ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ

ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸಿಎಂ ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದ್ದು, ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ ಈ ಹಿನ್ನೆಲೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ
ಕಂಠೀರವ ಸ್ಟೇಡಿಯಂನಲ್ಲಿ ನಾಳೆಯ ಕಾರ್ಯಕ್ರಮಕ್ಕೆ ಸಿದ್ಧತೆ
Follow us
|

Updated on: May 19, 2023 | 12:26 PM

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಲಾಗಿದೆ. ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ಬರುವ ವಿವಿಐಪಿಗಳಿಗೆ Z+, CRPF ASL ಪ್ರೊಟೆಕ್ಟ್​ರಿಂದ ಭದ್ರತೆ ಒದಗಿಸಲಾಗಿದೆ. ವಿವಿಧ 8 ರಾಜ್ಯದ ಮುಖ್ಯಮಂತ್ರಿಗಳಿಗೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ. ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಕೂಡ ಒದಗಿಸಲಾಗಿದೆ.

ಹೆಚ್ಚುವರಿ ಪೋಲಿಸರ ನಿಯೋಜನೆ

ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಲಾಗಿಸಲಾಗಿದ್ದು, ಎಂಟು ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್​ಗಳು, 1,500ಕ್ಕೂ ಹೆಚ್ಚು ಪೊಲೀಸರು ಮತ್ತು ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ನಾಳೆಯೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಿರುವ ಪೊಲೀಸರು, 2 ಗೇಟ್​​​ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ತಯಾರಿ ನಡೆದಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಒಂದು ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ.

ಪ್ರಮಾಣ ವಚನಕ್ಕೆ ಗಣ್ಯರ ದಂಡು

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್, ಹಿಮಾಚಲಪ್ರದೇಶ ಸಿಎಂ ಸುಖ್ ವಿಂದರ್ ಸಿಂಗ್ ಸುಖು, ಛತ್ತೀಸ್​​​​ಗಢ ಸಿಎಂ ಭೂಪೇಶ್ ಬಘೇಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್​ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪುದುಚೆರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮತ್ತು NCP ಮುಖ್ಯಸ್ಥ ಶರದ್​​ ಪವಾರ್​ ಆಗಮಿಸುತ್ತಿದ್ದಾರೆ.

ಸಿದ್ಧತೆ ಪರಿಶೀಲನೆ ಮಾಡಿದ ಹಿರಿಯ ಅಧಿಕಾರಿಗಳು

ನಾಳೆ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಯನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್​​ ಮತ್ತು ಸಂಚಾರಿ ವಿಶೇಷ ಆಯುಕ್ತ ಸಲೀಂ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ