AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nargund Election Result: ನರಗುಂದ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ತೀವ್ರ ಪ್ರಯಾಸದ ಗೆಲವು ಸಾಧಿಸಿದ ಸಿಸಿ ಪಾಟೀಲ್

Nargund Assembly Election Result 2023 Live Counting Updates: ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಚಂದ್ರಕಾಂತಗೌಡ ಪಾಟೀಲ, ಕಾಂಗ್ರೆಸ್​ನಿಂದ ಬಸವರಡ್ಡಿ ಯಾವಗಲ್​ ಹಾಗೂ ಜೆಡಿಎಸ್​ನಿಂದ ರುದ್ರಗೌಡ ನಿಂಗನಗೌಡ ಪಾಟೀಲ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Nargund Election Result: ನರಗುಂದ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ತೀವ್ರ ಪ್ರಯಾಸದ ಗೆಲವು ಸಾಧಿಸಿದ ಸಿಸಿ ಪಾಟೀಲ್
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:May 13, 2023 | 6:08 PM

Share

Nargund Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ನರಗುಂದ ವಿಧಾನಸಭಾ ಕ್ಷೇತ್ರದಿಂದ (Nargund Assembly Constituency) ಬಿಜೆಪಿ ಅಭ್ಯರ್ಥಿ ಪ್ರಭಾವಿ ಸಚಿವ ಸಿಸಿ ಪಾಟೀಲ್ ತೀವ್ರ ಪ್ರಯಾಸದ ಗೆಲವು ಸಾಧಿಸಿದ್ದಾರೆ. ಪ್ರಭಾವಿ ಸಚಿವ ಸಿಸಿ ಪಾಟೀಲ್​ಗೆ ಮಾಜಿ ಸಚಿವ ಬಿಆರ್ ಯಾವಗಲ್ ತೀವ್ರ ಪೈಪೋಟಿ ನೀಡಿದ್ರು. ಪ್ರತಿಯೊಂದು ಸುತ್ತಿನಲ್ಲೂ ಕಾಂಗ್ರೆಸ್ ಬಿಜೆಪಿ ನಡುವ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಬಿಜೆಪಿ ಅಭ್ಯರ್ಥಿ ಸಿ ಸಿ ಪಾಟೀಲ್ 72835 ಮತ ಪಡೆದ್ರೆ, ಕಾಂಗ್ರೆಸ್ ಅಭ್ಯರ್ಥಿ ಬಿ ಆರ್ ಯಾವಗಲ್ 71044 ಮತಗಳು ಪಡೆದು ಸೋಲು ಒಪ್ಪಿಕೊಂಡಿದ್ದಾರೆ.

ಕಳೆದ 2018ರ ಚುನಾವಣೆಯಲ್ಲಿ ನರಗುಂದ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದ್ರಕಾಂತಗೌಡ ಪಾಟೀಲ ಅವರೇ ಗೆಲುವು ಸಾಧಿಸಿದ್ದರು. ಕಾಂಗ್ರೆಸ್​ ಅಭ್ಯರ್ಥಿಯಾಗಿದ್ದ ಬಸವರಡ್ಡಿ ಯಾವಗಲ್​ ಸುಮಾರು 7 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಬಸವರಡ್ಡಿ ಯಾವಗಲ್​ ಮತ್ತೆ ಟಿಕೆಟ್​ ಪಡೆಯುವಲ್ಲಿ ಯಶಸ್ವಿಯಾಗಿದ್ದರು.  ಕಳೆದ ಮೂರು ಚುನಾವಣೆಗಳಲ್ಲಿ ಎರಡು ಸಲ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹಾಗಾಗಿ ಇಲ್ಲಿ ಬಿಜೆಪಿಯದ್ದೇ ಪ್ರಾಬಲ್ಯವಿತ್ತು.

ಜೆಡಿಎಸ್​ ಪಕ್ಷ ನರಗುಂದ ವಿಧಾನಸಭಾ ಕ್ಷೇತ್ರದಿಂದ ಹೊಸ ಮುಖಕ್ಕೆ ಮಣೆ ಹಾಕಿದ್ದು, ಗಿರಿಮಲ್ಲನಗೌಡ ಈಶ್ವರಗೌಡ ಪಾಟೀಲ ಬದಲಿಗೆ ರುದ್ರಗೌಡ ನಿಂಗನಗೌಡ ಪಾಟೀಲರನ್ನು ಕಣಕ್ಕಿಳಿಸಿತ್ತು. ಆಮ್​ ಆದ್ಮಿಯ ಉಮೇದುವಾರರಾಗಿ ರಾಮಪ್ಪ ದ್ಯಾಮಪ್ಪ ಹೊನ್ನವರ ಕಣಕ್ಕಿಳಿದಿದ್ದರು.

ಈ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿದೆ. ಸುಮಾರು, 80 ಸಾವಿರ ಲಿಂಗಾಯತ, ಕುರುಬ 27 ಸಾವಿರ, ಮುಸ್ಲಿಮ್​ 25 ಸಾವಿರ, ಎಸ್ಟಿ 10 ಸಾವಿರ, ಬ್ರಾಹ್ಮಣ 5 ಸಾವಿರ ಮತದಾರರಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:38 am, Sat, 13 May 23

ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?