ಜಗದೀಶ್ ಶೆಟ್ಟರ್ ಪತ್ನಿ ಜತೆ ಮುನೇನಕೊಪ್ಪ ಮಹತ್ವದ ಚರ್ಚೆ, ನಿರ್ಧಾರ ಬದಲಾಗಬಹುದು: ಸಚಿವ ಅಚ್ಚರಿ ಹೇಳಿಕೆ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್​ ರಾಜೀನಾಮೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಜಗದೀಶ್ ಶೆಟ್ಟರ್ ಪತ್ನಿ ಜತೆ ಮುನೇನಕೊಪ್ಪ ಮಹತ್ವದ ಚರ್ಚೆ, ನಿರ್ಧಾರ ಬದಲಾಗಬಹುದು: ಸಚಿವ ಅಚ್ಚರಿ ಹೇಳಿಕೆ
Follow us
|

Updated on:Apr 16, 2023 | 3:48 PM

ಹುಬ್ಬಳ್ಳಿ: ಘೋಷಿಸಿದಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar)​ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ಶಿರಸಿಯಿಂದ ಬೆಂಗಳೂರಿನತ್ತ ಹೊರಟ ಜಗದೀಶ್ ಶೆಟ್ಟರ್​ ಇಂದೇ (ಏಪ್ರಿಲ್ 16) ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಆದ್ರೆ, ಇದರ ಮಧ್ಯೆ ಜಗದೀಶ್ ಶೆಟ್ಟರ್​ ನಿವಾಸದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಹೌದು…ಅತ್ತ ಜಗದೀಶ್ ಶೆಟ್ಟರ್ ರಾಜೀನಾಮೆ ನೀಡಿದರೆ ಇತ್ತ ಶೆಟ್ಟರ್​ ನಿವಾಸಕ್ಕೆ ಸಚಿವ ಶಂಕರ್ ಪಾಟೀಲ ಮುನೇನಕೊಪ್ಪ(shankar patil munenakoppa) ಭೇಟಿ ನೀಡಿ ಶಿಲ್ಪಾ ಶೆಟ್ಟರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳಿಕ ಟಿವಿ9 ಜೊತೆ ಮಾತನಾಡಿದ ಮುನೇನಕೊಪ್ಪ, ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದ್ರೆ, ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

ಇದನ್ನೂ ಓದಿ: ರಾಜೀನಾಮೆ ಪತ್ರ ಹಿಡಿದು ಬಂದ ಜಗದೀಶ್ ಶೆಟ್ಟರ್ ಮನವೊಲಿಕೆಗೆ ಸ್ಪೀಕರ್​ ಕಚೇರಿಯಲ್ಲಿ ಅಂತಿಮ ಕಸರತ್ತು: ಬಗ್ಗದ ಮಾಜಿ ಸಿಎಂ

ಶೆಟ್ಟರ್ ಪತ್ನಿ ಶಿಲ್ಪಾ ಶೆಟ್ಟರ್ ಜೊತೆ ಮಾತುಕತೆ ಬಳಿಕ ಟಿವಿ9 ಗೆ ಪ್ರತಿಕ್ರಿಯಿಸಿದ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಆದ್ರೆ, ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕ್ಷಣದವರೆಗೂ ಜಗದೀಶ್ ಶೆಟ್ಟರ್ ಬಿಜೆಪಿಯಲ್ಲೇ ಇದ್ದಾರೆ. ಜಗದೀಶ್​ ಶೆಟ್ಟರ್ ಬಿಜೆಪಿ ಬಿಡಲ್ಲ ಎನ್ನುವ ನನ್ನ ನಂಬಿಕೆ. ಸಂಜೆವರೆಗೂ ಸಮಯ ಇದೆ. ನಿರ್ಧಾರ ಬದಲಾಗಬಹುದು. ಈ ಕ್ಷಣಕ್ಕೂ ಶೆಟ್ಟರ್ ಅವರು ಬಿಜೆಪಿಯಲ್ಲಿದಾರೆ. ಬಿಜೆಪಿ ಅವರನ್ನು ಬಿಡಲ್ಲ ಎನ್ನುವುದು ನನ್ನ ವಯಕ್ತಿಕ ನಂಬಿಕೆ ಎಂದು ಅಚ್ಚರಿ ಹೇಳಿಕೆ ನೀಡಿದರು.

ಪ್ರಲ್ಹಾದ್ ಜೋಶಿ ಮಹತ್ವದ ಸಭೆ

ಇನ್ನು ಜಗದೀಶ್ ಶೆಟ್ಟರ್ ರಾಜೀನಾಮೆ ನೀಡುತ್ತಿದ್ದಂತೆಯೇ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗದಿಗೆದರಿವೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಜೊತೆ ಮಹತ್ವದ ಸಭೆ ಮಾಡಿದ್ದು, ಜಿಲ್ಲೆಯ ಪ್ರಸಕ್ತ ರಾಜಕೀಯದ ಬಗ್ಗೆ ಚರ್ಚೆ ನಡೆಸಿದರು.

ಜಗದೀಶ್ ಶೆಟ್ಟರ್​ ರಾಜೀನಾಮೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ಸದಸ್ಯರು ಸಹ ಬಿಜೆಪಿಗೆ ರಾಜೀನಾಮೆ ನೀಡುವ ಸಾಧ್ಯತೆಗಳಿವೆ. ಇದರಿಂದ ಎಚ್ಚೆತ್ತುಕೊಂಡ ಜೋಶಿ, ಸದಸ್ಯರುಗಳನ್ನು ಹಿಡಿದಿಟ್ಟುಕೊಳ್ಳಲು ಮಹತ್ವದ ಸಭೆ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ಬಿಡಬೇಡಿ ಎಂದು ಜೋಶಿ ಪಾಲಿಕೆ ಸದಸ್ಯರಲ್ಲಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಜಗದೀಶ್ ಶೆ್ಟ್ಟರ್​ ರಾಜೀನಾಮೆ ಬೆನ್ನಲ್ಲೇ ಜಿಲ್ಲೆಯಲ್ಲಿ ಕ್ಷಣ ಕ್ಷಣಕ್ಕೂ ಮಹತ್ವದ ರಾಜಕೀಯ ಬೆಳವಣಿಗೆಳು ನಡೆಯುತ್ತಿವೆ.

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಕರ್ನಾಟಕ ವಿಧಾನಸಭೆ ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Sun, 16 April 23

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ