AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mudigere Election 2023 Winner: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಭರ್ಜರಿ ಗೆಲುವು

Nayana Motamma: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ನಯನಾ ಮೋಟಮ್ಮ, ಭರ್ಜರಿ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು.

Mudigere Election 2023 Winner: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಭರ್ಜರಿ ಗೆಲುವು
ನಯನಾ ಮೋಟಮ್ಮ
ನಯನಾ ರಾಜೀವ್
|

Updated on:May 13, 2023 | 1:26 PM

Share

ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ನಯನಾ ಮೋಟಮ್ಮ, ಭರ್ಜರಿ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ ಬಿಜೆಪಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ. ಈ ಕ್ಷೇತ್ರವನ್ನು ಹಿಂದೆ ಪ್ರತಿನಿಧಿಸಿದ್ದ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ಮೋಟಮ್ಮ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ.

ಈ ಕ್ಷೇತ್ರದಲ್ಲಿ ಕಾಡು ಪ್ರಾಣಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷವೇ ಪ್ರಮುಖ ವಿಷಯವಾಗಿದ್ದು, ಹಾಲಿ ಶಾಸಕರಾಗಿದ್ದ ಕುಮಾರಸ್ವಾಮಿ ವಿರುದ್ಧ ಸಾಕಷ್ಟು ಆಕ್ರೋಶಗಳು ಕೇಳಿಬಂದಿದ್ದವು. ಇದೇ ಕಾರಣಕ್ಕೆ ಬಿಜೆಪಿಯು ಅವರಿಗೆ ಟಿಕೆಟ್ ನಿರಾಕರಿಸಿತ್ತು. ಕೊನೆಯ ಕ್ಷಣದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಬದಲಿಸಿ ಕುಮಾರಸ್ವಾಮಿಗೆ ಟಿಕೆಟ್ ನೀಡಿದ್ದು, ವಿಶೇಷ.

2004, 2008 ಹಾಗೂ 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದರು. 2013 ಹಾಗೂ 2019ರಲ್ಲಿ ಸೋಲು ಅನುಭವಿಸಿದ್ದರು. ಜನತಾದಳದಿಂದ ವಿಬಿ ನಿಂಗಯ್ಯ ಅವರು ಈ ಕ್ಷೇತ್ರದಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದರು. ಕೆಎಚ್​ ರಂಗನಾಥ್ ಪ್ರತಿನಿಧಿಸಿದ್ದ ಈ ಕ್ಷೇತ್ರದಲ್ಲಿ ಮೋಟಮ್ಮ ಮೂರು ಬಾರಿ ಗೆಲುವು ಸಾಧಿಸಿದ್ದರೆ, ಐದು ಬಾರಿ ಸೋತಿದ್ದಾರೆ.

ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:23 pm, Sat, 13 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ