AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ

ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸಿಎಂ ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದ್ದು, ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ ಈ ಹಿನ್ನೆಲೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ
ಕಂಠೀರವ ಸ್ಟೇಡಿಯಂನಲ್ಲಿ ನಾಳೆಯ ಕಾರ್ಯಕ್ರಮಕ್ಕೆ ಸಿದ್ಧತೆ
ಗಂಗಾಧರ​ ಬ. ಸಾಬೋಜಿ
|

Updated on: May 19, 2023 | 12:26 PM

Share

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಲಾಗಿದೆ. ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ಬರುವ ವಿವಿಐಪಿಗಳಿಗೆ Z+, CRPF ASL ಪ್ರೊಟೆಕ್ಟ್​ರಿಂದ ಭದ್ರತೆ ಒದಗಿಸಲಾಗಿದೆ. ವಿವಿಧ 8 ರಾಜ್ಯದ ಮುಖ್ಯಮಂತ್ರಿಗಳಿಗೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ. ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಕೂಡ ಒದಗಿಸಲಾಗಿದೆ.

ಹೆಚ್ಚುವರಿ ಪೋಲಿಸರ ನಿಯೋಜನೆ

ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಲಾಗಿಸಲಾಗಿದ್ದು, ಎಂಟು ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್​ಗಳು, 1,500ಕ್ಕೂ ಹೆಚ್ಚು ಪೊಲೀಸರು ಮತ್ತು ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ನಾಳೆಯೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಿರುವ ಪೊಲೀಸರು, 2 ಗೇಟ್​​​ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ತಯಾರಿ ನಡೆದಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಒಂದು ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ.

ಪ್ರಮಾಣ ವಚನಕ್ಕೆ ಗಣ್ಯರ ದಂಡು

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್, ಹಿಮಾಚಲಪ್ರದೇಶ ಸಿಎಂ ಸುಖ್ ವಿಂದರ್ ಸಿಂಗ್ ಸುಖು, ಛತ್ತೀಸ್​​​​ಗಢ ಸಿಎಂ ಭೂಪೇಶ್ ಬಘೇಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್​ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪುದುಚೆರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮತ್ತು NCP ಮುಖ್ಯಸ್ಥ ಶರದ್​​ ಪವಾರ್​ ಆಗಮಿಸುತ್ತಿದ್ದಾರೆ.

ಸಿದ್ಧತೆ ಪರಿಶೀಲನೆ ಮಾಡಿದ ಹಿರಿಯ ಅಧಿಕಾರಿಗಳು

ನಾಳೆ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಯನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್​​ ಮತ್ತು ಸಂಚಾರಿ ವಿಶೇಷ ಆಯುಕ್ತ ಸಲೀಂ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಪ್ರತಿಭಟನೆ: ಬಿಗಿ ಭದ್ರತೆ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ 21 ಕಡೆ ಇಡಿ ಮೆಗಾ ರೇಡ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
ವಿಟಿಯು ಸಿಂಡಿಕೇಟ್ ಸದಸ್ಯನಿಂದಲೇ ಪರೀಕ್ಷಾ ಗೋಲ್ಮಾಲ್!
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
‘ನೀ ನಂಗೆ ಅಲ್ಲವ’ ಸಿನಿಮಾಗೆ ‘ಬಿಗ್ ಬಾಸ್’ ಮಾಜಿಸ್ಪರ್ಧಿ ರಾಶಿಕಾ ವಿಶ್
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಕಳಪೆ ಆಹಾರ ಪೂರೈಸುವ ಹೋಟೆಲ್​ಗಳಿಗೆ 5 ಲಕ್ಷ ರೂ. ವರೆಗೆ ದಂಡ!
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಸಂಚಾರ ಮಾರ್ಗ ಬದಲಾವಣೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳಗೌರಿ ವ್ರತ ಇಂದು: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ