AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್ ಮಾದರಿ ಎಫೆಕ್ಟ್: ಪ್ರಹ್ಲಾದ್ ಜೋಶಿ ಮನೆಗೆ ಟಿಕೆಟ್ ಆಕಾಂಕ್ಷಿಗಳ ದಂಡು, ಭರ್ಜರಿ ಲಾಬಿ

ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಗೆದ್ದಿರುವ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದ್ದು, ಆಕಾಂಕ್ಷಿಗಳು ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಲಾಬಿ ನಡೆಸಿದ್ದಾರೆ.

ಗುಜರಾತ್ ಮಾದರಿ ಎಫೆಕ್ಟ್: ಪ್ರಹ್ಲಾದ್ ಜೋಶಿ ಮನೆಗೆ ಟಿಕೆಟ್ ಆಕಾಂಕ್ಷಿಗಳ ದಂಡು, ಭರ್ಜರಿ ಲಾಬಿ
pralhad joshi
TV9 Web
| Edited By: |

Updated on:Dec 11, 2022 | 2:39 PM

Share

ಹುಬ್ಬಳ್ಳಿ: ಗುಜರಾತ್​ನಲ್ಲಿ ಕಳೆದ ಬಾರಿ ಗೆದ್ದ ಕ್ಷೇತ್ರಗಳಲ್ಲಿ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಲಾಗಿತ್ತು. ಹೀಗಾಗಿ ಇದೇ ತಂತ್ರವನ್ನೂ ಕರ್ನಾಟಕದಲ್ಲಿ ಅನುಸರಿಸಲು ಬಿಜೆಪಿ ಮುಂದಾಗಿದೆಯಂತೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಗೆದ್ದಿರೋ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದ್ದು, ಹಲವರಿಗೆ ಟಿಕೆಟ್​ ಕೈತಪ್ಪು ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದ್ದು, ಟಿಕೆಟ್​ಗಾಗಿ ಲಾಬಿ ನಡೆಸಿದ್ದಾರೆ.

ಇದನ್ನೂ ಒದಿ: Karnataka Politics: ದಲಿತ ಬಲ ಪಂಗಡದ ಯುವ ನಾಯಕರ ಹುಡುಕಾಟದಲ್ಲಿ ರಾಜ್ಯ ಬಿಜೆಪಿ

2023ರ ವಿಧಾನಸಭೆ ಚುನಾವಣೆಗೆ ‌(Karnataka Assembly Elections 2023) ಇನ್ನೂ ನಾಲ್ಕೈದು ತಿಂಗಳು ಬಾಕಿ ಇದ್ದು, ಆಗಲೇ ಬಿಜೆಪಿಯಲ್ಲಿ ಟಿಕೆಟ್​ ಫೈಟ್ ಶುರುವಾಗಿದೆ. ಇದಕ್ಕೆ ಪೂರಕವೆಂಬಂತೆ ಹುಬ್ಬಳ್ಳಿಯ ಮಯೂರ ಎಸ್ಟೇಟ್‌ನಲ್ಲಿರುವ ಪ್ರಹ್ಲಾದ್ ಜೋಶಿ ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದಂಡು ಆಗಮಿಸಿದೆ. ಅದರಲ್ಲೂ ಹೆಚ್ಚಾಗಿ ಉತ್ತರ ಕರ್ನಾಟಕದ ಹಲವು ಕ್ಷೇತ್ರಗಳಿಂದ ಮುಖಂಡರು ಬಂದಿದ್ದು, ಮುಂದಿನ ವಿಧಾನಸಭೆ ಚುನಾವಣೆ ಟಿಕೆಟ್‌ಗಾಗಿ ಮನವಿ ಮಾಡಿದ್ದಾರೆ.

ಹೈಕಮಾಂಡ್​ ಜೊತೆ ಪ್ರಹ್ಲಾದ್ ಜೋಶಿ ಉತ್ತಮ ಸಂಪರ್ಕ ಹೊಂದಿದ್ದಾರೆ. ಇದರಿಂದ ಇವರ ಮುಖಾಂತರ ಹೋದರೆ ಟಿಕೆಟ್​ ಸಿಗುವ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾದಗಿರಿ, ಗುರುಮಿಠಕಲ್, ಗಂಗಾವತಿ, ರೋಣ ಸೇರಿದಂತೆ ಅನೇಕ ಕ್ಷೇತ್ರಗಳಿಂದ ಆಗಮಿಸಿರುವ ಮುಖಂಡರುಗಳು ಟಿಕೆಟ್​ಗಾಗಿ ಲಾಬಿ ನಡೆಸಿದ್ದಾರೆ. ಅಲ್ಲದೇ ಕಾರ್ಯಕರ್ತರೊಂದಿಗೆ ಆಗಮಿಸಿ ಜೋಶಿ ಎದುರು ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: ಮುಂದಿನ ಚುನಾವಣೆಗೆ ಕಾರ್ಯತಂತ್ರ: ದಿಲ್ಲಿಗೆ ಬರುವಂತೆ ಕರ್ನಾಟಕ ಕಾಂಗ್ರೆಸ್ ನಾಯರಿಗೆ ಹೈಕಮಾಂಡ್ ದಿಢೀರ್ ಬುಲಾವ್

ಗುಜರಾತ್ ಮಾದರಿಯಲ್ಲಿ ಟಿಕೆಟ್​​

ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಸಹ ಟಿಕೆಟ್​​ ಹಂಚಿಕೆ ಮಾಡುವ ಬಗ್ಗೆ ಚಿಂತನೆಗಳು ನಡೆದಿವೆ. ಬಿಜೆಪಿ ಗೆದ್ದಿರುವ ಕ್ಷೇತ್ರಗಳಲ್ಲಿ ಹೊಸಮುಖಗಳಿಗೆ ಮಣೆ ಹಾಕಲು ಪ್ಲ್ಯಾನ್ ರೂಪಿಸಲಾಗಿದ್ದು, ಬಿಜೆಪಿ ಭದ್ರ ಕೋಟೆಯಂತಿರುವ ಕ್ಷೇತ್ರಗಳಲ್ಲಿ ಈ ಪ್ಲ್ಯಾನ್ ಮಾಡಿದ್ದಾರಂತೆ. ಹಾಗೇನೆ ವಿರೋಧಿ ಅಲೆ ಇರುವ ಕಡೆ ಮಾಹಿತಿ ಪಡೆದು ಟಿಕೆಟ್ ಹಂಚಿಕೆ ಮಾಡಲಾಗುತ್ತಂತೆ. ಒಂದು ವೇಳೆ ಶಾಸಕರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಇದ್ರೆ ಅಂಥವರಿಗೆ ಕಷ್ಟವಾಗಲಿದ್ದು, ಕಾರ್ಯಕರ್ತರ ಮಧ್ಯೆ ಹೊಂದಾಣಿಕೆ ಇಲ್ಲದೇ ಇದ್ರೆ ಟಿಕೆಟ್ ಮಿಸ್ ಆಗುತ್ತೆ ಎನ್ನಲಾಗಿದೆ. ಈ ಹಿನ್ಜೆಲೆಯಲ್ಲಿ ಟಿಕೆಟ್ ಖಾತ್ರಿಪಡಿಸಿಕೊಳ್ಳಲು ಉತ್ತರ ಕರ್ನಾಟಕ ಹಲವು ನಾಯಕರು ಜೋಶಿ ದುಂಬಾಲು ಬಿದ್ದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:34 pm, Sun, 11 December 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು