AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ

ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸಿಎಂ ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದ್ದು, ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ ಈ ಹಿನ್ನೆಲೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ
ಕಂಠೀರವ ಸ್ಟೇಡಿಯಂನಲ್ಲಿ ನಾಳೆಯ ಕಾರ್ಯಕ್ರಮಕ್ಕೆ ಸಿದ್ಧತೆ
ಗಂಗಾಧರ​ ಬ. ಸಾಬೋಜಿ
|

Updated on: May 19, 2023 | 12:26 PM

Share

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಲಾಗಿದೆ. ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ಬರುವ ವಿವಿಐಪಿಗಳಿಗೆ Z+, CRPF ASL ಪ್ರೊಟೆಕ್ಟ್​ರಿಂದ ಭದ್ರತೆ ಒದಗಿಸಲಾಗಿದೆ. ವಿವಿಧ 8 ರಾಜ್ಯದ ಮುಖ್ಯಮಂತ್ರಿಗಳಿಗೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ. ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಕೂಡ ಒದಗಿಸಲಾಗಿದೆ.

ಹೆಚ್ಚುವರಿ ಪೋಲಿಸರ ನಿಯೋಜನೆ

ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಲಾಗಿಸಲಾಗಿದ್ದು, ಎಂಟು ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್​ಗಳು, 1,500ಕ್ಕೂ ಹೆಚ್ಚು ಪೊಲೀಸರು ಮತ್ತು ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ನಾಳೆಯೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಿರುವ ಪೊಲೀಸರು, 2 ಗೇಟ್​​​ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ತಯಾರಿ ನಡೆದಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಒಂದು ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ.

ಪ್ರಮಾಣ ವಚನಕ್ಕೆ ಗಣ್ಯರ ದಂಡು

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್, ಹಿಮಾಚಲಪ್ರದೇಶ ಸಿಎಂ ಸುಖ್ ವಿಂದರ್ ಸಿಂಗ್ ಸುಖು, ಛತ್ತೀಸ್​​​​ಗಢ ಸಿಎಂ ಭೂಪೇಶ್ ಬಘೇಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್​ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪುದುಚೆರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮತ್ತು NCP ಮುಖ್ಯಸ್ಥ ಶರದ್​​ ಪವಾರ್​ ಆಗಮಿಸುತ್ತಿದ್ದಾರೆ.

ಸಿದ್ಧತೆ ಪರಿಶೀಲನೆ ಮಾಡಿದ ಹಿರಿಯ ಅಧಿಕಾರಿಗಳು

ನಾಳೆ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಯನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್​​ ಮತ್ತು ಸಂಚಾರಿ ವಿಶೇಷ ಆಯುಕ್ತ ಸಲೀಂ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು