AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ

ಮೇ 20ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನೂತನ ಸಿಎಂ ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದ್ದು, ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ ಈ ಹಿನ್ನೆಲೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ.

ನಾಳೆ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ: 8 ರಾಜ್ಯಗಳಿಂದ ಬರುವ ಮುಖ್ಯಮಂತ್ರಿಗಳಿಗೆ Z+ ಭದ್ರತೆ
ಕಂಠೀರವ ಸ್ಟೇಡಿಯಂನಲ್ಲಿ ನಾಳೆಯ ಕಾರ್ಯಕ್ರಮಕ್ಕೆ ಸಿದ್ಧತೆ
ಗಂಗಾಧರ​ ಬ. ಸಾಬೋಜಿ
|

Updated on: May 19, 2023 | 12:26 PM

Share

ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರನ್ನು ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹೈಕಮಾಂಡ್​ ಘೋಷಣೆ ಮಾಡಲಾಗಿದೆ. ನಾಳೆ (ಮೇ 20) ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ (Kanteerava Stadium) ಪ್ರತಿಜ್ಞಾವಿಧಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೇಂದ್ರದ ಘಟಾನುಘಟಿ ನಾಯಕರು ಭಾಗಿಯಾಗಲಿದ್ದು, ಬರುವ ವಿವಿಐಪಿಗಳಿಗೆ Z+, CRPF ASL ಪ್ರೊಟೆಕ್ಟ್​ರಿಂದ ಭದ್ರತೆ ಒದಗಿಸಲಾಗಿದೆ. ವಿವಿಧ 8 ರಾಜ್ಯದ ಮುಖ್ಯಮಂತ್ರಿಗಳಿಗೆ Z+ ಮತ್ತು Z ಕ್ಯಾಟಗರಿ ಭದ್ರತೆ ನೀಡಲಾಗುತ್ತಿದೆ. ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್​ ಕೂಡ ಒದಗಿಸಲಾಗಿದೆ.

ಹೆಚ್ಚುವರಿ ಪೋಲಿಸರ ನಿಯೋಜನೆ

ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಒದಲಾಗಿಸಲಾಗಿದ್ದು, ಎಂಟು ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್​ಗಳು, 1,500ಕ್ಕೂ ಹೆಚ್ಚು ಪೊಲೀಸರು ಮತ್ತು ಸಂಚಾರ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ನಾಳೆಯೇ 28 ಶಾಸಕರು ಸಚಿವರಾಗಿ ಪದಗ್ರಹಣ ಸಾಧ್ಯತೆ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

ವಿವಿಐಪಿ ಎಂಟ್ರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಿರುವ ಪೊಲೀಸರು, 2 ಗೇಟ್​​​ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಕಂಠೀರವ ಕ್ರೀಡಾಂಗಣದಲ್ಲಿ ಭರ್ಜರಿ ತಯಾರಿ ನಡೆದಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಹೀಗಾಗಿ ಒಂದು ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ.

ಪ್ರಮಾಣ ವಚನಕ್ಕೆ ಗಣ್ಯರ ದಂಡು

ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್, ಹಿಮಾಚಲಪ್ರದೇಶ ಸಿಎಂ ಸುಖ್ ವಿಂದರ್ ಸಿಂಗ್ ಸುಖು, ಛತ್ತೀಸ್​​​​ಗಢ ಸಿಎಂ ಭೂಪೇಶ್ ಬಘೇಲ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್​ ಕುಮಾರ್, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ಪುದುಚೆರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮತ್ತು NCP ಮುಖ್ಯಸ್ಥ ಶರದ್​​ ಪವಾರ್​ ಆಗಮಿಸುತ್ತಿದ್ದಾರೆ.

ಸಿದ್ಧತೆ ಪರಿಶೀಲನೆ ಮಾಡಿದ ಹಿರಿಯ ಅಧಿಕಾರಿಗಳು

ನಾಳೆ ಪದಗ್ರಹಣ ಕಾರ್ಯಕ್ರಮದ ಸಿದ್ಧತೆಯನ್ನು ಹಿರಿಯ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್​​ ಮತ್ತು ಸಂಚಾರಿ ವಿಶೇಷ ಆಯುಕ್ತ ಸಲೀಂ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ