ಸಂಚಲನ ಮೂಡಿಸಿದ ಬಿಸಿ ಪಾಟೀಲ್ ಭೇಟಿ, ಹಾವೇರಿಯಲ್ಲಿ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ

|

Updated on: Apr 02, 2023 | 7:38 PM

ಬಿಸಿ ಪಾಟೀಲ್​ ಮಣಿಸಲು ಬಿಜೆಪಿಯ ಮಾಜಿ ಶಾಸಕನ್ನನ್ನು ಕಾಂಗ್ರೆಸ್ ಆಪರೇಷ್ ಹಸ್ತ ಮಾಡಿದೆ. ಇದೀಗ ಬಿಜೆಪಿ ರಿವರ್ಸ್​ ಆಪರೇಷನ್​​ಗೆ ಮುಂದಾಗಿದೆ.

ಸಂಚಲನ ಮೂಡಿಸಿದ ಬಿಸಿ ಪಾಟೀಲ್ ಭೇಟಿ, ಹಾವೇರಿಯಲ್ಲಿ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ
ಬನ್ನಿಕೋಡ ನಿವಾಸಕ್ಕೆ ಬಿ.ಸಿ.ಪಾಟೀಲ್​​​ ಭೇಟಿ
Follow us on

ಹಾವೇರಿ: ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲು ಕಸರತ್ತು ನಡೆಸಿರುವ ಕಾಂಗ್ರೆಸ್‍ಗೆ ರಿವರ್ಸ್ ಆಪರೇಷನ್ ಭೀತಿ ಎದುರಾಗಿದೆ. ಮಾಜಿ ಶಾಸಕ ಬಿ.ಹೆಚ್​​.ಬನ್ನಿಕೋಡಗೆ ಬಿಪಿಪಿ ಗಾಳ ಹಾಕಿದೆ. ಬಣಕಾರ್​ಗೆ ಹಿರೇಕೆರೂರು ಕಾಂಗ್ರೆಸ್​ ಟಿಕೆಟ್​ ಘೋಷಣೆಯಾದ ಬೆನ್ನಲ್ಲೇ ಬೆನ್ನಲ್ಲೇ ಅಸಮಾಧಾನಗೊಂಡಿರುವ ಬನ್ನಿಕೋಡ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬನ್ನಿಕೋಡ ಅವರನ್ನು ಬಿಜೆಪಿಗೆ ಕರೆತರಲು ಬಿ.ಸಿ.ಪಾಟೀಲ್​ ಕಸರತ್ತು ನಡೆಸಿದ್ದಾರೆ. ಇದಕ್ಕೆ ಪೂಕರವೆಂಬಂತೆ ಇಂದು(ಏಪ್ರಿಲ್ 02) ಸಚಿವ ಬಿ.ಸಿ.ಪಾಟೀಲ್​​​ ಅವರು ಬನ್ನಿಕೋಡ ನಿವಾಸಕ್ಕೆ ಭೇಟಿ ನೀಡಿ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ಗೆ ರಿವರ್ಸ್​ ಬೀತಿ ಶುರುವಾಗಿದೆ.

ಉಪ ಚುನಾವಣೆಯಲ್ಲಿ ಬಿ.ಸಿ.ಪಾಟೀಲ್ ವಿರುದ್ಧ ಕಾಂಗ್ರೆಸ್​​ನಿಂದ ಬನ್ನಿಕೋಡ ಸ್ಪರ್ಧಿಸಿ ಸೋಲುಕಂಡಿದ್ದರು. ಈ ಬಾರಿ ಸಹ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಬಿಜೆಪಿಯ ಮಾಜಿ ಶಾಸಕ ಯು.ಬಿ.ಬಣಕಾರ್​ ಅವರನ್ನು ಪಕ್ಷಕ್ಕೆ ಕರೆತಂದು ಅವರಿಗೆ ಟಿಕೆಟ್​ ನೀಡಲಾಗಿದೆ. ಇದರಿಂದ ಬನ್ನಿಕೋಡ ಅಸಮಾಧಾನಗೊಂಡಿದ್ದಾರೆ. ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡ ಬಿಸಿ ಪಾಟೀಲ್, ಬನ್ನಿಕೊಡ ಸಹಕಾರಕ್ಕಾಗಿ ಮನೆಗೆ ಭೇಟಿ ಆಗಿದ್ದಾಗಿ ಬಿಸಿ ಪಾಟೀಲ್​ ಫೆಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕ್ಷೇತ್ರದ ಅಭಿವೃದ್ದಿಗಾಗಿ ನಮ್ಮ ಜೊತೆ ಕೈ ಜೊಡಿಸಬೇಕೆಂದು ಹೇಳುವ ಮೂಲಕ ಬಿಜೆಪಿಗೆ ಆಹ್ವಾನಿಸಿದ್ದಾರೆ.

ಇನ್ನು ಬಿ.ಎಚ್ ಬನ್ನಿಕೊಡ ಪುತ್ರ ಪ್ರಕಾಶ್ ಬನ್ನಿಕೊಡ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಮೂರು ಪಕ್ಷದವರು ನಮಗೆ ಭೇಟಿ ಆಗಿ ಬೆಂಬಲ ಕೇಳಿದ್ದಾರೆ. ಆದ್ರೆ ನಾವು ಯಾರ ಜೊತೆಗೂ ಹೊಗಬಾರದೆಂದು ಡಿಸೈಡ್ ಮಾಡಿದ್ದೇವೆ. ಈ ಹಿಂದೆ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಬಣಕಾರ ವಿರೋಧ ಮಾಡಿದ್ದರು. ಅದಕ್ಕಾಗಿ ನೀವೂ ಯಾರಿಗೂ ಬೆಂಬಲ ಕೊಡಬೇಡಿ ಎಂದು ಜನ ಹೇಳಿದ್ದಾರೆ. ನಾವೇ ಹಣ ಸಂಗ್ರಹ ಮಾಡಿ ನಿಮ್ಮ ಚುನಾವಣೆ ಮಾಡುತ್ತೇವೆ ಎಂದು ಜನ ಹೇಳಿದ್ದಾರೆ. ಸದ್ಯ ಮಾನಸಿಕವಾಗಿ ಬಂಡಾಯವಾಗಿ ಸ್ಪರ್ಧೆ ಮಾಡಲು ತಿರ್ಮಾನ ಮಾಡಿದ್ದೇವೆ. ಎಪ್ರೀಲ್ 5 ರಂದು ಬೆಂಬಲಿಗರ ಸಭೆ ಕರೆದು ಅಧಿಕೃವಾಗಿ ಘೋಷಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ