AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ದಾಖಲು

ಕಾಂಗ್ರೆಸ್​ ನಾಯಕರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದೂರು ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ದಾಖಲಿಸಿದೆ.

ಮೈಸೂರಿನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ದಾಖಲು
ರಮೇಶ್ ಬಿ. ಜವಳಗೇರಾ
|

Updated on: Apr 28, 2023 | 7:28 AM

Share

ಮುಖ್ಯಾಂಶಗಳು

  • ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ ಕಾನೂನು ಘಟಕ ಲಿಂ
  • ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ ಕಾನೂನು ಘಟಕ
  • ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Polls 2023 )ಪ್ರಚಾರ ಬಿರುಸುಪಡೆದುಕೊಂಡಿದ್ದು, ಮಾತಿನ ಭರಾಟೆಯಲ್ಲಿ ನಾಯಕರು ಏನೇನೋ ಹೇಳಿಕೆಗಳನ್ನು ನೀಡಿ ವಿವಾದಾತ್ಮಕ ಸೃಷ್ಟಿಸಿಕೊಳ್ಳುತ್ತಿದ್ದಾರೆ. ಹಾಗೇ ಆರೋಪ-ಪತ್ಯಾರೋಪ ಮಧ್ಯೆ ದೂರು ಪ್ರತಿದೂರುಗಳು ಸಹ ದಾಖಲಾಗುತ್ತಿವೆ. ಚುನಾವಣಾ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೋಮು ಗಲಭೆಗೆ ಪ್ರಚೋದನೆ ಆರೋಪಿಸಿ ಕಾಂಗ್ರೆಸ್ ದೂರು ನೀಡಿತ್ತು. ಇದೀಗ ಬಿಜೆಪಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(priyanka gandhi) ವಿರುದ್ಧ ದೂರು ದಾಖಲಿಸಿದೆ. ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಮೈಸೂರು ಗ್ರಾಮಾಂತರ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ.

ಇದನ್ನೂ ಓದಿ: ಅಮಿತ್ ಶಾ, ವಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ನಿಯೋಗದಿಂದ ದೂರು ದಾಖಲು

ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ವೇಳೆ ಹೇಳಿಕೆ ಪ್ರಿಯಾಂಕಾ ಗಾಂಧಿ ಅವರು ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ಇದು ನಿಯಮ ಉಲ್ಲಂಘನೆ ಆಗುತ್ತೆ. ಹಾಗೇ ಇಂತಹ ಹೇಳಿಕೆಗಳು ಚುನಾವಣಾ ಸಮಯದಲ್ಲಿ ಪಕ್ಷದ ಮತ್ತು ಅಭ್ಯರ್ಥಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದೆ.

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದು, ದ್ವೇಷ ಹರಡಲು ಪ್ರಯತ್ನ ನಡೆಸುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ಗುರುವಾರ ದೂರು ನೀಡಿದ್ದರು. ಕಾಂಗ್ರೆಸ್ ಮುಖಂಡರಾದ ರಣದೀಪ್ ಸಿಂಗ್ ಸುರ್ಜೆವಾಲಾ, ಡಾ ಪರಮೇಶ್ವರ್ ಮತ್ತು ಡಿಕೆ ಶಿವಕುಮಾರ್ ಅವರು, ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ನಾಯಕ ಅಮಿತ್ ಶಾ ಮತ್ತು ಬಿಜೆಪಿ ರ್ಯಾಲಿ ಆಯೋಜಕರ ವಿರುದ್ಧ ದೂರು ದಾಖಲಿಸಿದ್ದರು.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ