AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಮಾದರಿ ಎಫೆಕ್ಟ್: ಪ್ರಹ್ಲಾದ್ ಜೋಶಿ ಮನೆಗೆ ಟಿಕೆಟ್ ಆಕಾಂಕ್ಷಿಗಳ ದಂಡು, ಭರ್ಜರಿ ಲಾಬಿ

ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಗೆದ್ದಿರುವ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದ್ದು, ಆಕಾಂಕ್ಷಿಗಳು ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಲಾಬಿ ನಡೆಸಿದ್ದಾರೆ.

ಗುಜರಾತ್ ಮಾದರಿ ಎಫೆಕ್ಟ್: ಪ್ರಹ್ಲಾದ್ ಜೋಶಿ ಮನೆಗೆ ಟಿಕೆಟ್ ಆಕಾಂಕ್ಷಿಗಳ ದಂಡು, ಭರ್ಜರಿ ಲಾಬಿ
pralhad joshi
TV9 Web
| Edited By: |

Updated on:Dec 11, 2022 | 2:39 PM

Share

ಹುಬ್ಬಳ್ಳಿ: ಗುಜರಾತ್​ನಲ್ಲಿ ಕಳೆದ ಬಾರಿ ಗೆದ್ದ ಕ್ಷೇತ್ರಗಳಲ್ಲಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು. ಹೀಗಾಗಿ ಇದೇ ತಂತ್ರವನ್ನೂ ಕರ್ನಾಟಕದಲ್ಲಿ ಅನುಸರಿಸಲು ಬಿಜೆಪಿ ಮುಂದಾಗಿದೆಯಂತೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಗೆದ್ದಿರೋ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದ್ದು, ಹಲವರಿಗೆ ಟಿಕೆಟ್​ ಕೈತಪ್ಪು ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದ್ದು, ಟಿಕೆಟ್​ಗಾಗಿ ಲಾಬಿ ನಡೆಸಿದ್ದಾರೆ.

ಇದನ್ನೂ ಒದಿ: Karnataka Politics: ದಲಿತ ಬಲ ಪಂಗಡದ ಯುವ ನಾಯಕರ ಹುಡುಕಾಟದಲ್ಲಿ ರಾಜ್ಯ ಬಿಜೆಪಿ

2023ರ ವಿಧಾನಸಭೆ ಚುನಾವಣೆಗೆ ‌(Karnataka Assembly Elections 2023) ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಆಗಲೇ ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಇದಕ್ಕೆ ಪೂರಕವೆಂಬಂತೆ ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಅದರಲ್ಲೂ ಹೆಚ್ಚಾಗಿ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ.

ಹೈಕಮಾಂಡ್​ ಜೊತೆ ಪ್ರಹ್ಲಾದ್ ಜೋಶಿ ಉತ್ತಮ ಸಂಪರ್ಕ ಹೊಂದಿದ್ದಾರೆ. ಇದರಿಂದ ಇವರ ಮುಖಾಂತರ ಹೋದರೆ ಟಿಕೆಟ್​ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿ, ಗುರುಮಿಠಕಲ್, ಗಂಗಾವತಿ, ರೋಣ ಸೇರಿದಂತೆ ಅನೇಕ ಕ್ಷೇತ್ರಗಳಿಂದ ಆಗಮಿಸಿರುವ ಮುಖಂಡರುಗಳು ಟಿಕೆಟ್​ಗಾಗಿ ಲಾಬಿ ನಡೆಸಿದ್ದಾರೆ. ಅಲ್ಲದೇ ಕಾರ್ಯಕರ್ತರೊಂದಿಗೆ ಆಗಮಿಸಿ ಜೋಶಿ ಎದುರು ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಕಾರ್ಯತಂತ್ರ: ದಿಲ್ಲಿಗೆ ಬರುವಂತೆ ಕರ್ನಾಟಕ ಕಾಂಗ್ರೆಸ್ ನಾಯರಿಗೆ ಹೈಕಮಾಂಡ್ ದಿಢೀರ್ ಬುಲಾವ್

ಗುಜರಾತ್ ಮಾದರಿಯಲ್ಲಿ ಟಿಕೆಟ್​​

ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಟಿಕೆಟ್​​ ಹಂಚಿಕೆ ಮಾಡುವ ಬಗ್ಗೆ ಚಿಂತನೆಗಳು ನಡೆದಿವೆ. ಬಿಜೆಪಿ ಗೆದ್ದಿರುವ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದ್ದು, ಬಿಜೆಪಿ ಭದ್ರ ಕೋಟೆಯಂತಿರುವ ಕ್ಷೇತ್ರಗಳಲ್ಲಿ ಈ ಪ್ಲ್ಯಾನ್ ಮಾಡಿದ್ದಾರಂತೆ. ಹಾಗೇನೆ ವಿರೋಧಿ ಅಲೆ ಇರುವ ಕಡೆ ಮಾಹಿತಿ ಪಡೆದು ಟಿಕೆಟ್ ಹಂಚಿಕೆ ಮಾಡಲಾಗುತ್ತಂತೆ. ಒಂದು ವೇಳೆ ಶಾಸಕರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಇದ್ರೆ ಅಂಥವರಿಗೆ ಕಷ್ಟವಾಗಲಿದ್ದು, ಕಾರ್ಯಕರ್ತರ ಮಧ್ಯೆ ಹೊಂದಾಣಿಕೆ ಇಲ್ಲದೇ ಇದ್ರೆ ಟಿಕೆಟ್ ಮಿಸ್ ಆಗುತ್ತೆ ಎನ್ನಲಾಗಿದೆ. ಈ ಹಿನ್ಜೆಲೆಯಲ್ಲಿ ಟಿಕೆಟ್ ಖಾತ್ರಿಪಡಿಸಿಕೊಳ್ಳಲು ಉತ್ತರ ಕರ್ನಾಟಕ ಹಲವು ನಾಯಕರು ಜೋಶಿ ದುಂಬಾಲು ಬಿದ್ದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:34 pm, Sun, 11 December 22

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ