AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mudigere Election 2023 Winner: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಭರ್ಜರಿ ಗೆಲುವು

Nayana Motamma: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ನಯನಾ ಮೋಟಮ್ಮ, ಭರ್ಜರಿ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು.

Mudigere Election 2023 Winner: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಭರ್ಜರಿ ಗೆಲುವು
ನಯನಾ ಮೋಟಮ್ಮ
Follow us
ನಯನಾ ರಾಜೀವ್
|

Updated on:May 13, 2023 | 1:26 PM

ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ನಯನಾ ಮೋಟಮ್ಮ, ಭರ್ಜರಿ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ ಬಿಜೆಪಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ. ಈ ಕ್ಷೇತ್ರವನ್ನು ಹಿಂದೆ ಪ್ರತಿನಿಧಿಸಿದ್ದ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ಮೋಟಮ್ಮ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ.

ಈ ಕ್ಷೇತ್ರದಲ್ಲಿ ಕಾಡು ಪ್ರಾಣಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷವೇ ಪ್ರಮುಖ ವಿಷಯವಾಗಿದ್ದು, ಹಾಲಿ ಶಾಸಕರಾಗಿದ್ದ ಕುಮಾರಸ್ವಾಮಿ ವಿರುದ್ಧ ಸಾಕಷ್ಟು ಆಕ್ರೋಶಗಳು ಕೇಳಿಬಂದಿದ್ದವು. ಇದೇ ಕಾರಣಕ್ಕೆ ಬಿಜೆಪಿಯು ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೊನೆಯ ಕ್ಷಣದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಬದಲಿಸಿ ಕುಮಾರಸ್ವಾಮಿಗೆ ಟಿಕೆಟ್ ನೀಡಿದ್ದು, ವಿಶೇಷ.

2004, 2008 ಹಾಗೂ 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. 2013 ಹಾಗೂ 2019ರಲ್ಲಿ ಸೋಲು ಅನುಭವಿಸಿದ್ದರು. ಜನತಾದಳದಿಂದ ವಿಬಿ ನಿಂಗಯ್ಯ ಅವರು ಈ ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದರು. ಕೆಎಚ್​ ರಂಗನಾಥ್ ಪ್ರತಿನಿಧಿಸಿದ್ದ ಈ ಕ್ಷೇತ್ರದಲ್ಲಿ ಮೋಟಮ್ಮ ಮೂರು ಬಾರಿ ಗೆಲುವು ಸಾಧಿಸಿದ್ದರೆ, ಐದು ಬಾರಿ ಸೋತಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:23 pm, Sat, 13 May 23

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?