AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಮುಖಂಡರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಕೈಯಲ್ಲಿ ಕಂತೆಕಂತೆ ನೋಟು

ಕಾಂಗ್ರೆಸ್ ಟಿಕೆಟ್ ತಪ್ಪಿದ ಹಿನ್ನೆಲೆ ಕೊಂಡವಾಡಿ ಚಂದ್ರಶೇಖರ್ ಅವರು ಇಂದು ತುಮಕೂರಿನಲ್ಲಿ ಜೆಡಿಎಸ್ ಸೇರಿದರು. ಕುಮಾರಸ್ವಾಮಿ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ದಳ ಸೇರಿದರು.

ಕಾಂಗ್ರೆಸ್ ಮುಖಂಡರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಕೈಯಲ್ಲಿ ಕಂತೆಕಂತೆ ನೋಟು
ಹೆಚ್​ ಡಿ ಕುಮಾರಸ್ವಾಮಿImage Credit source: FILE
Rakesh Nayak Manchi
Rakesh Nayak Manchi|

Updated on: Apr 09, 2023 | 3:46 PM

Share

ಮುಖ್ಯಾಂಶಗಳು

  • ತುಮಕೂರಿನಲ್ಲಿ ಜೆಡಿಎಸ್ ಸೇರಿದ ಕಾಂಗ್ರೆಸ್ ಮುಖಂಡ ಕೊಂಡವಾಡಿ ಚಂದ್ರಶೇಖರ್
  • ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭಾಗಿ
  • ಕಾರ್ಯಕ್ರಮದಲ್ಲಿ ಕಾರ್ಯಕರ್ತರಿಗೆ ಹಣ ನೀಡಲು ಮುಂದಾದ ಕುಮಾರಸ್ವಾಮಿ

ತುಮಕೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಒಂದು ತಿಂಗಳಷ್ಟೇ ಬಾಕಿ ಇದೆ. ದಿನಗಳು ಉರುಳುತ್ತಿದ್ದಂತೆ ಬಂಡಾಯ ಏಳುವವರ ಸಂಖ್ಯೆ ಹೆಚ್ಚುತ್ತಿದ್ದು, ಕೆಲವರು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ವಂಚಿತರು ತಮ್ಮ ಬೆಂಬಲಿಗರೊಂದಿಗೆ ಪಕ್ಷಾಂತರವಾಗುತ್ತಿದ್ದಾರೆ. ಅದರಂತೆ ತುಮಕೂರಿನಲ್ಲಿ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿಯಾಗಿದ್ದ ಕೊಂಡವಾಡಿ ಚಂದ್ರಶೇಖರ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ (JDS) ಸೇರ್ಪಡೆಗೊಂಡರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಇದೇ ಕಾರ್ಯಕ್ರಮದಲ್ಲಿ ತಮ್ಮ ಕಾರ್ಯಕರ್ತರಿಗೆ ಕುಮಾರಸ್ವಾಮಿ ಹಣ ನೀಡಲು ಮುಂದಾದ ಘಟನೆಯೂ ನಡೆದಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನ ಕೈಮರ ಗ್ರಾಮ ನಡೆದ ಕಾಂಗ್ರೆಸ್ ಮುಖಂಡರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಕೈಯಲ್ಲಿ ನೋಟುಗಳ ಕಂತೆ ಪತ್ತೆಯಾಗಿದೆ. ಅಲ್ಲದೆ, ಕಾರ್ಯಕರ್ತನಿಗೆ ಹಣ ನೀಡಲು ಕರೆದು 500 ರೂಪಾಯಿ ಮುಖಬೆಲೆಯ ನೋಟು ಹೊರತೆಗೆದಿದ್ದಾರೆ. ಈ ವೇಳೆ ಕ್ಯಾಮರಾ ನೋಡಿದ ಕುಮಾರಸ್ವಾಮಿ, ಕಾರ್ಯಕರ್ತನನ್ನು ವಾಪಸ್​​​ ಹಿಂದೆ ಕಳುಹಿಸಿದ್ದಾರೆ.

ಇದನ್ನೂ ಓದಿ: ಕಾರ್ಯಕರ್ತನೇ ಹಾಸನದ ಜೆಡಿಎಸ್ ಅಭ್ಯರ್ಥಿ, ಬ್ಲ್ಯಾಕ್​ಮೇಲ್​​ ನನ್ನ ಹತ್ತಿರ ನಡೆಯಲ್ಲ: ಭವಾನಿ ರೇವಣ್ಣಗೆ ಕುಮಾರಸ್ವಾಮಿ ಟಾಂಗ್

ಚುನಾವಣೆಯಲ್ಲಿ ಗೆದ್ದು ಸ್ಪಷ್ಟ ಬಹುಮತದ ಮೂಲಕ ಅಧಿಕಾರ ಹಿಡಿಯಲು ಶತಾಯ ಗತಾಯವಾಗಿ ಪ್ರಯತ್ನಿಸುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೇರಿದಂತೆ ಇತರೆ ಪಕ್ಷಗಳು ಮತದಾರರನ್ನ ಸೆಳೆಯಲು ಬೇಕಾದ ಎಲ್ಲಾ ತಂತ್ರಗಾರಿಗೆಳನ್ನು ಬಳಸುತ್ತಿದ್ದಾರೆ. ಚುನಾವಣೆಗೆ ಇನ್ನೇನು ಎರಡು ಮೂರು ತಿಂಗಳು ಬಾಕಿ ಇವೆ ಎಂದಾಗಲೇ ಆರಂಭವಾಗಿದ್ದು ಕುಕ್ಕರ್ ಪಾಲಿಟಿಕ್ಸ್, ತವಾ ಪಾಲಿಟಿಕ್ಸ್, ಸೀರೆ ಹಂಚಿಕೆ ಪಾಲಿಟಿಕ್ಸ್. ಇದೀಗ ಚುನಾವಣೆಗೆ ಒಂದು ತಿಂಗಳಷ್ಟೇ ಬಾಕಿ ಇರುವಾಗ ಹಣ ಹಂಚಿಕೆ ಪಾಲಿಟಿಕ್ಸ್ ಆರಂಭವಾಗಿದೆ.

ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಹಣ ಹಂಚುವ ಯತ್ನಗಳು ನಡೆಯುತ್ತಿವೆ. ಮತದಾರರಿಗೆ ಕುಕ್ಕರ್, ತವಾ, ಸೀರೆ ಹಂಚಿಕೆ ನಂತರ ಇದೀಗ ಹಣ ಹಂಚುವ ಯತ್ನ ಅಲ್ಲಲ್ಲಿ ನಡೆಯುತ್ತಿದೆ. ಈ ಹಿಂದೆ ಕಾರ್ಯಕರ್ತರ ಮೇಲೆ ಡಿಕೆ ಶಿವಕುಮಾರ್ ಹಣ ಎಸೆದಿರುವುದು, ಹಣ ನೀಡದ ಬಿಜೆಪಿ ಮುಖಂಡರ ಮೇಲೆ ಕಾರ್ಯಕರ್ತರು ಗರಂ ಆಗಿರುವುದು ಗೊತ್ತೇ ಇದೆ. ಈ ನಡುವೆ ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಹಣ ನೀಡಲು ಮುಂದಾದ ಪ್ರಸಂಗವೂ ನಡೆಯಿತು. ಈ ಹಿಂದೆ ಜೆಡಿಎಸ್ ಮುಖಂಡರೊಬ್ಬರು ಪಕ್ಷದ ರಾಜ್ಯಾಧ್ಯಕ್ಷರು ಪ್ರಚಾರ ನಡೆಸುತ್ತಿದ್ದಾಗ ಸಿಎಂ ಇಬ್ರಾಹಿಂ ಅವರ ದೃಷ್ಟಿ ತೆಗೆದು ನೋಟುಗಳನ್ನು ಮೇಲಕ್ಕೆ ಎಸೆದಿದ್ದ ವಿಡಿಯೋ ಕೂಡ ವೈರಲ್ ಆಗಿತ್ತು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ