿವ ಬಿ.ಸಿ.ಪಾಟೀಲ್​​​ ಅವರು ಬನ್ನಿಕೋಡ ನಿವಾಸಕ್ಕೆ ಭೇಟಿ ನೀಡಿ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ಗೆ ರಿವರ್ಸ್​ ಬೀತಿ ಶುರುವಾಗಿದೆ.

ಉಪ ಚುನಾವಣೆಯಲ್ಲಿ ಬಿ.ಸಿ.ಪಾಟೀಲ್ ವಿರುದ್ಧ ಕಾಂಗ್ರೆಸ್​​ನಿಂದ ಬನ್ನಿಕೋಡ ಸ್ಪರ್ಧಿಸಿ ಸೋಲುಕಂಡಿದ್ದರು. ಈ ಬಾರಿ ಸಹ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಬಿಜೆಪಿಯ ಮಾಜಿ ಶಾಸಕ ಯು.ಬಿ.ಬಣಕಾರ್​ ಅವರನ್ನು ಪಕ್ಷಕ್ಕೆ ಕರೆತಂದು ಅವರಿಗೆ ಟಿಕೆಟ್​ ನೀಡಲಾಗಿದೆ. ಇದರಿಂದ ಬನ್ನಿಕೋಡ ಅಸಮಾಧಾನಗೊಂಡಿದ್ದಾರೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ಬಿಸಿ ಪಾಟೀಲ್, ಬನ್ನಿಕೊಡ ಸಹಕಾರಕ್ಕಾಗಿ ಮನೆಗೆ ಭೇಟಿ ಆಗಿದ್ದಾಗಿ ಬಿಸಿ ಪಾಟೀಲ್​ ಫೆಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕ್ಷೇತ್ರದ ಅಭಿವೃದ್ದಿಗಾಗಿ ನಮ್ಮ ಜೊತೆ ಕೈ ಜೊಡಿಸಬೇಕೆಂದು ಹೇಳುವ ಮೂಲಕ ಬಿಜೆಪಿಗೆ ಆಹ್ವಾನಿಸಿದ್ದಾರೆ.

ಇನ್ನು ಬಿ.ಎಚ್ ಬನ್ನಿಕೊಡ ಪುತ್ರ ಪ್ರಕಾಶ್ ಬನ್ನಿಕೊಡ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮೂರು ಪಕ್ಷದವರು ನಮಗೆ ಭೇಟಿ ಆಗಿ ಬೆಂಬಲ ಕೇಳಿದ್ದಾರೆ. ಆದ್ರೆ ನಾವು ಯಾರ ಜೊತೆಗೂ ಹೊಗಬಾರದೆಂದು ಡಿಸೈಡ್ ಮಾಡಿದ್ದೇವೆ. ಈ ಹಿಂದೆ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಬಣಕಾರ ವಿರೋಧ ಮಾಡಿದ್ದರು. ಅದಕ್ಕಾಗಿ ನೀವೂ ಯಾರಿಗೂ ಬೆಂಬಲ ಕೊಡಬೇಡಿ ಎಂದು ಜನ ಹೇಳಿದ್ದಾರೆ. ನಾವೇ ಹಣ ಸಂಗ್ರಹ ಮಾಡಿ ನಿಮ್ಮ ಚುನಾವಣೆ ಮಾಡುತ್ತೇವೆ ಎಂದು ಜನ ಹೇಳಿದ್ದಾರೆ. ಸದ್ಯ ಮಾನಸಿಕವಾಗಿ ಬಂಡಾಯವಾಗಿ ಸ್ಪರ್ಧೆ ಮಾಡಲು ತಿರ್ಮಾನ ಮಾಡಿದ್ದೇವೆ. ಎಪ್ರೀಲ್ 5 ರಂದು ಬೆಂಬಲಿಗರ ಸಭೆ ಕರೆದು ಅಧಿಕೃವಾಗಿ ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ